Rabkavi Banhatti; ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗೆ ಮುತ್ತಿಗೆ


Team Udayavani, Aug 19, 2023, 6:34 PM IST

Rabkavi Banhatti; ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗೆ ಮುತ್ತಿಗೆ

ರಬಕವಿ-ಬನಹಟ್ಟಿ: ಬನಹಟ್ಟಿ ಸಮೀಪದ ತೋಟದ ಭಾಗದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡದೆ ಇರುವುದರಿಂದ ರೈತರು ಬೆಳೆದ ಕಬ್ಬು,ಅರಿಶಿನ ಬೆಳೆ ಸೇರಿದಂತೆ ಎಲ್ಲ ಬೆಳೆಗಳು ಒಣಗುತ್ತಿವೆ. ಈಗ ಕೊಡುತ್ತಿರುವ ಸಿಂಗಲ್ ಫೇಸ್ ಮತ್ತು ತ್ರೀಫೇಸ್ ವಿದ್ಯುತ್ ಪೂರೈಕೆಯಲ್ಲಿ ಅರ್ಧಕ್ಕಿಂತ ಕಡಿಮೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ರೈತರಿಗೆ ತೊಂದರೆಯಾಗಿದೆ ಎಂದು ರೈತ ಮುಖಂಡ ಈಶ್ವರ ಬಿರಾದಾರಪಾಟೀಲ ತಿಳಿಸಿದರು.

ಶನಿವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮಾತನಾಡಿದರು.
ಈ ಮೊದಲು ದಿನ ನಿತ್ಯ ಸಂಜೆ 6 ರಿಂದ ಬೆಳಗಿನ 6 ವರೆಗೆ ಸಿಂಗಲ್ ಫೇಸ್ ಮತ್ತು ಹಗಲು ಹೊತ್ತಿನಲ್ಲಿ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡುತ್ತಿದ್ದರು. ಆದರೆ ಈಗ ಮೂರು ಗಂಟೆಗಳ ಕಾಲ ಸಿಂಗಲ್ ಫೇಸ್ ಮತ್ತು 4 ಗಂಟೆಗಳ ಕಾಲ ತ್ರಿ ಫೇಸ್ ವಿದ್ಯುತ್ ಪೂರೈಕೆ ಮಾಡುತ್ತಿದ್ಧಾರೆ. ಆದರೆ ಮತ್ತೆ ಮಧ್ಯದಲ್ಲಿ ವಿದ್ಯುತ್ ಕಣ್ಣು ಮುಚ್ಚಾಲೆ ಆಡುತ್ತದೆ. ರಾತ್ರಿ ಹೊತ್ತು ಸರಿಯಾದ ವಿದ್ಯುತ್ ಪೂರೈಕೆ ಇಲ್ಲದೆ ಇರುವುದರಿಂದ ತೋಟದ ಪ್ರದೇಶದಲ್ಲಿಯ ದನ ಕರುಗಳು, ಮೇಕೆ, ಆಡುಗಳ ಹಾಗೂ ಕೃಷಿ ಉಪಕರಣಗಳ ಕಳ್ಳತನ ಹೆಚ್ಚಾಗಿದೆ. ವಿದ್ಯಾರ್ಥಿಗಳ ಓದಿಗೆ ಬಹು ದೊಡ್ಡ ಸಮಸ್ಯೆಯಾಗಿದೆ ರಾತ್ರಿಯ ಸಮಯವನ್ನು ಕತ್ತಲೆಯಲ್ಲಿ ಕಳೆಯುವಂತಾಗಿದೆ ಎಂದು ಭೀಮಶಿ ಪಾಟೀಲ ತಿಳಿಸಿದರು.

ರೈತರು ಹೆಸ್ಕಾಂ ಅಧಿಕಾರಿಗಳಾದ ಎಸ್.ಜಿ.ಕಲಕಂಬ, ಗಿರೀಶ ಗೊಂದಳಿ, ಸಿದ್ದು ಮಹೇಷವಾಡಗಿ ಮತ್ತು ಪಿ.ಬಿ. ಸತ್ತಿಯವರ ಜೊತೆಗೆ ಚರ್ಚಿಸಿದರು.

ಮುಂದಿನ ದಿನಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡದೆ ಹೋದರೆ ಉಗ್ರ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ರೈತರು ತಿಳಿಸಿದರು.

ಭೀಮಶಿ ಹಂದಿಗುಂದ, ಬಸವರಾಜ ಬೆಳಗಲಿ, ರುದ್ರಪ್ಪ ಹಂದಿಗುಂದ, ರಾಮಪ್ಪ ಪಾಟೀಲ, ಮಹಾಂತೇಶ ಮಿಳ್ಳಿ, ಶೇಖರ ಜಿಡ್ಡಿಮನಿ, ಮುದಕಪ್ಪ ಜಿಡ್ಡಿಮನಿ, ಪೆಂಡಾರಿ ಸೇರಿದಂತೆ ಅನೇಕ ರೈತರು ಇದ್ದರು.

ಸರ್ಕಾರ ಆದೇಶದಂತೆ ರೈತರಿಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಬೆಳಕಿನ ಸಲುವಾಗಿ ಸಿಂಗಲ್ ಫೇಸ್ ವಿದ್ಯುತ್ ನೀಡುತ್ತಿದ್ದ ಈ ಸಂದರ್ಭದಲ್ಲಿ ಪಂಪ್ ಸೆಟ್ ಗಳನ್ನು ಆರಂಭಿಸುವುದರಿಂದ ಕಚೇರಿಯಲ್ಲಿ ತೊಂದರೆಯಾಗುತ್ತಿರುವುದರಿಂದ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಗ್ರಾಮೀಣಾ ವಿಭಾಗದ ಹೆಸ್ಕಾಂ ಅಧಿಕಾರಿ ಎಸ್.ಜಿ.ಕಲಕಂಬ ತಿಳಿಸಿದರು.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.