ನಿರಾಶ್ರಿತರಿಗೆ ಸರ್ಕಾರದಿಂದಲೇ ಮನೆ

•ನಂದಗಾವ ಸಂಪೂರ್ಣ ಸ್ಥಳಾಂತರ: ಸಿಎಂ ಭರವಸೆ•ಹಾನಿಗೊಳಗಾದ ಮನೆ, ಬೆಳೆಗೆ ಸೂಕ್ತ ಪರಿಹಾರ

Team Udayavani, Aug 9, 2019, 11:25 AM IST

bk-tdy-2

ಬಾಗಲಕೋಟೆ: ಮುಧೋಳ ತಾಲೂಕಿನ ನಂದಗಾಂವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ನಿರಾಶ್ರಿತರ ಸಮಸ್ಯೆ ಆಲಿಸಿದರು.

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ಸಂಪೂರ್ಣ ಮುಳುಗಡೆ ಆಗಿರುವ ಮುಧೋಳ ತಾಲೂಕಿನ ನಂದಗಾಂವದ ನಿರಾಶ್ರಿತರಿಗೆ ಸರ್ಕಾರದಿಂದ ಸ್ವಂತ ಮನೆ ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು.

ಗುರುವಾರ ಸಂಜೆ ಮುಧೋಳ ತಾಲೂಕು ನಂದಗಾವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಅವರು, ನಿರಾಶ್ರೀತರ ಮನವಿ ಆಲಿಸಿದರು. ಬಳಿಕ ಮಾತನಾಡಿದ ಅವರು, ನಂದಗಾಂವ ಪ್ರತಿ ಬಾರಿ ಘಟಪ್ರಭಾ ನದಿ ತುಂಬಿ ಹರಿದರೆ ಸಮಸ್ಯೆ ಅನುಭವಿಸುತ್ತಿದೆ ಎಂದು ಇಲ್ಲಿನ ಶಾಸಕರು ಮಾಹಿತಿ ನೀಡಿದ್ದಾರೆ. ಹೀಗಾಗಿ ಈ ಗ್ರಾಮವನ್ನು ಶಾಶ್ವತವಾಗಿ ಸ್ಥಳಾಂತರಿಸಲಾಗುವುದು ಎಂದರು.

ನಂದಗಾಂವ ಗ್ರಾಮದ ನಿರಾಶ್ರಿತರಿಗೆ ಸರ್ಕಾರದಿಂದಲೇ ಸ್ವಂತ ಮನೆ ಕಟ್ಟಿಕೊಡಲಾಗುವುದು. ಅಲ್ಲದೇ ಈಗಾಗಲೇ ಸಾಲ ಮನ್ನಾ ಯೋಜನೆಯಡಿ ಅರ್ಧಮರ್ಧ ಸಾಲ ಮನ್ನಾ ಆಗಿದ್ದಲ್ಲಿ, ಅವರ ಸಾಲವನ್ನು ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು. ಆದರೆ, ಖಾಸಗಿ ಸಾಲ ಮನ್ನಾ ಮಾಡಲು ನಿಯಮಾವಳಿ ಪ್ರಕಾರ ಅವಕಾಶವಿಲ್ಲ ಎಂದು ತಿಳಿಸಿದರು.

ಸ್ಥಳಾಂತರಗೊಂಡರೆ ಮಾತ್ರ: ಗ್ರಾಮಸ್ಥರು ಸಂಪೂರ್ಣವಾಗಿ ಸ್ಥಳಾಂತರಗೊಳ್ಳಬೇಕು. ಈಗ ಪ್ರವಾಹದಿಂದ ಹಾನಿಗೊಳಗಾದ ಮನೆ, ಬೆಳೆಗೆ ಸೂಕ್ತ ಪರಿಹಾರ ನೀಡಲಾಗುವುದು. ಸ್ಥಳಾಂತರಗೊಳ್ಳಲು ಸಿದ್ಧರಿಲ್ಲದಿದ್ದರೆ ಸರ್ಕಾರದಿಂದ ಸೌಲಭ್ಯ ಕಲ್ಪಿಸಲು ಸಾಧ್ಯವಿಲ್ಲ. ಹೀಗಾಗಿ ಬೇರೆಡೆ ಸ್ಥಳಾಂತರಕ್ಕೆ ಸಿದ್ಧರಾಗಬೇಕು ಎಂದು ತಿಳಿಸಿದರು.

ಸಮೀಕ್ಷೆಗೆ ಸೂಚನೆ: ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ನದಿಗಳ ಪ್ರವಾಹದಿಂದ ಎಷ್ಟು ಮನೆ, ಬೆಳೆ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗಿದೆ ಎಂಬುದರ ಸಮೀಕ್ಷೆ ಮಾಡಿ, ತಕ್ಷಣ ವರದಿ ಕಲ್ಪಿಸಬೇಕು. ಆಸ್ತಿ ಹಾಗೂ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ವಿವಿಧ ಪರಿಹಾರ ಕೇಂದ್ರಕ್ಕೆ ಭೇಟಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಜಲವಾವೃತಗೊಂಡು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ ನಂದಗಾಂವ, ಮಳಲಿ, ಮುಧೋಳ ನಗರದ ಪರಿಹಾರ ಕೇಂದ್ರಗಳಲ್ಲಿ ಭೇಟಿ ನೀಡಿ, ಸಮಸ್ಯೆ ಆಲಿಸಿದರು. ನಿರಾಶ್ರಿತರಿಗೆ ನೀಡುತ್ತಿರುವ ಊಟ, ಉಪಹಾರ ಹಾಗೂ ಸೌಲಭ್ಯಗಳ ಕುರಿತು ನೇರವಾಗಿ ನಿರಾಶ್ರಿತರಿಗೆ ಮಾತನಾಡಿಸಿ, ಮಾಹಿತಿ ಪಡೆದರು.

ಶಾಸಕರಾದ ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ವಿಧಾನಪರಿಷತ್‌ ಸದಸ್ಯರಾದ ರವಿಕುಮಾರ, ಹನಮಂತ ನಿರಾಣಿ ಮುಂತಾದವರು ಉಪಸ್ಥಿತರಿದ್ದರು.

ಯುಕೆಪಿ ಮಾದರಿ ಪರಿಹಾರ ಕೊಡಿ:

ನಾವು ಪ್ರವಾಹದಿಂದ ಮನೆ ಮುಳುಗಡೆ ಆಗಿದೆ. ಇದು ನದಿಗೆ ನೀರು ಬಂದಾಗೊಮ್ಮೆ ಸಮಸ್ಯೆ ಆಗುತ್ತಿದೆ. ನಮ್ಮ ಮನೆಗಳನ್ನು ಮುಳುಗಡೆ ಎಂದು ಘೋಷಿಸಿ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಮುಳುಗಡೆ ಮನೆಗೆ ನೀಡಿದ ಪರಿಹಾರದ ಮಾದರಿಯಲ್ಲಿ ನಮಗೂ ಪರಿಹಾರ ನೀಡಬೇಕು. ಸರ್ಕಾರದಿಂದ ಸೂಕ್ತ ಪರಿಹಾರ ನೀಡುವ ಜತೆಗೆ ಈಗ ಬೆಳೆ ಹಾನಿಗೂ ಪರಿಹಾರ ಕೊಡಬೇಕು ಎಂದು ನಿರಾಶ್ರಿತರು ಸಿಎಂಗೆ ಮನವಿ ಮಾಡಿದರು. ಯುಕೆಪಿ ಮಾದರಿ ಪರಿಹಾರ ಕೊಡುವ ಕುರಿತು ಸಿಎಂ ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.