ಆರೋಗ್ಯ ಸೇವೆ ದೊರೆಯದೇ ಪರದಾಟ

ಆದರೆ, ಇಂದು ಆಸ್ಪತ್ರೆಯಲ್ಲಿ 30-40 ಜನರಿಗೆ ಚಿಕಿತ್ಸೆ ದೊರೆಯುತ್ತಿಲ್ಲ.

Team Udayavani, Oct 28, 2021, 6:46 PM IST

ಆರೋಗ್ಯ ಸೇವೆ ದೊರೆಯದೇ ಪರದಾಟ

ಮಹಾಲಿಂಗಪುರ: ಚಿಮ್ಮಡ ಪ್ರಾಥಮಿಕ ಆರೋಗ್ಯ ಕೇಂದ್ರ ಸುಸಜ್ಜಿತ ಕಟ್ಟಡ ಹೊಂದಿದ್ದರೂ ರೋಗಿಗಳಿಗೆ ಸಮರ್ಪಕ ಸೇವೆ ಸಿಗುತ್ತಿಲ್ಲ. ಸಕಾಲಕ್ಕೆ ವೈದ್ಯರಿಂದ ಸಮರ್ಪಕ ಸೇವೆ ಸಿಗದೇ, ಕಾಯಂ ನರ್ಸ್‌ ಇಲ್ಲದೇ ರೋಗಿಗಳು ಪರದಾಡುವಂತಾಗಿದೆ. ವೈದ್ಯಾಧಿಕಾರಿಗಳ
ವರ್ಗಾವಣೆ, ಅಸಮರ್ಪಕ ನಿರ್ವಹಣೆ, ಔಷಧ ಕೊರತೆಯಿಂದ ರೋಗಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ರೋಗಿಗಳ ಕೊರತೆ ಕಾರಣ ನೀಡಿ, 24×7 ಆಸ್ಪತ್ರೆ ಸೌಲಭ್ಯ ಹಿಂಪಡೆಯಲಾಯಿತು. ಇದರಿಂದ ಈ ಆಸ್ಪತ್ರೆ ಕೇವಲ ಕೋವಿಡ್‌ ಲಸಿಕೆ ನೀಡಲು ಹಾಗೂ ಗರ್ಭಿಣಿಯರಿಗೆ ಹೆರಿಗೆ ಕಾರ್ಡ್‌ ನೀಡುವುದಕ್ಕೆ ಮಾತ್ರ ಸೀಮಿತವಾದಂತಾಗಿದೆ.

ಕೋವಿಡ್‌ ಲಸಿಕಾಮೇಳದಲ್ಲಿ ಕರ್ತವ್ಯಕ್ಕೆ ಹಾಜರಿಲ್ಲದ ಕಾರಣ ಚಿಮ್ಮಡ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ| ಅಶೋಕ ಪಡಸಾಲೆ ಅವರನ್ನು ಅಮಾನತು ಮಾಡಲಾಗಿತ್ತು. ಕೆಲವೇ ದಿನಗಳಲ್ಲಿ ಪಡಸಾಲೆ ಮುಖ್ಯ ವೈದ್ಯಾಧಿಕಾರಿಗಳಾಗಿ ಕಾರ್ಯ ನಿರ್ವಹಣೆ ಆರಂಭಿಸಿದ್ದರೂ ಜನರು ಇವರ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿಲ್ಲ.

ಸ್ಟಾಫ್‌ ನರ್ಸ್‌ ಕೊರತೆ: ಸದ್ಯ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಸೇರಿದಂತೆ 13 ಜನ ಸಿಬ್ಬಂದಿ, ಹನ್ನೆರಡು ಜನ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಗೆ ಸ್ಟಾಪ್‌ ನರ್ಸ್‌ಗಳ ಕೊರತೆ ಇದೆ.

ಡಿಎಚ್‌ಒ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ:ಆಸ್ಪತ್ರೆ ಆರಂಭದ ಕೆಲವು ವರ್ಷಗಳವರೆಗೆ ಪ್ರತಿದಿನ 200ಕ್ಕೂ ಹೆಚ್ಚು ಜನ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಆಸ್ಪತ್ರೆಯಲ್ಲಿ 30-40 ಜನರಿಗೆ ಚಿಕಿತ್ಸೆ ದೊರೆಯುತ್ತಿಲ್ಲ. ಗ್ರಾಮಸ್ಥರು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಅನಂತ ದೇಸಾಯಿಯವರ ಗಮನಕ್ಕೆ ತಂದಾಗ ಗ್ರಾಮದ ಆಸ್ಪತ್ರೆಗೆ ಖಾಯಂ ನರ್ಸ ನೇಮಕಗೊಳಿಸಿ ಗ್ರಾಮದ ಆಸ್ಪತ್ರೆಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರ ಅಳಲು.

ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಹಾಗೂ ಶಾಸಕರಿಗೆ ಹಲವಾರು ಬಾರಿ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ, ಹೆರಿಗೆಗೆ ಗರ್ಭಿಣಿಯರು ಪರದಾಡುವಂತಾಗಿದೆ. ಗ್ರಾಮದ ಆಸ್ಪತ್ರೆಗೆ ಅಗತ್ಯ ಸೌಲಭ್ಯ ಕಲ್ಪಿಸಿ. 24×7 ಹೆರಿಗೆ ಸೌಲಭ್ಯ ನೀಡದಿದ್ದಲ್ಲಿ ಆಸ್ಪತ್ರೆಯ ಬಾಗಿಲು ಹಾಕಿ ಪ್ರತಿಭಟನೆ ನಡೆಸಲಾಗುವುದು.
ಗುರಲಿಂಗಪ್ಪ ಪೂಜಾರಿ, ಅಧ್ಯಕ್ಷರು ಗ್ರಾಪಂ ಚಿಮ್ಮಡ

ಚಿಮ್ಮಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ನರ್ಸ್‌ ಹುದ್ದೆಯೇ ಇಲ್ಲ. ಅದಕ್ಕಾಗಿ ಈಗಾಗಲೇ ಡಿಎಚ್‌ಓ ಅವರು ಸರ್ಕಾರಕ್ಕೆ ಪತ್ರ ಬರೆದು ಕಾಯಂ ನರ್ಸ್‌ ಹುದ್ದೆಯನ್ನು ಮಂಜೂರಿ ಮಾಡಲು ವಿನಂತಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವೈದ್ಯರಿಗೆ ಎಚ್ಚರಿಕೆ
ನೀಡಿ, ಅಲ್ಲಿನ ಲೋಪದೋಷ ಸರಿಪಡಿಸುತ್ತೇವೆ. ಮಹಾಲಿಂಗಪುರ ಮತ್ತು ಬನಹಟ್ಟಿ ಸರಕಾರಿ ಆಸ್ಪತ್ರೆಯ ವೈದ್ಯರಿಗೆ ತಿಳಿಸಿ. ಚಿಮ್ಮಡ ಗ್ರಾಮದಿಂದ ಬರುವ ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸುತ್ತೇವೆ.
ಜಿ.ಎಸ್‌.ಗಲಗಲಿ, ಟಿಎಚ್‌ಒ ರಬಕವಿ-ಬನಹಟ್ಟಿ

*ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.