ತಾನೇ ಬೆಳೆದ ಬೆಳೆಗೆ ಬೆಲೆ ಕಟ್ಟುವ ಹಕ್ಕಿಲ್ಲ!

ಹೋರಾಟ ಮಾಡಿಯೇ ದರ ಪಡೆಯುವ ಅನಿವಾರ್ಯತೆ ; ಕಾರ್ಖಾನೆ ಬೆಳೆದಂತೆ ರೈತರು ಬೆಳೆಯುತ್ತಿಲ್ಲ

Team Udayavani, Oct 31, 2022, 4:37 PM IST

17

ಬಾಗಲಕೋಟೆ: ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸಲು ಹೋಗಿ, ಅದಕ್ಕೊಂದು ಎಂಆರ್‌ಪಿ ದರವಿದೆ. ಯಾವುದೇ ಕಂಪನಿ, ಉದ್ಯಮಿಗಳು ತಾವು ಉತ್ಪಾದಿಸುವ ವಸ್ತುಗಳಿಗೆ ನಿರ್ದಿಷ್ಟ ಬೆಲೆ ನಿರ್ಧರಿಸುತ್ತಾರೆ. ಆದರೆ, ರೈತರು, ತಾವೇ ಕಷ್ಟಪಟ್ಟು ಬೆಳೆದ ಬೆಳೆಗೆ ಬೆಲೆ ಕಟ್ಟುವ ಅಥವಾ ದರ ನಿಗದಿಪಡಿಸಿ ಮಾರುಕಟ್ಟೆಗೆ ಕಳುಹಿಸುವ ಹಕ್ಕಿಲ್ಲ. ಇದು ನಮ್ಮ ದು:ಸ್ಥಿತಿ…

ಹೀಗೆ ಆಕ್ರೋಶ ವ್ಯಕ್ತಪಡಿಸಿದವರು ಜಿಲ್ಲೆಯ ಕಬ್ಬು ಬೆಳೆಗಾರರು. ಕಬ್ಬು ಬೆಳೆಗಾರರು, ಪ್ರತಿ ವರ್ಷವೂ ತಾವು ಬೆಳೆದ ಕಬ್ಬಿಗೆ ದರ ನಿಗದಿ ಮಾಡಿ ಎಂದು ಹೋರಾಟ ಮಾಡುವುದು ತಪ್ಪಿಲ್ಲ.

ಕಬ್ಬು ಬೆಳೆಗಾರರಿಗೆ ನಿರ್ದಿಷ್ಟ ಬೆಲೆ ಸಿಗಲಿ ಹಾಗೂ ಪ್ರತಿ ವರ್ಷವೂ ನಡೆಯುವ ಹೋರಾಟ ಕೊನೆಗೊಳ್ಳಲಿ ಎಂಬ ಕಾರಣಕ್ಕಾಗಿ ಕಳೆದ 2013ರಲ್ಲಿ ಜಗದೀಶ ಶೆಟ್ಟರ ಅವರು ಸಿಎಂ ಆಗಿದ್ದಾಗ, ರಾಜ್ಯದಲ್ಲಿ ಎಸ್‌ಎಪಿ ಕಾಯಿದೆ ಜಾರಿಗೊಳಿಸಲಾಗಿದೆ. ಈ ಕಾಯಿದೆ ಅನ್ವಯ ಪ್ರತಿಯೊಂದು ಕಾರ್ಖಾನೆಗಳು ದರ ನಿಗದಿಪಡಿಸಬೇಕು. ಅದನ್ನು ರಾಜ್ಯ ಸರ್ಕಾರವೇ ನೇರವಾಗಿ ನಿಗಾ ವಹಿಸಬೇಕು. ಇದು ಕಾನೂನಿನಲ್ಲಿ ಇರುವ ಅವಕಾಶ. ಜಿಲ್ಲಾಡಳಿತ ಕೇವಲ ಅದರ ಉಸ್ತುವಾರಿ ಅಥವಾ ಕಾನೂನು-ಸೂವ್ಯವಸ್ಥೆ ಕಾಪಾಡುವ ಜವಾಬ್ದಾರಿ ಮಾತ್ರ ಹೊಂದಿದೆ. ಆದರೆ, ಎಎಸ್‌ಪಿ ಕಾಯ್ದೆ ಅನ್ವಯ ದರ ನಿಗದಿಯಾಗುತ್ತಿಲ್ಲ ಎಂಬುದು ರೈತರ ಆಕ್ರೋಶ.

