ಹಾನಾಪುರ ಎಲ್ಟಿ ಸೀಲ್ಡೌನ್
Team Udayavani, Jul 7, 2020, 3:58 PM IST
ಗುಳೇದಗುಡ್ಡ: ಹಾನಾಪುರ ಎಲ್.ಟಿ. ಗ್ರಾಮಕ್ಕೆ ಗೋವಾದಿಂದ ಬಂದು ಹೋಮ್ ಕ್ವಾರಂಟೈನ್ನಲ್ಲಿದ್ದ ಯುವಕ ಮೃತಪಟ್ಟ ಘಟನೆ ನಡೆದಿದ್ದು, ಕೋವಿಡ್ ಸಂಶಯದ ಮೇಲೆ ಗ್ರಾಮದ ಎಲ್ಲ ರಸ್ತೆಗಳನ್ನು ಸೀಲ್ಡೌನ್ ಮಾಡಲಾಗಿದೆ.
ಮೃತ ಯುವಕನ ಮನೆಯ ಸುತ್ತಲಿನ ಪ್ರದೇಶದ ಸುಮಾರು 42 ಜನರನ್ನು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಮೃತ ಯುವಕನ ಗಂಟಲು ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗುಳೇದಗುಡ್ಡ ತಾಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಕೋವಿಡ್-19 ನಿಯಮಾವಳಿ ಪ್ರಕಾರ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮೃತಪಟ್ಟ ಯುವಕನ ಮನೆ ಹಾಗೂ ಸುತ್ತಮುತ್ತಲಿನ ಮನೆಗಳಿಗೆ ಔಷಧಿ ಸಿಂಪಡಿಸಲಾಗಿದೆ. ಪ್ರದೇಶವನ್ನು ಬಂದ್ ಮಾಡಲಾಗಿದೆ ಎಂದು ತಹಶೀಲ್ದಾರ್ ಜಿ.ಎಂ. ಕುಲಕರ್ಣಿ ತಿಳಿಸಿದ್ದಾರೆ.
ಕೋವಿಡ್ ವೈರಸ್ ಸಂಶಯದಿಂದ ಗ್ರಾಮದ ಹಲವು ಮನೆಗಳಿಗೆ ಬೀಗ ಹಾಕಿದ್ದೇವೆ. ಮೃತ ವ್ಯಕ್ತಿಯ ಮನೆ ಸುತ್ತಲಿನ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಸುತ್ತಲಿನ ಮನೆಗಳ ಜನರನ್ನು ಗ್ರಾಮದ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿಲ್ಪಾ ರ್ಯಾಖೀ ಸುದ್ದಿಗಾರರಿಗೆ ತಿಳಿಸಿದರು. ಹಾನಾಪುರ ಎಲ್.ಟಿ. ಗ್ರಾಮಕ್ಕೆ ಪಿಎಸ್ಐ ಲಕ್ಷ್ಮೀಕಾಂತ ಬಾನಿಕೋಲ, ಡಾ| ಕಲ್ಲೊಳ್ಳೆಪ್ಪ ಗಾಜಿ, ಪಿಡಿಒ ಶಿಲ್ಪಾ ರ್ಯಾಕಿ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್