ಚಿತ್ತಾ ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ
Team Udayavani, Oct 22, 2019, 12:49 PM IST
ಮಹಾಲಿಂಗಪುರ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಒಂಭತ್ತು ಗ್ರಾಮಗಳಲ್ಲಿ ಮಳೆ ಹಾಗೂ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರವಿವಾರ ಮಹಾಲಿಂಗಪುರದಲ್ಲಿ 135.4 ಸೆ.ಮಿ ಮಳೆಯಾಗಿದೆ.
ಧರೆಗುರುಳಿದ ಮರಗಳು: ನಿರಂತರ ಮಳೆಯಿಂದಾಗಿ ಮಹಾಲಿಂಗಪುರ, ಬೆಳಗಲಿ, ಬಿಸನಾಳ, ಢವಳೇಶ್ವರ, ಮಾರಾಪುರ ಗ್ರಾಮಗಳಲ್ಲಿ ರಸ್ತೆ ಬದಿಯಲ್ಲಿನ ಮತ್ತು ಹೊಲಗದ್ದೆಗಳಲ್ಲಿ ಮರಗಳುನೆಲಕ್ಕುರುಳಿವೆ. ಇದರಿಂದಾಗಿ ಹಲವಡೆ ಸಂಚಾರಕ್ಕೆ ತೊಂದರೆಯಾಗಿದೆ.
ಮನೆಗಳಿಗೆ ನುಗ್ಗಿದ ನೀರು: ಪಟ್ಟಣದ ಸಿದ್ದ ಸರೋವರದ ಕೆರೆ ತುಂಬಿ ನೀರು ಚರಂಡಿಗೆ ಹರಿದ ಪರಿಣಾಮವಾಗಿ ಚಿಮ್ಮಡ ಗಲ್ಲಿಯಲ್ಲಿ 20ಕ್ಕೂ ಅಧಿ ಕ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಮನೆಯ ಸಾಮಾನುಗಳ ರಕ್ಷಣೆಗಾಗಿ ಪರದಾಡಿದರು.
ಬಿದ್ದ ಮನೆಗಳು: ವಿವಿಧ ವಾರ್ಡ್ಗಳಲ್ಲಿ ಹತ್ತಕ್ಕೂ ಅಧಿಕ ಮನೆಗಳು ಬಿದ್ದಿವೆ. ವಿಪರೀತ ಮಳೆಯ ಕಾರಣ ಬಹುತೇಕ ಚರಂಡಿಗಳು ತುಂಬಿ, ರಸ್ತೆಗಳ ಮೇಲೆ ನೀರು ಹರಿದ ಕಾರಣ ಸಾರ್ವಜನಿಕರು ಪರದಾಡಿದರು.
ರನ್ನಬೆಳಗಲಿಯಲ್ಲಿ ಆವಾಂತರ: ನೆರೆಯ ರನ್ನಬೆಳಗಲಿಯಲ್ಲಿ ಹಳ್ಳದ ನೀರು ತುಂಬಿ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಅಂಗನವಾಡಿಗೆ ನೀರು ನುಗ್ಗಿ ದವಸ ಧಾನ್ಯಗಳು ಹಾಳಾಗಿವೆ. ಪಟ್ಟಣದ ಹನುಮಾನ ದೇವಸ್ಥಾನದಿಂದ ಹಿಡಿದು-ಯಲ್ಲಮ್ಮ ದೇವಸ್ಥಾನದವರೆಗಿನ ರಸ್ತೆಯ ಮೇಲೆ ಹಳ್ಳದ ನೀರು ಹೊಳೆಯಂತೆ ಹರಿದ ಪರಿಣಾಮ ಸಂಚಾರಕ್ಕೆ ತೊಂದರೆಯುಂಟಾಗಿದೆ. ಪಟ್ಟಣದಲ್ಲಿ ಸಿಮೆಂಟ್ ಅಂಗಡಿ, ದಾಬಾ, ಬ್ಯಾಂಕ್, ಅಂಗನವಾಡಿ ಕಟ್ಟಡಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.
ಅಪಾರ ಬೆಳೆ ನಾಶ: ನಿರಂತರ ಮಳೆಯಿಂದಾಗಿ ಈ ಭಾಗದಲ್ಲಿನ ಕಬ್ಬು, ಗೋವಿನ ಜೋಳ, ಅರಿಶಿನ, ಕಾಯಿಪಲ್ಲೆ ಸೇರಿದಂತೆ ಎಲ್ಲ ಬೆಳೆಗಳು ಜಲಾವೃತವಾಗಿವೆ.
ರಸ್ತೆಗಳು ಬಂದ್: ನಿರಂತರ ಮಳೆಯ ಪರಿಣಾಮ ಹಳ್ಳಗಳು ತುಂಬಿ ಹರಿದ ಪರಿಣಾಮ ಕೆಸರಗೊಪ್ಪ-ಹಂದಿಗುಂದ, ಮಹಾಲಿಂಗಪುರ-ಅಕ್ಕಿಮರಡಿ ರಸ್ತೆಗಳು ಬಂದ್ ಆಗಿ ಉಭಯ ಗ್ರಾಮಗಳ ಸಂಪರ್ಕ ಕಡಿತವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್