ಅಧಿಕಾರಕ್ಕಾಗಿ ಪಾದಯಾತ್ರೆ ಕಾಂಗ್ರೆಸ್‌ ಸಂಸ್ಕೃತಿ


Team Udayavani, Jan 16, 2022, 8:59 PM IST

ಎರತಯುಇಒಲಕಮನಬವಚಷಱ

ಜಮಖಂಡಿ: ಮೇಕೆದಾಟು ಪಾದಯಾತ್ರೆಯಲ್ಲಿ ಬಬಲೇಶ್ವರ ಶಾಸಕ ಎಂ.ಬಿ. ನ್ಯಾಮಗೌಡ ಅವರು ನೀರಾವರಿ ಸಚಿವ ಗೋವಿಂದ ಕಾರಜೋಳ ವಿರುದ್ಧ ಕೆಳಮಟ್ಟದ ಶಬ್ದಗಳ ಬಳಕೆ ಮಾಡಿರುವುದು ಖಂಡನೀಯ. ಕಾಂಗ್ರೆಸ್‌ ಪಕ್ಷದ ಸಿದ್ಧಾಂತ, ಸಂಸ್ಕೃತಿಗೆ ನಾಚಿಕೆಯಾಗಬೇಕು ಎಂದು ರೈತ ಮತ್ತು ಬಿಜೆಪಿಯ ಮುಖಂಡ ಬಿ.ಎಸ್‌.ಸಿಂಧೂರ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2010ರಲ್ಲಿ ಅಂದಿನ ಬಿಜೆಪಿ ಸರಕಾರ ಸಾವಳಗಿ ಹೋಬಳಿಯ 7 ಮತ್ತು ವಿಜಯಪುರ ಜಿಲ್ಲೆಯ 13 ಕರೆಗಳಿಗೆ ನೀರು ತುಂಬಿಸುವ ಯೋಜನೆ ಆರಂಭಿಸಿದ ಯೋಜನೆಗೆ ಬಗ್ಗೆ ವರ್ಣಿಸಿದ ಮಾತುಗಳನ್ನು ಶಾಸಕ ಎಂ.ಬಿ.ಪಾಟೀಲ ಮರೆತಿದ್ದಾರೆ. ಕಾಂಗ್ರೆಸ್‌ 1964ರಿಂದ 1983ರ ವರೆಗೆ ನಿರಂತವಾಗಿ ಅಧಿ ಕಾರದಲ್ಲಿದ್ದು, ಆಲಮಟ್ಟಿ ಜಲಾಶಯವನ್ನು ಏಕೆ ಪೂರ್ಣಗೊಳಿಸಲಿಲ್ಲ. ಅವಕಾಶಗಳಿಗೆ ಬೆನ್ನು ಹತ್ತುವ ಕಾಂಗ್ರೆಸ್‌ ಶಾಸಕರು ಅಧಿ ಕಾರ ಲಭಿಸಿದಾಗ ಮರೆತು ಬಿಡುತ್ತಾರೆ ಎಂದು ಲೇವಡಿ ಮಾಡಿದರು.

2012ರಲ್ಲಿ ಕೃಷ್ಣೆಯ ಹೆಸರಿನಲ್ಲಿ ಬಳ್ಳಾರಿಯಿಂದ ಕೂಲಸಂಗಮದವರೆಗೆ ಪಾದಯಾತ್ರೆ ಮೂಲಕ ರಾಜ್ಯದಲ್ಲಿ ಅಧಿ ಕಾರ ಪಡೆದು 6 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಯೋಜನೆ ಪೂರ್ಣಗೊಳಿಸಲಿಲ್ಲ. ಕೇವಲ 6 ಸಾವಿರ ಕೋಟಿ ಬಜೆಟ್‌ ಮಂಡಿಸಿದ್ದು, ಪ್ರತಿವರ್ಷ 10 ಸಾವಿರ ಕೋಟಿಯಂತೆ 5 ವರ್ಷಕ್ಕೆ 50 ಸಾವಿರ ಕೋಟಿ ನೀರಾವರಿಗೆ ವೆಚ್ಚ ಮಾಡಿದ್ದಾರೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್‌ ಪಕ್ಷದವರು ಅದು ರಾಜ್ಯದ ನೀರಾವರಿ ಯೋಜನೆಗಳಿಗೆ ಹೊರತು ಕೃಷ್ಣಾ ಮೇಲ್ದಂಡೆ 3ನೇ ಹಂತ ಕಾಮಗಾರಿಗೆ ಅಲ್ಲ ಎಂದರು. 2022ರಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷದವರು ರಾಜ್ಯದ ಜನತೆಗೆ ಮೋಸ ಮಾಡಲು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಆರಂಭಿಸಿದ್ದು, ಅಧಿ  ಕಾರ ಪಡೆಯುವ ದಾಹದಿಂದ ಹೊರತು ಯೋಜನೆ ಪೂರ್ಣಗೊಳಿಸಲು ಅಲ್ಲ ಎಂದು ರಾಜ್ಯದ ಜನರು ಅರಿತುಗೊಂಡಿದ್ದಾರೆ.

ಅಧಿ ಕಾರಕ್ಕಾಗಿ ಪಾದಯಾತ್ರೆ ನಡೆಸುವ ಸಂಸ್ಕೃತಿಯನ್ನು ಕಾಂಗ್ರೆಸ್‌ ಕೈ ಬಿಡಬೇಕು. ರಾಜ್ಯದ ಜನತೆಯ ನೋವುಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಹತ್ತಾರು ಯೋಜನೆ ಜಾರಿಗೆ ತರುತ್ತಿದ್ದಾರೆ. ಅದನ್ನು ಸಹಿಸಿಕೊಳ್ಳದೇ ಕಾಂಗ್ರೆಸ್‌ ಪಕ್ಷದವರು ವಿನಾಕಾರಣ ಹಿಂಸೆ ಮಾತುಗಳನ್ನು ಆಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್‌ ಪಕ್ಷ ಧೂಳಿಪಟವಾಗಿದೆ ಎಂದರು.

ನೀರಾವರಿ ಸಚಿವ ಗೋವಿಂದ ಕಾರಜೋಳ ಅವರಿಗೆ ನಾಲ್ಕು ದಿನದಲ್ಲಿ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಕ್ಷಮೆಯಾಚಿಸದಿದ್ದಲ್ಲಿ ಉಗ್ರಹೋರಾಟ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಸುಗಮ ಆಡಳಿತ ಅಡ್ಡಭಾಷೆ ಬಳಕೆ ಮಾಡದೇ ಸಹಕಾರ ನೀಡಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ತೊದಲಬಾಗಿ ಗ್ರಾಪಂ ಅಧ್ಯಕ್ಷ ಸಿದ್ರಾಯ ಸಾಯಗೊಂಡ, ಶೂರ್ಪಾಲಿ ಗ್ರಾಪಂ ಅಧ್ಯಕ್ಷ ಮುತ್ತಪ್ಪ ಕುಂಬಾರ, ಕುಂಬಾರಹಳ್ಳದ ಪರಮಾನಂದ ಪೂಜಾರಿ, ಮೈಗೂರಿನ ಮಹಾವೀರ ನ್ಯಾಮಗೌಡ, ವಿಠuಲ ಶಿಂಧೆ, ದಾದೇಲಿ ಭೂತಾಳಿ, ರಾಯಬಾ ಜಾಧವ ಇದ್ದರು.

 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.