ನಿರಾಶ್ರಿತರಿಗೆ ಸರ್ಕಾರದಿಂದಲೇ ಮನೆ
•ನಂದಗಾವ ಸಂಪೂರ್ಣ ಸ್ಥಳಾಂತರ: ಸಿಎಂ ಭರವಸೆ•ಹಾನಿಗೊಳಗಾದ ಮನೆ, ಬೆಳೆಗೆ ಸೂಕ್ತ ಪರಿಹಾರ
Team Udayavani, Aug 9, 2019, 11:25 AM IST
ಬಾಗಲಕೋಟೆ: ಮುಧೋಳ ತಾಲೂಕಿನ ನಂದಗಾಂವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ನಿರಾಶ್ರಿತರ ಸಮಸ್ಯೆ ಆಲಿಸಿದರು.
ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ಸಂಪೂರ್ಣ ಮುಳುಗಡೆ ಆಗಿರುವ ಮುಧೋಳ ತಾಲೂಕಿನ ನಂದಗಾಂವದ ನಿರಾಶ್ರಿತರಿಗೆ ಸರ್ಕಾರದಿಂದ ಸ್ವಂತ ಮನೆ ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ಗುರುವಾರ ಸಂಜೆ ಮುಧೋಳ ತಾಲೂಕು ನಂದಗಾವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಅವರು, ನಿರಾಶ್ರೀತರ ಮನವಿ ಆಲಿಸಿದರು. ಬಳಿಕ ಮಾತನಾಡಿದ ಅವರು, ನಂದಗಾಂವ ಪ್ರತಿ ಬಾರಿ ಘಟಪ್ರಭಾ ನದಿ ತುಂಬಿ ಹರಿದರೆ ಸಮಸ್ಯೆ ಅನುಭವಿಸುತ್ತಿದೆ ಎಂದು ಇಲ್ಲಿನ ಶಾಸಕರು ಮಾಹಿತಿ ನೀಡಿದ್ದಾರೆ. ಹೀಗಾಗಿ ಈ ಗ್ರಾಮವನ್ನು ಶಾಶ್ವತವಾಗಿ ಸ್ಥಳಾಂತರಿಸಲಾಗುವುದು ಎಂದರು.
ನಂದಗಾಂವ ಗ್ರಾಮದ ನಿರಾಶ್ರಿತರಿಗೆ ಸರ್ಕಾರದಿಂದಲೇ ಸ್ವಂತ ಮನೆ ಕಟ್ಟಿಕೊಡಲಾಗುವುದು. ಅಲ್ಲದೇ ಈಗಾಗಲೇ ಸಾಲ ಮನ್ನಾ ಯೋಜನೆಯಡಿ ಅರ್ಧಮರ್ಧ ಸಾಲ ಮನ್ನಾ ಆಗಿದ್ದಲ್ಲಿ, ಅವರ ಸಾಲವನ್ನು ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು. ಆದರೆ, ಖಾಸಗಿ ಸಾಲ ಮನ್ನಾ ಮಾಡಲು ನಿಯಮಾವಳಿ ಪ್ರಕಾರ ಅವಕಾಶವಿಲ್ಲ ಎಂದು ತಿಳಿಸಿದರು.
ಸ್ಥಳಾಂತರಗೊಂಡರೆ ಮಾತ್ರ: ಗ್ರಾಮಸ್ಥರು ಸಂಪೂರ್ಣವಾಗಿ ಸ್ಥಳಾಂತರಗೊಳ್ಳಬೇಕು. ಈಗ ಪ್ರವಾಹದಿಂದ ಹಾನಿಗೊಳಗಾದ ಮನೆ, ಬೆಳೆಗೆ ಸೂಕ್ತ ಪರಿಹಾರ ನೀಡಲಾಗುವುದು. ಸ್ಥಳಾಂತರಗೊಳ್ಳಲು ಸಿದ್ಧರಿಲ್ಲದಿದ್ದರೆ ಸರ್ಕಾರದಿಂದ ಸೌಲಭ್ಯ ಕಲ್ಪಿಸಲು ಸಾಧ್ಯವಿಲ್ಲ. ಹೀಗಾಗಿ ಬೇರೆಡೆ ಸ್ಥಳಾಂತರಕ್ಕೆ ಸಿದ್ಧರಾಗಬೇಕು ಎಂದು ತಿಳಿಸಿದರು.
ಸಮೀಕ್ಷೆಗೆ ಸೂಚನೆ: ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ನದಿಗಳ ಪ್ರವಾಹದಿಂದ ಎಷ್ಟು ಮನೆ, ಬೆಳೆ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗಿದೆ ಎಂಬುದರ ಸಮೀಕ್ಷೆ ಮಾಡಿ, ತಕ್ಷಣ ವರದಿ ಕಲ್ಪಿಸಬೇಕು. ಆಸ್ತಿ ಹಾಗೂ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ವಿವಿಧ ಪರಿಹಾರ ಕೇಂದ್ರಕ್ಕೆ ಭೇಟಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಜಲವಾವೃತಗೊಂಡು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ ನಂದಗಾಂವ, ಮಳಲಿ, ಮುಧೋಳ ನಗರದ ಪರಿಹಾರ ಕೇಂದ್ರಗಳಲ್ಲಿ ಭೇಟಿ ನೀಡಿ, ಸಮಸ್ಯೆ ಆಲಿಸಿದರು. ನಿರಾಶ್ರಿತರಿಗೆ ನೀಡುತ್ತಿರುವ ಊಟ, ಉಪಹಾರ ಹಾಗೂ ಸೌಲಭ್ಯಗಳ ಕುರಿತು ನೇರವಾಗಿ ನಿರಾಶ್ರಿತರಿಗೆ ಮಾತನಾಡಿಸಿ, ಮಾಹಿತಿ ಪಡೆದರು.
ಶಾಸಕರಾದ ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ವಿಧಾನಪರಿಷತ್ ಸದಸ್ಯರಾದ ರವಿಕುಮಾರ, ಹನಮಂತ ನಿರಾಣಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್