ವಚನ ಪಾಲಿಸಿದರೆ ಸಿಎಂಗೆ ಸನ್ಮಾನ; ಮಾತು ತಪ್ಪಿದರೆ ಹೋರಾಟ

­ಪಂಚಮಸಾಲಿ ಮೀಸಲಾತಿ ಹೋರಾಟ ­ಡಿ. 22ರಂದು ಬೆಳಗಾವಿ ಚಲೋ

Team Udayavani, Nov 29, 2022, 12:31 PM IST

11

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ. 19 ರೊಳಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ಕಲ್ಪಿಸುವ ಭರವಸೆ ನೀಡಿದ್ದಾರೆ. ಈ ಬೇಡಿಕೆ ಈಡೇರದಿದ್ದರೆ ಉದ್ಧೇಶಿಸಿದಂತೆ ಡಿ. 22 ರಂದು 25 ಲಕ್ಷ ಜನರನ್ನು ಸೇರಿಸಿ ಬೆಳಗಾವಿಯಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಂಡಿರುವುದಾಗಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಿತಿ ಗೌರವಾಧ್ಯಕ್ಷ ಎಂ.ಎಸ್‌. ರುದ್ರಗೌಡರ, ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ. ಪಾಟೀಲ ಹೇಳಿದರು.

ಸೋಮವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಈಚೆಗೆ ನಮ್ಮ ಸಮುದಾಯದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಸಚಿವರಾದ ಸಿ.ಸಿ. ಪಾಟೀಲ, ಶಂಕರ ಪಾಟೀಲ ಮುನೇನಕೊಪ್ಪ, ಸಮುದಾಯದ ಸುಮಾರು 15 ಶಾಸಕರು ಪಾಲ್ಗೊಂಡಿದ್ದ ಸಭೆಯಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಾರಿ ಖಚಿತ ಭರವಸೆ ನೀಡಿದ್ದಾರೆ. ಹೀಗಾಗಿ ಸಮುದಾಯದ ನಾಯಕರಲ್ಲೂ ಬೊಮ್ಮಾಯಿ ಅವರ ಮಾತಿನ ಮೇಲೆ ಭರವಸೆ ಮೂಡಿದೆ ಎಂದರು.

ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಿದ್ದು, ಬಾಕಿ ಇರುವ ಕೆಲವೇ ಜಿಲ್ಲೆಗಳ ಅಧ್ಯಯನ ಪ್ರವಾಸ ಮುಗಿಸಲಿದೆ. ಶೀಘ್ರವೇ ಹಿಂದುಳಿದ ವರ್ಗಗಳ ಆಯೋಗದ ವರದಿ ತರಿಸಿಕೊಂಡು ಡಿ. 19ರೊಳಗೆ ಪಂಚಮಸಾಲಿ ಸಮಾಜಕ್ಕೆ ಮೀಸಲು ಕಲ್ಪಿಸುವ ಕುರಿತು ಸರ್ಕಾರ ಭರವಸೆ ನೀಡಿದೆ ಎಂದರು.

ಸರ್ಕಾರ ಭರವಸೆ ನೀಡಿದ್ದರೂ ಮೀಸಲಾತಿ ಹೋರಾಟದ ಕುರಿತು ಸಮಾಜದ ಸಂಘಟನೆ ಮುಂದುವರಿಯಲಿದೆ. ಡಿ. 12ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಸಮಾವೇಶದ ಸ್ಥಳವನ್ನು ಡಿ. 22 ಕ್ಕೆ ಮುಂದೂಡಿ ಬೆಳಗಾವಿಗೆ ಸ್ಥಳಾಂತರ ಮಾಡಲಾಗಿದೆ. ಸರ್ಕಾರ ನಿಗದಿತ ದಿನದಂದು ಮೀಸಲು ಕಲ್ಪಿಸಿದರೆ ಅಧಿವೇಶನಕ್ಕಾಗಿ ಬೆಳಗಾವಿಗೆ ಬರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಲಾಗುತ್ತದೆ. ಭರವಸೆ ಈಡೇರದಿದ್ದರೆ ಬೆಳಗಾವಿಯಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಕುರಿತ ಹೋರಾಟಕ್ಕೆ ಮೂರು ದಶಕಗಳ ಇತಿಹಾಸವಿದೆ. ಸಚಿವರಾಗಿದ್ದ ಎಸ್‌.ಆರ್‌. ಕಾಶಪ್ಪನವರ ಕಾಲದಿಂದಲೂ ಹೋರಾಟ ನಡೆದಿದೆ. ಕಳೆದ ಎರಡು ವರ್ಷಗಳಿಂದ ನಿರಂತರ ಹೋರಾಟ ನಡೆಸಿದ್ದೇವೆ. ಕೂಡಲಸಂಗಮದಿಂದ ಬೆಂಗಳೂರಿಗೆ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ, ಬೃಹತ್‌ ಸಮಾವೇಶ, ರಕ್ತದಾನ, ಧರಣಿ, ಉಪವಾಸ ಸತ್ಯಾಗ್ರಹದಂಥ ಹೋರಾಟಗಳನ್ನು ಮಾಡುತ್ತಲೇ ಬರುತ್ತಿದ್ದೇವೆ. ಇದು ನಮ್ಮ ಅಂತಿಮ ಹೋರಾಟ ಎಂದರು.