14 ಕಾರ್ಖಾನೆಗಳು: ರಾಜ್ಯದಲ್ಲಿ ಅತಿಹೆಚ್ಚು ಸಕ್ಕರೆ ಕಾರ್ಖಾನೆ ಹೊಂದಿರುವ ಜಿಲ್ಲೆಗಳ ಪಟ್ಟಿಯಲ್ಲಿ ಬಾಗಲಕೋಟೆಗೆ 2ನೇ ಸ್ಥಾನವಿದೆ. ಬೆಳಗಾವಿ ಜಿಲ್ಲೆಯಲ್ಲಿ ಅತಿಹೆಚ್ಚು ಕಾರ್ಖಾನೆಗಳಿದ್ದು, ಭೌಗೋಳಿಕ ವಿಸ್ತೀರ್ಣದ ಆಧಾರದ ಮೇಲೆ ನೋಡುವುದಾದರೆ, ಬಾಗಲಕೋಟೆ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಹೆಚ್ಚೇ ಇವೆ. ಅಲ್ಲದೇ ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 2.40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು ಬೆಳೆಯುತ್ತಿದ್ದು, ಸಕ್ಕರೆ ಉತ್ಪಾದನೆಯಲ್ಲಿ ಬಾಗಲಕೋಟೆ ಜಿಲ್ಲೆಯ ಕಾರ್ಖಾನೆಗಳು, ದೇಶದ ಗಮನ ಸೆಳೆದಿವೆ.

ನಿರಾಣಿ ಉದ್ಯಮ ಸಮೂಹದಿಂದ ಮುಧೋಳದ ನಿರಾಣಿ ಶುಗರ್, ಚಿಪ್ಪರಗಿಯಲ್ಲಿ ಸಾಯಿಪ್ರಿಯಾ ಶುಗರÕ, ಬಾದಾಮಿ ತಾಲೂಕಿನ ಕೆರಕಲಮಟ್ಟಿಯ ಕೇದಾರನಾಥ ಶುಗರÕ, ಕುಳಗೇರಿ ಕ್ರಾಸ್‌ ಮತ್ತು ಬಾದಾಮಿ ಶುಗರ್ ಸಹಿತ ಒಟ್ಟು ಐದು ಸಕ್ಕರೆ ಕಾರ್ಖಾನೆಗಳು ಜಿಲ್ಲೆಯಲ್ಲಿವೆ. ಇನ್ನು ಉತ್ತೂರಿನ ಐಸಿಪಿಎಲ್‌ ಶುಗರ್, ತಿಮ್ಮಾಪುರದಲ್ಲಿ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ, ಸಮೀರವಾಡಿಯ ಗೋದಾವರಿ ಶುಗರ್, ಸಿದ್ದಾಪುರದ ಪ್ರಭುಲಿಂಗೇಶ್ವರ ಶುಗರ್, ಹಿರೇಪಡಸಲಗಿಯ ಜಮಖಂಡಿ ಶುಗರ್, ಬೀಳಗಿ ತಾಲೂಕಿನ ಕುಂದರಗಿಯ ಜಮ್‌ ಶುಗರ್, ಬಾಡಗಂಡಿಯ ಬೀಳಗಿ ಶುಗರ್, ನಾಯನೇಗಲಿಯ ಸದಾಶಿವ ಶುಗರ್, ಶಿರೂರಿನಲ್ಲಿ ಹೊಸದಾಗಿ ಆರಂಭಗೊಂಡ ಮೆಲ್‌ಬ್ರೋ ಶುಗರ್ ಸಹಿತ ಒಟ್ಟು 14 ಸಕ್ಕರೆ ಕಾರ್ಖಾನೆಗಳಿವೆ. ಜತೆಗೆ ಇನ್ನೂ ಒಂದೆಡೆ ಕಾರ್ಖಾನೆಗಳು ತಲೆ ಎತ್ತಲು ಸಜ್ಜಾಗಿವೆ.

