ಸೌಲಭ್ಯಗಳಿಗೆ ಆಗ್ರಹಿಸಿ ಹೆದ್ದಾರಿ ತಡೆ
Team Udayavani, Sep 22, 2019, 9:54 AM IST
ಮುಧೋಳ: ಘಟಪ್ರಭಾ ನದಿಯ ಪ್ರವಾಹದಲ್ಲಿ ಸಿಲುಕಿ ಕಂಗಾಲಾಗಿರುವ ನೆರೆ ಸಂತ್ರಸ್ತರಿಗೆ ಈವರೆಗೂ ನಯಾಪೈಸೆ ಪರಿಹಾರ ದೊರಕಿಲ್ಲ. ಸಂತ್ರಸ್ತರಿಗೆ ಮೂಲಭೂತ ಸೌಲಭ್ಯ ಆಗ್ರಹಿಸಿ ಜೀರಗಾಳ ಗ್ರಾಮಸ್ಥರು ವಿಜಯಪುರ-ಬೆಳಗಾವಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಗ್ರಾಮದ ಮಹಿಳೆಯರು ಹೆದ್ದಾರಿ ಬಂದ್ ಮಾಡಿ ರಸ್ತೆ ಮೇಲೆಯೇ ಧರಣಿ ಕುಳಿತು ಪ್ರತಿಭಟಿಸಿದರು. ನೆರೆ ಸಂತ್ರಸ್ತರಾದ ನಾವು ಮನೆ ಮಠ ಜಮೀನು ಕಳೆದುಕೊಂಡು ಬೀದಿಗೆ ಬಿದ್ದು ತಿಂಗಳು ಕಳೆದರೂ ನಮ್ಮ ಗೋಳು ಕೇಳುವವರೇ ಇಲ್ಲ. ಈ ಹಿಂದೆಯೇ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ನಮ್ಮ ಅಹವಾಲು ಹೇಳಿಕೊಂಡು ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ತುರ್ತಾಗಿ ಕೊಡುವ 10 ಸಾವಿರ ರೂಪಾಯಿಗಳಾಗಲಿ, ಮನೆ ಕಟ್ಟಿಕೊಳ್ಳುವ ಕಂತಾಗಲಿ, ಕನಿಷ್ಠ ತಗಡಿನ್ ಶೆಡ್ಗಳನ್ನು ಸಹನಮಗೆ ಒದಗಿಸಿಲ್ಲ. ದನಕರುಗಳು ಸಹ ಮೇವು, ನೆಲೆ ಇಲ್ಲದೆ ಪರದಾಡುತ್ತಿವೆ ಎಂದರು. ನಡುಗಡ್ಡೆಯಂತಾಗಿದ್ದ ಜೀರಗಾಳಗ್ರಾಮಕ್ಕೆ ಸಂಘ ಸಂಸ್ಥೆಗಳಿಂದಾಗಲಿ, ಸರ್ಕಾರದಿಂದ ಆಗಲಿ ನೆರವು ಸಿಗಲೇ ಇಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ದಿಢೀರ್ ಪ್ರತಿಭಟನೆಯಿಂದ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಿದರು.
ತಾಪಂ ಅಧ್ಯಕ್ಷ ತಿಮ್ಮಣ್ಣ ಬಟಕುರ್ಕಿ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಜಿಲ್ಲಾ ಪಂಚಾಯತ ಸದಸ್ಯೆ ರತ್ನಕ್ಕಾ ತಳೇವಾಡ, ತಹಶೀಲ್ದಾರ್ ಸಂಜಯ ಇಂಗಳೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