ಕಟಾವು ವೆಚ್ಚ ಸಮಸ್ಯೆ: ಶೀಘ್ರ ಸಮಿತಿ ರಚನೆ

•ಕಬ್ಬು ಬೆಳೆಗಾರರೊಂದಿಗೆ ಸಕ್ಕರೆ ಸಚಿವರ ಸಭೆ•ಪ್ರತಿ ಕಾರ್ಖಾನೆಯಲ್ಲಿ ಸರ್ಕಾರವೇ ತೂಕದ ಯಂತ್ರ ಅಳವಡಿಸಲಿ

Team Udayavani, Jul 3, 2019, 12:23 PM IST

bk-tdy-3..

ಬಾಗಲಕೋಟೆ: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಕ್ಕರೆ ಸಚಿವ ಆರ್‌.ಬಿ. ತಿಮ್ಮಾಪುರ ರೈತರ ಸಭೆ ನಡೆಸಿದರು.

ಬಾಗಲಕೋಟೆ: ಕಾರ್ಖಾನೆಗಳು ರೈತರಿಂದ ಕಬ್ಬು ಕಟಾವು ಮತ್ತು ಸಾರಿಗೆ (ಎಚ್ಎನ್‌ಟಿ) ವೆಚ್ಚವನ್ನು ಒಂದೊಂದು ಕಾರ್ಖಾನೆ ಒಂದೊಂದು ರೀತಿ ಪಡೆಯುತ್ತಿದ್ದು, ಇದು ಕಾರ್ಖಾನೆ ಮತ್ತು ರೈತರ ಮಧ್ಯೆ ಸಮಸ್ಯೆಗೆ ಕಾರಣವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ನೀಡಲು ಪರಿಶೀಲನಾ ಸಮಿತಿ ರಚಿಸಲಾಗುವುದು ಎಂದು ಸಕ್ಕರೆ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು.

ನವನಗರದ ಹೊಸ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲೆಯ ಕಬ್ಬು ಬೆಳೆಗಾರರ ಸಭೆಯಲ್ಲಿ ಅವರು ಮಾತನಾಡಿದರು.

ಕಬ್ಬು ಕಟಾವು ವೆಚ್ಚಕ್ಕಿಂತ ಸಾರಿಗೆ ವೆಚ್ಚ ಹೆಚ್ಚಳವಾಗಬಾರದು ಎಂಬ ನಿಯಮವಿದೆ. ಆದರೆ, ಎಲ್ಲಾ ಸಕ್ಕರೆ ಕಾರ್ಖಾನೆಗಳು, ಕಟಾವಿಗಿಂತ ಸಾರಿಗೆ ವೆಚ್ಚವನ್ನೇ ಹೆಚ್ಚು ಪಡೆಯುತ್ತಿವೆ. ಹೀಗಾಗಿ ಸರ್ಕಾರದ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡುವ ಜತೆಗೆ, ನಿರ್ದಿಷ್ಟ ಮತ್ತು ಕಡ್ಡಾಯ ಮಾನದಂಡ ರೂಪಿಸಲು ಸಕ್ಕರೆ ಕಾರ್ಖಾನೆಗಳು, ರೈತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಳಗೊಂಡ ಒಂದು ಕಮೀಟಿ ರಚಿಸಲಾಗುವುದು. ಕಮೀಟಿಯ ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತೂಕ ಯಂತ್ರ ಅಳವಡಿಸಿ:

ಕಬ್ಬು ಬೆಳೆಗಾರ ಪ್ರಮುಖರು ಮಾತನಾಡಿ, ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲಿ ಅವರೇ ಸ್ಥಾಪಿಸಿದ ತೂಕದ ಯಂತ್ರ (ವೇಬ್ರಿಜ್‌) ಇವೆ. ಕಬ್ಬು ತೂಕದಲ್ಲೇ ಕಾರ್ಖಾನೆಯವರು ನಮಗೆ ಮೋಸ ಮಾಡುತ್ತಿದ್ದಾರೆ. ಹೀಗಾಗಿ ಸರ್ಕಾರವೇ ಎಲ್ಲ ಕಾರ್ಖಾನೆಗಳಲ್ಲಿ ವೇಬ್ರಿಜ್‌ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ಎಫ್‌ಆರ್‌ಪಿ ನಿಯಮಾವಳಿ ಪ್ರಕಾರ, ಉತ್ತರ ಕರ್ನಾಟಕ ಭಾಗದ ಸಕ್ಕರೆ ಕಾರ್ಖಾನೆಗಳೇ ಎಚ್ಎನ್‌ಟಿ ವೆಚ್ಚ ಭರಿಸಬೇಕು. ಎಫ್‌ಆರ್‌ಪಿ ದರದ ಅನ್ವಯ ಕಬ್ಬು ದರ ನೀಡುವುದಾಗಿ ಹಿಂದೆ ಎಲ್ಲ ಕಾರ್ಖಾನೆಗಳು, ಜಿಲ್ಲಾಧಿಕಾರಿಗೆ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದಾರೆ. ಆದರೆ, ಈಗ ಎಚ್ಎನ್‌ಟಿ ಕಡಿತಗೊಳಿಸಿ, ಕಬ್ಬು ಬಾಕಿ ಹಣ ಕೊಡುತ್ತಿದ್ದಾರೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತದೆ. ಎಚ್.ಎನ್‌.ಟಿ ದರ ಕಡಿತಗೊಳಿಸದೇ ಬಾಕಿ ಕೊಡಿಸಬೇಕು ಎಂದು ಒತ್ತಾಯಿಸಿದರು. ಎಲ್ಲ ಕಾರ್ಖಾನೆಗಳು ಪ್ರತಿ ವರ್ಷ ಸಕ್ಕರೆ ಇಳುವರಿ ನೀಡುತ್ತಾರೆ. ಇದನ್ನು ಮೂರು ವರ್ಷಕ್ಕೊಮ್ಮೆ ಮಾಡಬೇಕು ಎಂದೂ ರೈತರು ಆಗ್ರಹಿಸಿದರು. ರೈತರ ಸಲಹೆ ಪಡೆದ ಸಚಿವ ತಿಮ್ಮಾಪುರ, ಬೆಂಗಳೂರಿನಲ್ಲಿ ಜು.3ರಂದು ನಡೆಯುವ ಸಭೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ರೈತ ಮುಖಂಡರಾದ ಆರ್‌.ಎಸ್‌. ಪಾಟೀಲ, ಗೋವಿಂದಪ್ಪ ಗುಜ್ಜನವರ, ಬಿ.ವಿ. ಹೊಸಮನಿ, ಆರ್‌.ಟಿ. ಬುದ್ನಿ, ಮಲ್ಲಪ್ಪ ಹುಲ್ಯಾಳ, ಭೀಮಪ್ಪ, ಸದಾಶಿವ, ಕೆ.ಟಿ. ಪಾಟೀಲ, ಡಾ|ಕೆ.ಆರ್‌. ಮೊಕಾಶಿ, ಡಾ|ವಿ.ಕೆ. ಹೊಸಟ್ಟಿ, ರಂಗನಗೌಡ ಪಾಟೀಲ, ಕೃಷ್ಣಪ್ಪ ಸಾರವಾಡ, ಆರ್‌.ಬಿ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.