ಹೋರಾಟ ತೀವ್ರಗೊಳಿಸಲು ರಾಜ್ಯಾದ್ಯಂತ ತಾಲೂಕು ಮಟ್ಟದಲ್ಲಿ ಹೋರಾಟ ಸಮಿತಿ ರಚಿಸಲಾಗುತ್ತಿದ್ದು ಪ್ರಮಖ ಪದಾಧಿಕಾರಿಗಳ ನೇಮಕ ನಡೆದಿದೆ. ವಿಜಯಪುರ ಜಿಲ್ಲೆಯ ಏಳು ತಾಲೂಕುಗಳಿಗೆ ಮೀಸಲು ಹೋರಾಟ ಸಮಿತಿಗೆ ಗೌರವಾಧ್ಯಕ್ಷರನ್ನು ನೇಮಿಸಲಾಗಿದೆ. ಇತರೆ ತಾಲೂಕುಗಳಿಗೆ ಶೀಘ್ರವೇ ನೇಮಕ ನಡೆಯಲಿದೆ ಎಂದರು.

ಇಂಡಿ ತಾಲೂಕು ಎಸ್‌.ಎ. ಪಾಟೀಲ ಡೊಮನಾಳ, ಬಬಲೇಶ್ವರ ತಾಲೂಕ ಬಿ.ಎಸ್‌. ಬಿರಾದಾರ, ವಿಜಯಪುರ ತಾಲೂಕಿಗೆ ಪ್ರೇಮಾನಂದ ಬಿರಾದಾರ, ಸಿಂದಗಿ ತಾಲೂಕು ಚಂದ್ರಶೇಖರ ನಾಗರಬೆಟ್ಟ, ಮುದ್ದೇಬಿಹಾಳ ತಾಲೂಕಿಗೆ ಅಮರಪ್ಪ ಗಂಗನಗೌಡ್ರು, ಬಸವನಬಾಗೇವಾಡಿಗೆ ಶ್ರೀಕಾಂತ ಕೊಟ್ರಶೆಟ್ಟಿ, ತಿಕೋಟಾಕ್ಕೆ ಅಶೋಕ ಬಿರಾದಾರ (ಬಾಬಾನಗರ) ಅವರನ್ನು ಗೌರವಾಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ವಿವರಿಸಿದರು.

ಎಸ್‌.ಎ. ಪಾಟೀಲ, ಬಿ.ಎಸ್‌. ಬಿರಾದಾರ, ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ, ಮಲ್ಲಿಕಾರ್ಜುನ ಹಂಗರಗಿ, ಚಂದ್ರಶೇಖರ ನಾಗರಬೆಟ್ಟ, ಅಶೋಕ ಎಂ.ಬಿರಾದಾರ, ಅಯ್ಯನಗೌಡ ಬಿರಾದಾರ, ರಾಜು ಕುಲಕರ್ಣಿ, ನೀಲಕಂಠಗೌಡ ಪಾಟೀಲ, ಪ್ರಭಾಕರ ಬಗಲಿ, ರಾಜುಗೌಡ ಪಾಟೀಲ ಇದ್ದರು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.