![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಗುಳೇದಗುಡ್ಡ: ನಿರ್ಮಿಸಿದ ಆರೇ ತಿಂಗಳಲ್ಲಿ ರಸ್ತೆ ಹಾಳು..!
Team Udayavani, Jun 7, 2024, 2:20 PM IST
![ಗುಳೇದಗುಡ್ಡ: ನಿರ್ಮಿಸಿದ ಆರೇ ತಿಂಗಳಲ್ಲಿ ರಸ್ತೆ ಹಾಳು..!](https://www.udayavani.com/wp-content/uploads/2024/06/Bagalkote-620x373.jpg)
ಉದಯವಾಣಿ ಸಮಾಚಾರ
ಗುಳೇದಗುಡ್ಡ: ಪಟ್ಟಣದ ಸಾಲೇಶ್ವರ ತೇರಿನ ಮನೆಯ ಹಿಂದುಗಡೆ ನಗರೋತ್ಥಾನ ಯೋಜನೆ ಅಡಿಯಲ್ಲಿ ನಿರ್ಮಿಸಿದ ರಸ್ತೆ ಕಳಪೆಯಿಂದ ಕೂಡಿದ್ದು, ರಸ್ತೆ ನಿರ್ಮಿಸಿದ 6 ತಿಂಗಳಲ್ಲೇ ಹಾಳಾಗಿ ಹೋಗುತ್ತಿದೆ. ರಸ್ತೆ ನಿರ್ಮಾಣದ ಸಮಯದಲ್ಲಿ ಡಿಗ್ಗಿಂಗ್ ಮಾಡಿ ರಸ್ತೆ ನಿರ್ಮಿಸಬೇಕು. ಅಧಿಕಾರಿಗಳನ್ನು ಕೇಳಿದರೆ ಡಿಗ್ಗಿಂಗ್ ಮಾಡಿಯೇ ಮಾಡುತ್ತೇವೆ ಅಂತಾ ಹೇಳಿದ್ದಾರೆ ಆದರೆ ಆ ರೀತಿ ರಸ್ತೆಯ ನಿರ್ಮಿಸಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ರಸ್ತೆ ನಿರ್ಮಿಸುವ ಸಮಯದಲ್ಲಿ ಸ್ಥಳೀಯರು ರಸ್ತೆ ಸರಿಯಾಗಿ ಮಾಡುತ್ತಿಲ್ಲ ಅಂತಾ ತಕರಾರು ತೆಗೆದಿದ್ದರು. ಆಗ ಅಧಿಕಾರಿಗಳು ಉತ್ತಮ ರೀತಿಯಲ್ಲಿ ನಿರ್ಮಿಸುತ್ತೇವೆಂದುತಿಳಿಸಿದ್ದರಿಂದ ಸುಮ್ಮನಾಗಿದ್ದರು. ಆದರೆ ರಸ್ತೆ ನಿರ್ಮಿಸಿ ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೇ 4 ಅಡಿಗಳಷ್ಟು ರಸ್ತೆ ಒಡೆದು ಹೋಗಿದೆ. ಜತೆಗೆ ರಸ್ತೆ ಮಧ್ಯದಲ್ಲಿರುವ ಒಳಚರಂಡಿ ಮ್ಯಾನ್ ಹೋಲ್ಗಳು ಸಹ ಒಡೆದು ಹೋಗುತ್ತಿವೆ.
ಹೆಚ್ಚಿದ ವಾಹನ ಸಂಚಾರ: ಪವಾರ್ ಕ್ರಾಸ್ ಹತ್ತಿರ ರಸ್ತೆ ನಿರ್ಮಿಸುತ್ತಿರುವುದರಿಂದ ಮುಖ್ಯ ರಸ್ತೆ ಮೂಲಕ ಬಾಗಲಕೋಟೆ, ಇಲಕಲ್, ಕುಷ್ಟಗಿ, ಶಿರೂರ ಸೇರಿದಂತೆ ಇನ್ನಿತರೆ ನಗರಗಳಿಗೆ ತೆರಳುವ ವಾಹನಗಳು ಸಹ ಕಳೆದ 15 ದಿನಗಳಿಂದ ಈ ಮೂಲಕವೇ ಸಂಚರಿಸುತ್ತಿದ್ದು, ರಸ್ತೆ ಮತ್ತಷ್ಟು ಹಾಳಾಗುತ್ತಿದೆ. ಈ ರಸ್ತೆ ನಿರ್ಮಾಣಕ್ಕಾಗಿ ಎಷ್ಟು ವರ್ಷಗಳಿಂದ ಮನವಿ ಮಾಡುತ್ತ ಬಂದಿದ್ದೇವೆ. ವಾಹನ ಸಂಚಾರ ದಿನೇ ದಿನೇ ಹೆಚ್ಚಾಗಿ ರಸ್ತೆ ಸಂಪೂರ್ಣ ಹಾಳಾಗಿ ಹೋದರೆ ಯಾರು ಹೊಣೆ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.
ನಾವು ರಸ್ತೆ ಮಾಡುವಾಗಲೇ ಸರಿಯಾಗಿ ಡಿಗ್ಗಿಂಗ್ ಮಾಡಿ, ಈ ಕೆಲಸ ಸರಿಯಾಗುತ್ತಿಲ್ಲ ಅಂತಾ ಹೇಳಿದ್ದೆವು. ಅಧಿಕಾರಿಗಳು ಸರಿಯಾಗಿ ಮಾಡುತ್ತೇವೆ ಅಂತಾ ಹೇಳಿ ರಸ್ತೆ ಮಾಡಿದರು. ಆದರೆ ರಸ್ತೆ ಸರಿಯಾಗಿ ನಿರ್ಮಿಸಿಲ್ಲ. ಈಗ ವಾಹನ ಸಂಚಾರ ಹೆಚ್ಚಿದ್ದು, ರಸ್ತೆ ಮತ್ತಷ್ಟು ಹಾಳಾಗುತ್ತಿದೆ. ಇದಕ್ಕೆ ಯಾರು ಹೊಣೆ.
*ಮಲ್ಲಿಕಾರ್ಜುನ ಧೋತರದ, ಸ್ಥಳೀಯ ನಿವಾಸಿ
ನಾನು ಆ ರಸ್ತೆಯ ಬಗ್ಗೆ ಮಾಹಿತಿ ಪಡೆದು ಅಭಿಯಂತರರನ್ನು ಸ್ಥಳಕ್ಕೆ ಭೇಟಿ ಕೊಟ್ಟು ವರದಿ ನೀಡಲು ಸೂಚಿಸುತ್ತೇನೆ. ಅಲ್ಲದೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆದಾರರಿಗೆ ಸೂಚಿಸಲು ಅಭಿಯಂತರರಿಗೆ ತಿಳಿಸುವೆ.
*ವಿಜಯ ಮೆಕ್ಕಳಕಿ,ಯೋಜನಾಧಿಕಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ಬಾಗಲಕೋಟೆ
ನಾನು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಬಗ್ಗೆ ಪರಿಶೀಲಿಸುತ್ತೇನೆ. ಈ ಬಗ್ಗೆ ಮೇಲಾಧಿ ಕಾರಿಗಳಿಗೂ ವರದಿ ನೀಡುತ್ತೇನೆ.
*ಹುಣಸಿಗಿಡದ, ಎಇಇ, ಜಿಲ್ಲಾ ನಗರಾಭಿವೃದ್ಧಿ ಕೋಶ, ಬಾಗಲಕೋಟೆ
*ಮಲ್ಲಿಕಾರ್ಜುನ ಕಲಕೇರಿ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.