ಬಣ್ಣದ ಮಳೆ..!


Team Udayavani, Mar 12, 2020, 3:51 PM IST

bk-tdy-1

ಬಾಗಲಕೋಟೆ: ನಗರದ ಕಾಲೇಜು ರಸ್ತೆಯಲ್ಲಿ ಬುಧವಾರ ನಡೆದ ಬಣ್ಣದಾಟ ಜಲಯುದ್ಧದಂತೆ ಕಂಡು ಬಂತು. ಎತ್ತಿನ ಚಕ್ಕಡಿ, ಟ್ರ್ಯಾಕ್ಟರ್‌ಗಳಲ್ಲಿ ಬಣ್ಣ ತುಂಬಿಕೊಂಡು ಬಂದ ಸಾವಿರಾರು ಜನರು ಪರಸ್ಪರ ಬಣ್ಣ ಎರಚುವ ಮೂಲಕ ರಂಗದೋಕುಳಿಗೆ ಕಳೆ ತಂದರು. ಈ ಸಂದರ್ಭ ಬಣ್ಣದ ಮಳೆ ಸುರಿಯಿತೇನೋ ಎಂಬಂತೆ ಭಾಸವಾಯಿತು.

ಯುವಕರ ಕೇಕೆ, ಶಿಳ್ಳೆ ಹಾಕುತ್ತ ಹಲಗೆ ಬಾರಿಸುತ್ತ ಹೊಯ್ಕೊಳ್ಳುವ ಸಂಭ್ರಮ ಇಮ್ಮಡಿಗೊಂಡಿತ್ತು. ಬಣ್ಣದೋಕುಳಿಯ ಎರಡನೇ ದಿನದ ಸರದಿ ಜೈನಪೇಟೆ, ಕೌಲಪೇಟೆ, ಹಳೇಪೇಟೆ, ವೆಂಕಟಪೇಟೆ ನಾಗರಿಕರದ್ದಾಗಿತ್ತು. ಕೌಲಪೇಟೆಯಿಂದ ಚಕ್ಕಡಿ-ಹತ್ತಾರು ಟ್ರ್ಯಾಕ್ಟರ್‌ಗಳಿದ್ದ ಒಂದು ತಂಡ, ಇನ್ನೊಂದು ಕಡೆಯಿಂದ ವೆಂಕಟಪೇಟೆಯಿಂದ ಅಷ್ಟೇ ಪ್ರಮಾಣದ ಚಕ್ಕಡಿ-ಟ್ರ್ಯಾಕ್ಟರ್‌ ಹೊಂದಿದ್ದ ಮತ್ತೂಂದು ತಂಡ ಬಸವೇಶ್ವರ ಕಾಲೇಜು ರಸ್ತೆಯಲ್ಲಿ ಮುಖಾಮುಖೀಯಾಗಿ ಬಣ್ಣದ ಕಾಳಗ ಶುರು ಮಾಡಿದವು. ಈ ಸಂದರ್ಭದಲ್ಲಿ ಇಡೀ ಪ್ರದೇಶ ರಂಗೇರಿತ್ತು. ಇದರ ಮಧ್ಯೆಯೇ ಕುಣಿದು ಕುಪ್ಪಳಿಸುವ ಯುವಕರ ತಂಡಗಳು ಸಾಲು ಸಾಲು ನಿಂತಿರುವ ಬಣ್ಣದ ಬ್ಯಾರಲ್‌ಗ‌ಳಿಗೆ ಪ್ರಮುಖ ಗುರಿಯಾದವು. ರಸ್ತೆಯುದ್ಧಕ್ಕೂ ಬಣ್ಣದ ಸುರಿಮಳೆ ಸುರಿಯಿತು.

ಬೆಳಗ್ಗೆಯಿಂದಲೇ ನಗರದ ವಿವಿಧ ಬಡಾವಣೆ, ಗಲ್ಲಿಗಳಲ್ಲಿ ಹಲಗೆ ಸದ್ದು ಕೇಳಿ ಬಂತು. ಅಲ್ಲಲ್ಲಿ ಬೈಕ್‌ಗಳಲ್ಲಿ ಬಂದ ಯುವಕರು ಬಣ್ಣ ಎರಚುತ್ತಿರುವ ದೃಶ್ಯ ಕಂಡು ಬಂತು. ಮಧ್ಯಾಹ್ನದ ನಂತರ ವೆಂಕಟಪೇಟೆ ಯುವಕರು, ಹಳಪೇಟೆ, ಜೈನಪೇಟೆ ಯುವಕರು ಟೇಕಿನಮಠ ಮುಖಾಂತರ ಕಾಲೇಜು ರಸ್ತೆಯಲ್ಲಿ ಎದುರಾದಾಗ ಓಕುಳಿಯಾಡಿದರು.

ರಸ್ತೆ ಇಕ್ಕೆಲಗಳಲ್ಲಿ ಬಕೇಟ್‌, ಬ್ಯಾರಲ್‌ಗ‌ಳಲ್ಲಿ ತುಂಬಿಟ್ಟಿದ್ದ ಬಣ್ಣವನ್ನು ಮಕ್ಕಳು ಪಿಚಕಾರಿಯಲ್ಲಿ ತುಂಬಿಕೊಂಡು ಹೋಗುವವರಿಗೆ ಎರಚುತ್ತಿರುವ ದೃಶ್ಯ ಕಂಡು ಬಂತು. ಕೆಲ ಮಕ್ಕಳು ಮಕ್ಕಳು ಬಣ್ಣದ ನೀರಲ್ಲಿ ಮಿಂದೆದ್ದರು. ಮಹಿಳೆಯರು ಸಹ ಹೋಳಿಯಲ್ಲಿ ಸಂಭ್ರಮದಿಂದ ಭಾಗವಹಿಸಿದ್ದು ವಿಶೇಷವಾಗಿತ್ತು.

ಕಾಲೇಜು ರಸ್ತೆಯ ಇಕ್ಕೆಲಗಳಲ್ಲಿ ಓಕುಳಿ ನೋಡಲೆಂದೇ ಬಂದ ಸಹಸ್ರಾರು ಸಂಖ್ಯೆಯ ಮಹಿಳೆಯರು ಬಣ್ಣ ಎರಚುವವರನ್ನು ಹುರಿದುಂಬಿಸಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.