ಸೌಹಾರ್ದಯುತ ವೇದಿಕೆ ಅಗತ್ಯ: ರೈತರಿಲ್ಲದೇ ಸಕ್ಕರೆ ಕಾರ್ಖಾನೆ ನಡೆಯಲ್ಲ. ಸಕ್ಕರೆ ಕಾರ್ಖಾನೆಗಳಿಲ್ಲದೇ ರೈತರು ಬೆಳೆದ ಕಬ್ಬು ನುರಿಸಲು ಸಾಧ್ಯವಿಲ್ಲ. ಇಬ್ಬರ ಮಧ್ಯೆಯೂ ಸೌಹಾರ್ದಯುತ ವಾತಾವರಣ ಇರಲೇಬೇಕು. ಆದರೆ, ಜಿಲ್ಲೆಯ ಬಹುತೇಕ ಸಕ್ಕರೆ ಕಾರ್ಖಾನೆಗಳು, ರಾಜಕಾರಣಿಗಳ ಒಡೆತನದಲ್ಲಿವೆ. ಹೀಗಾಗಿ ಇಲ್ಲಿಯೂ ಆಗಾಗ ರಾಜಕೀಯ ಸದ್ದು ಮಾಡುತ್ತಲೇ ಇರುತ್ತದೆ. ಜಿಲ್ಲೆಯಲ್ಲಿ ರೈತ ಸಂಘಟನೆ ಪ್ರಭಲವಾಗಿದ್ದು, ಕಬ್ಬಿನ ದರಕ್ಕಾಗಿ ಗಟ್ಟಿ ಹೋರಾಟ ನಡೆಸುತ್ತಲೇ ಇರುತ್ತಾರೆ. ಆದರೆ, ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಗಂಭೀರ ಪ್ರಯತ್ನಗಳು ನಡೆಯಲು, ಕೆಲ ರಾಜಕೀಯ ಶಕ್ತಿಗಳು ಬಿಡುತ್ತಿಲ್ಲ ಎಂಬ ಮಾತಿದೆ.

ನಮಗೇಕೆ ಅನ್ಯಾಯ?: ಜಿಲ್ಲೆಯ ರೈತರು, ನಾವು ಕಷ್ಟಪಟ್ಟು ಬೆಳೆದ ಕಬ್ಬಿಗೆ ಯೋಗ್ಯ ದರ ನೀಡಿ ಎಂದು ಕೇಳುತ್ತಿದ್ದಾರೆ. ನಮ್ಮ ಜಿಲ್ಲೆಗಿಂತಲೂ ಅತಿಕಡಿಮೆ ಸಕ್ಕರೆ ರಿಕವರಿ ಇರುವ ಉತ್ತರಪ್ರದೇಶದಲ್ಲಿ 3500, ಗುಜರಾತ್‌ ನಲ್ಲಿ 4400 ಹಾಗೂ ಪಂಜಾಬ್‌ನಲ್ಲಿ 3800 ರೂ. ದರವನ್ನು ಪ್ರತಿಟನ್‌ಗೆ ನೀಡಲಾಗುತ್ತಿದೆ. ಬೆಲೆ ನಿಗದಿ ಮಾಡದೇ, ಸಕ್ಕರೆ ಕಾರ್ಖಾನೆ ಆರಂಭಿಸಲಾಗುತ್ತದೆ. ರೈತರು, ನಮ್ಮ ಕಬ್ಬು ಹಾಳಾಗಬಾರದು ಎಂದು ಕಾರ್ಖಾನೆಗೆ ಕಬ್ಬು ಕಳುಹಿಸುತ್ತಾರೆ. ಕಬ್ಬು ನುರಿಸಿದ ಬಳಿಕ, ಮನ ಬದಂತೆ ದರ ನೀಡಲಾಗುತ್ತಿದೆ. ಸಧ್ಯ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಟನ್‌ಗೆ 2900, ಜಮಖಂಡಿ ಶುಗರÕನವರು 2800 ರೂ. ದರ ಘೋಷಣೆ ಮಾಡಿದ್ದಾರೆ. ಉಳಿದ ಯಾವ ಕಾರ್ಖಾನೆಗಳೂ ದರ ಘೋಷಣೆ ಮಾಡಿಲ್ಲ. ಆದ್ದರಿಂದ ರಾಜ್ಯ ಸರ್ಕಾವೇ ಮಧ್ಯ ಪ್ರವೇಶಿಸಿ, ಎಸ್‌ಎಪಿ ಕಾನೂನು ಪ್ರಕಾರ ಟನ್‌ ಕಬ್ಬಿಗೆ 3500 ರೂ. ದರ ನಿಗದಿ ಮಾಡಬೇಕು ಎಂಬುದು ಕಬ್ಬು ಬೆಳೆಗಾರರ ಸಂಘದ ಒಕ್ಕೋರಲಿನ ಒತ್ತಾಯ.

