ಶರಣೆ ಹೇಮರಡ್ಡಿ ಮಲ್ಲಮ್ಮ ಸ್ತ್ರೀಕುಲದ ತಿಲಕ

ಹೇಮರಡ್ಡಿ ಮಲ್ಲಮ್ಮನ ಚರಿತ್ರೆ ಮತ್ತು ಚಾರಿತ್ರ್ಯದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯವಾಗಿದೆ

Team Udayavani, May 11, 2022, 4:22 PM IST

ಶರಣೆ ಹೇಮರಡ್ಡಿ ಮಲ್ಲಮ್ಮ ಸ್ತ್ರೀಕುಲದ ತಿಲಕ

ಬಾಗಲಕೋಟೆ: ಪುರುಷ ಪ್ರಧಾನವಾದ ಭಾರತ ದೇಶದಲ್ಲಿ ಐದನೂರು ವರ್ಷಗಳ ಹಿಂದೆ ಭಕ್ತಿ ಪರಾಕಾಷ್ಟೆ ತಲುಪಿದ ಹೇಮರಡ್ಡಿ ಮಲ್ಲಮ್ಮ ಸ್ತ್ರೀಕುಲದ ತಿಲಕರಾಗಿದ್ದಾರೆ ಎಂದು ಬಾಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ ಹೇಳಿದರು.

ನವನಗರದ ಡಾ|ಬಿ.ಆರ್‌.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಭಾರತ ದೇಶ ಹಿಂದಿನಿಂದಲೂ ಪ್ಲೇಗ್‌, ಮಲೇರಿಯಾ, ದಡಾರದಂತ ಕಾಯಿಲೆಗಳು ಮತ್ತು ಮೊಘಲರು, ಸುಲ್ತಾನರು, ಬ್ರಿಟೀಷರು ಈ ದೇಶ ಮೇಲೆ ದಾಳಿ ಇಟ್ಟರೂ ಕೂಡಾ ದೇಶ ಸುಭದ್ರವಾಗಿರಲು ಮಲ್ಲಮ್ಮ ನಂತಹ ಶರಣೆಯರ ಪಾದಸ್ಪರ್ಶದಿಂದ ಎಂಬುದು ಸಾಬೀತಾಗಿದೆ ಎಂದರು.

ಉಪನ್ಯಾಸಕರಾಗಿ ಆಗಮಿಸಿದ್ದ ಡಾ|ಟಿ.ಎಚ್‌.ಮಳಲಿ ಮಾತನಾಡಿ, ಯಾರು ಇತಿಹಾಸ ಮತ್ತು ಸಂಸ್ಕೃತಿಯನ್ನು ಮರೆಯುತ್ತಾರೋ ಅವರು ಇತಿಹಾಸವನ್ನು ಸೃಷ್ಟಿಸಲಾರರು. ಸಂತ, ಶಿವ ಶರಣ ಮತ್ತು ಶಿವಶರಣೆಯರ, ಸನ್ಯಾಸಿಗಳ ಮಹತ್ವ ತಿಳಿಯುವುದು ಇತಿಹಾಸದಿಂದ ಮಾತ್ರ ಸಾಧ್ಯ. ಅಂತಹ ಇತಿಹಾಸದಲ್ಲಿ ಹೇಮರಡ್ಡಿ ಮಲ್ಲಮ್ಮನ ಚರಿತ್ರೆ ಮತ್ತು ಚಾರಿತ್ರ್ಯದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದರು.

ಸಮುದಾಯದ ಮುಖಂಡರಾದ ಮಹೇಶ ಕಕರಡ್ಡಿ ಮಾತನಾಡಿ, ಮನಸ್ಸು ಸ್ವತ್ಛವಾಗಿಟ್ಟುಕೊಳ್ಳಲು ಇಂತಹ ಕಾರ್ಯಕ್ರಮ ನಡೆಸುವುದು ಅಗತ್ಯವಾಗಿದೆ. ಎಲ್ಲ ಸಮುದಾಯದವರು ಒಂದು ಎಂದು ನಂಬಿಕೆ ಇಡಬೇಕು. ಮೈಮುರಿಯುವಂತೆ ದುಡಿದು ಅಷ್ಟೇ ವಿನಂತಿಯಿಂದ ದಾನ ಮಾಡಬೇಕು ಎಂಬ ಹೇಮರೆಡ್ಡಿ ಮಲ್ಲಮ್ಮರವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಮಾತನಾಡಿ, ಮಹಿಳೆಯರ ಪಾಲಿನ ಆರಾದ್ಯ ದೈವರಾಗಿದ್ದ ಮಲ್ಲಮ್ಮಳ ಆರಾಧಕರಾದ ನಾವು ಅವರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳೋಣ ಎಂದರು. ಜಿಪಂ ಉಪಕಾರ್ಯದರ್ಶಿ ಎನ್‌.ವೈ. ಬಸರಿಗಿಡದ, ತೋಟಗಾರಿಕಾ ಉಪನಿರ್ದೇಶಕ ರಾಹುಲಕುಮಾರ ಬಾವಿದಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ, ಸಮುದಾಯದ ಮುಖಂಡರಾದ ಎಸ್‌.ಡಿ. ಕೋಮಾರ, ಎಂ.ಆರ್‌. ಪಾಟೀಲ, ರಾಜು ಪಾಟೀಲ, ಎ.ಎನ್‌.ಹಿರೇಗೌಡರ, ಆರ್‌.ಬಿ. ದ್ಯಾವನ್ನವರ, ಎನ್‌.ಬಿ. ಚಿತ್ತವಾಡಗಿ,ವಿ.ಟಿ. ಶೇಷಪ್ಪನವರ, ಮದುಸೂಧನ ಮೂದಲಗಿ, ಇಂದುಮತಿ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

ಅದ್ಧೂರಿ ಮೆರವಣಿಗೆ
ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ಹೇಮರಡ್ಡಿ ಮಲ್ಲಮ್ಮಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಚಾಲನೆ ನೀಡಿದರು. ವಿವಿಧ ಜಾನಪದ ಕಲಾತಂಡಗಳೊಂದಿಗೆ ಹೊರಟ ಅದ್ಧೂರಿ ಮೆರವಣಿಗೆ ನಗರದ ವಿವಿಧೆಡೆ ಸಂಚರಿಸಿ ಡಾ| ಬಿ.ಆರ್‌.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಕುಂಬ ಹೊತ್ತ ಮಹಿಳೆಯರು ಆಕರ್ಷಣೀಯ ಬಿಂದು ಆಗಿದ್ದರು. ಮೆರವಣಿಗೆಯಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಅಪರ ಜಿಲ್ಲಾಧಿ ಕಾರಿ ಮಹಾದೇವ ಮುರಗಿ, ಜಿಪಂ ಉಪಕಾರ್ಯದರ್ಶಿ ಎನ್‌.ವೈ. ಬಸರಿಗಿಡದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಭಾಂದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.