ಶಾಸಕ ಮೇಟಿ ರಾಸಲೀಲೆ: 8 ತಿಂಗಳ ಬಳಿಕ ಸಂತ್ರಸ್ತೆ ಹಾಜರ್
Team Udayavani, Jul 18, 2017, 3:45 AM IST
ಬಾಗಲಕೋಟೆ: ಮಾಜಿ ಸಚಿವ, ಶಾಸಕ ಎಚ್.ವೈ. ಮೇಟಿ ರಾಸಲೀಲೆ ಪ್ರಕರಣಕ್ಕೆ ಕ್ಲೀನ್ ಚಿಟ್ ಸಿಕ್ಕಿದ್ದು, ವಿವಾದವಾಗಿ ಎಂಟು ತಿಂಗಳ ಬಳಿಕ ಪ್ರಕರಣದಲ್ಲಿ ಪ್ರಮುಖವಾಗಿ ಹೆಸರು ಕೇಳಿಬಂದಿದ್ದ ಸಂತ್ರಸ್ತ ಮಹಿಳೆ, ಸೋಮವಾರ ಕರ್ತವ್ಯಕ್ಕೆ ಹಾಜರಾಗಲೆಂದು ಆಯುಷ್ ಆಸ್ಪತ್ರೆಯಲ್ಲಿ ಹಾಜರಾಗಿದ್ದಾರೆ. ಎಂಟು ತಿಂಗಳ ಹಿಂದೆ ಅಬಕಾರಿ ಸಚಿವರಾಗಿದ್ದ ಮೇಟಿ ಅವರೊಂದಿಗೆ ಮಹಿಳೆ ರಾಸಲೀಲೆಯಲ್ಲಿ ತೊಡಗಿದ್ದಾರೆಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ವಿವಾದದಿಂದ ಮೇಟಿ ಅವರು ತಮ್ಮ ಸಚಿವ ಸ್ಥಾನವನ್ನು ತೊರೆದಿದ್ದರು. ಅಂದಿನಿಂದ ಇಲ್ಲಿಯವರೆಗೆ ಮಹಿಳೆ ಎಲ್ಲಿದ್ದಾರೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಈ ಕುರಿತು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ, ಸರಕಾರಕ್ಕೆ ವರದಿ ಸಲ್ಲಿಸಿದ್ದರು. ರಾಜಕೀಯವಾಗಿ ಮೇಟಿ ಅವರ ಹೆಸರು ಕೆಡಿಸಲು ಕೆಲವರು ಮಾಡಿದ ಕುತಂತ್ರ ಎಂದು ಸಿಐಡಿ ಕ್ಲೀನ್ಚಿಟ್ ನೀಡಿತ್ತು.
ಎಂಟು ತಿಂಗಳಿಂದ ರಜೆ ಪಡೆಯದೆ ಅನಧಿಕೃತವಾಗಿ ಗೈರು ಹಾಜರಾಗಿದ್ದು, ನೀವು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದುಕೊಂಡು ಬಂದರೆ ಮಾತ್ರ, ಮೊದಲಿನ ಹುದ್ದೆಗೆ ಹಾಜರಾಗಲು ಅವಕಾಶ ಕೊಡಲಾಗುವುದು ಎಂದು ಡಾ| ಮಹೇಶ ಗುಗ್ಗರಿ ಮಹಿಳೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