ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ
Team Udayavani, Jun 1, 2023, 8:41 PM IST
ಮಹಾಲಿಂಗಪುರ: ಗುರುವಾರ ಸಂಜೆ 7 ರಿಂದ 8 ರವರೆಗೆ ಪಟ್ಟಣದಲ್ಲಿ ಭಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ.
ಈ ಮೂಲಕ ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆ ನಿಟ್ಟುಸಿರು ಬೀಡುವಂತಾಗಿದೆ.
ಬಿರುಗಾಳಿ : ಮಳೆಯ ಜೊತೆಗೆ ಬೀಸಿದ ಬಿರುಗಾಳಿಯಿಂದಾಗಿ ಪಟ್ಟಣದ ಬಸವನಗರ, ಬುದ್ನಿಪಿಡಿ, ಕೆಂಗೇರಿಮಡ್ಡಿ ಸೇರಿದಂತೆ ಹಲವು ಭಾಗಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಯಿತು.
ವಿಪರೀತ ಗಾಳಿಯಿಂದಾಗಿ ಸುತ್ತಮುತ್ತಲಿನ ಗ್ರಾಮಗಳ ತೋಟಗಳಲ್ಲಿನ ತಗಡು ಶೀಟುಗಳು ಹಾರಿ ಹೋಗಿದ್ದು ರೈತರು ಪರದಾಡುವಂತಾಯಿತು.
ಮರ ಬಿದ್ದು ಟ್ರಾಫಿಕ್ ಜಾಮ್: ವಿಪರೀತ ಗಾಳಿಗೆ ರಬಕವಿ ರಸ್ತೆಯ ಗಿರಿಮಲ್ಲೆಶ್ವರ ಆಶ್ರಮ ಹತ್ತಿರ ಮತ್ತು ಪೊಲೀಸ್ ಠಾಣೆಯ ಬಳಿ ಬೃಹತ್ ಮರಗಳು ಬಿದ್ದ ಪರಿಣಾಮ ಕೆಲವು ಗಂಟೆಗಳವರೆಗೆ ಟ್ರಾಫಿಕ್ ಜಾಮ್ ಆಗಿ, ವಾಹನ ಸವಾರರು ಪರದಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