ನಮ್ಮ ಕಾರ್ಖಾನೆಯ ಕಬ್ಬು ಬೆಳೆಗಾರರರು, ರೈತ ಪ್ರಮುಖರೊಂದಿಗೆ ಕೂಡಿ ಸುಧೀಘ್ರ ಚರ್ಚೆ ಮಾಡಿದ್ದೇವೆ. ಚರ್ಚೆಯ ಬಳಿಕ ಪ್ರಸಕ್ತ ವರ್ಷ ಟನ್‌ ಕಬ್ಬಿಗೆ 2800 ರೂ. ದರ ನಿಗದಿ ಮಾಡಿದ್ದು, ಜಿಲ್ಲೆಯ ಖಾಸಗಿ ಸಕ್ಕರೆ ಕಾರ್ಖಾನೆಗಳು ಇದಕ್ಕೂ ಹೆಚ್ಚಿನ ಬೆಲೆ ನೀಡಿದರೆ, ಅದನ್ನು ನೀಡಲು ನಾವೂ ಬದ್ಧರಿದ್ದೇವೆ ಎಂದು ಹೇಳಿದ್ದೇವೆ. ಇದಕ್ಕೆ ಕಬ್ಬು ಬೆಳೆಗಾರರು ಸಹಮತ ವ್ಯಕ್ತಪಡಿಸಿದ್ದಾರೆ.   –ಆನಂದ ನ್ಯಾಮಗೌಡ, ಜಮಖಂಡಿ ಶಾಸಕ ಹಾಗೂ ಜಮಖಂಡಿ ಶುಗರ್ ನಿರ್ದೇಶಕ

ರೈತರು ಒಂದು ಹೆಕ್ಟೇರ್‌ ಕಬ್ಬು ಬೆಳೆಯಲು ಕನಿಷ್ಠ 60 ಸಾವಿರ ವರೆಗೆ ಖರ್ಚು ಮಾಡುತ್ತಾರೆ. ಇಂದು ರಸಗೊಬ್ಬರ, ಬಿತ್ತನೆ ಬೀಜ, ಡಿಸೇಲ್‌-ಪೆಟ್ರೋಲ್‌ ಸಹಿತ ಪ್ರತಿಯೊಂದರ ಬೆಲೆಯೂ ಹೆಚ್ಚಳವಾಗಿದೆ. ಆದರೆ, ಕಳೆದ ನಾಲ್ಕೈದು ವರ್ಷದಿಂದ ಟನ್‌ ಕಬ್ಬಿಗೆ ಒಂದೇ ದರ ನೀಡಲಾಗುತ್ತಿದೆ. ಬೆಲೆ ಏರಿಕೆಯಿಂದ ತತ್ತರಿಸುವ, ಕಷ್ಟಪಟ್ಟು ರೈತ ಬೆಳೆಯುವ ಕಬ್ಬಿಗೆ ಯೋಗ್ಯ ಬೆಲೆ ಕೊಡಬೇಕು ಎಂಬುದು ನಮ್ಮ ನ್ಯಾಯಯುತ ಬೇಡಿಕೆ. ಇದಕ್ಕಾಗಿ ಹೋರಾಟ ನಡೆಸಿದ್ದೇವೆ. ಅ.31ರಂದು ಜಿಲ್ಲಾಧಿಕಾರಿಗಳು ಸಭೆ ಕರೆದಿದ್ದು, ಸಭೆಯ ಬಳಿಕ ಮುಂದಿನ ಹೋರಾಟದ ನಿರ್ಧಾರ ಮಾಡುತ್ತೇವೆ.  –ಯಲ್ಲಪ್ಪ ಹೆಗಡೆ, ಕಬ್ಬು ಬೆಳೆಗಾರರ ಹೋರಾಟಗಾರ

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.