ವಲಸಿಗರಿಗೆ ಹಾಸ್ಟೆಲ್‌ ವಾಸ

14 ದಿನ ಕ್ವಾರಂಟೈನ್‌ಗೆ ವಸತಿ ನಿಲಯ; ಗ್ರಾಮಗಳಲ್ಲಿ ಸ್ವತ್ಛತಾ ಕಾರ್ಯ ಕೈಗೊಳ್ಳಿ

Team Udayavani, May 14, 2020, 1:36 PM IST

ವಲಸಿಗರಿಗೆ ಹಾಸ್ಟೆಲ್‌ ವಾಸ

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಬೇರೆ ಬೇರೆ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಸಾರ್ವಜನಿಕರು ಮತ್ತು ಕಾರ್ಮಿಕರನ್ನು ಕ್ವಾರಂಟೈನ್‌ ಮಾಡಲು ಜಿಲ್ಲೆಯ ಎಲ್ಲ ವಸತಿ ನಿಲಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳ ಪಟ್ಟಿ ಸಲ್ಲಿಸಬೇಕು. ಅಲ್ಲದೇ ವಸತಿ ನಿಲಯಗಳಲ್ಲಿ ಎಷ್ಟು ಕೊಠಡಿಗಳಿಗೆ, ಎಷ್ಟು ಜನರನ್ನು ಕ್ವಾರಂಟೈನ್‌ ಮಾಡಲು ಸಾಧ್ಯವೆಂದು ಕುರಿತ ಮಾಹಿತಿಯನ್ನು  ತುರ್ತಾಗಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬೇರೆ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್‌: ದಿನದಿಂದ ದಿನಕ್ಕೆ ಬೇರೆ ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಬಾಗಲಕೋಟೆ ಜಿಲ್ಲೆಗೆ ಆಗಮಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ಹೆಚ್ಚಾಗಿರುವ ರಾಜ್ಯದಿಂದ ಬರುವ ವ್ಯಕ್ತಿಗಳನ್ನು ಇನ್ಸ್ಟಿಟ್ಯೂಶನ್‌ ಕ್ವಾರಂಟೈನ್‌ ಮಾಡುವ ಅಗತ್ಯವಿದ್ದು, ಮೊದಲು ತಾಲೂಕಾ ಕೇಂದ್ರದಲ್ಲಿರುವ ವಸತಿ ನಿಲಯಗಳನ್ನು ಸಿದ್ಧಗೊಳಿಸಿ ಅಲ್ಲಿ ಊಟದ ವ್ಯವಸ್ಥೆ ಕೂಡಾ ಮಾಡಬೇಕು. ನಂತರ ಗ್ರಾಮೀಣ ಭಾಗದಲ್ಲಿರುವ ವಸತಿ ನಿಲಯ ಬಳಸಿಕೊಳ್ಳಲಾಗುವುದು. ಇವುಗಳನ್ನು ಹೊರತುಪಡಿಸಿ ತಾಲೂಕುವಾರು ಕೆಲವೊಂದು ಶಾಲೆಗಳನ್ನು ಸಹ ಗುರುತಿಸಿ ಇಟ್ಟುಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.

ವಲಸಿಗರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಇದ್ದಲ್ಲಿ ಖಾಸಗಿ ಹೋಟೆಲ್‌, ಕಲ್ಯಾಣ ಮಂಟಪಗಳನ್ನು ಸಹ ಬಳಸಿಕೊಳ್ಳಲಾಗುವುದು. ಈಗಾಗಲೇ ಗುರುತಿಸಬೇಕು. ನಗರ ಮತ್ತು ಗ್ರಾಮಗಳಲ್ಲಿ
ಸ್ವಚ್ಛತಾ ಕಾರ್ಯ ಕೈಗೊಳ್ಳಲು ಸೂಚಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉಪಸ್ಥಿತರಿದ್ದರು.

717 ಜನರಿಗೆ ಸರ್ಕಾರಿ ಕ್ವಾರಂಟೈನ್‌
ಲಾಕ್‌ಡೌನ್‌ ಸಡಿಲಿಕೆ ಬಳಿಕ ಜಿಲ್ಲೆಗೆ ಆಗಮಿಸಿರುವ ಒಟ್ಟು 717 ಜನರಿಗೆ ಜಿಲ್ಲಾಡಳಿತವೇ ವಿವಿಧ ವಸತಿ ನಿಲಯ, ಶಾಲೆಗಳಲ್ಲಿ ಕ್ವಾರಂಟೈನ್‌ ಮಾಡಿದ್ದು, ಅವರ ಆರೋಗ್ಯದ ಕುರಿತು ನಿರಂತರಾಗಿ ನಿಗಾ ವಹಿಸಲಾಗಿದೆ. ಅಲ್ಲದೇ 876 ಜನರು ಹೋಂ ಕ್ವಾರಂಟೈನ್‌ ನಲ್ಲಿದ್ದಾರೆ. ಈ ವರೆಗೆ 4494 ಜನರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 4247 ಜನರ ವರದಿ ನೆಗೆಟಿವ್‌ ಬಂದಿವೆ. 68 ಜನರಿಗೆ ಪಾಜಿಟಿವ್‌ ಬಂದಿದ್ದು, ಅದರಲ್ಲಿ 27 ಜನರು ಕೋವಿಡ್ ದಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಓರ್ವ ವೃದ್ಧ ಮೃತಪಟ್ಟಿದ್ದು, ಇನ್ನುಳಿದ 40 ಜನ ಸೋಂಕಿತರಿಗೆ ಜಿಲ್ಲಾ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಗಲಕೋಟೆ, ಮುಧೋಳ, ಬಾದಾಮಿ, ಜಮಖಂಡಿ ಹಾಗೂ ಬನಹಟ್ಟಿಯಲ್ಲಿ ಒಟ್ಟು 12 ಪ್ರದೇಶಗಳಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಆ ಎಲ್ಲಾ ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಆ ಪ್ರದೇಶದ ಜನರಿಗೆ ದಿನ ಬಳಕೆಯ ವಸ್ತುಗಳ ಪೂರೈಕೆಗಾಗಿ ಆಯಾ ತಾಲೂಕು ಆಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮಂಗಳವಾರದವರೆಗೆ ಕಳುಹಿಸಿದ್ದ 65 ಹಾಗೂ ಬುಧವಾರ ಮತ್ತೆ 99 ಸ್ಯಾಂಪಲ್‌ ಕಳುಹಿಸಿದ್ದು, ಒಟ್ಟು 164 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಡಾ|ರಾಜೇಂದ್ರ ತಿಳಿಸಿದ್ದಾರೆ.

ಮುಗಳಖೋಡ ಈಗ ಕೊರೊನಾ ಮುಕ್ತ
ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮವೀಗ ಕೋವಿಡ್ ಮುಕ್ತವಾಗಿದೆ. ಈ ಗ್ರಾಮದ 27 ವರ್ಷದ ಯುವಕ ಕೊರೊನಾದಿಂದ ಗುಣಮುಖವಾಗಿ ಬಿಡುಗಡೆಗೊಂಡಿದ್ದು, ಆ ಬಳಿಕ ಒಂದೂ ಸೋಂಕು ಪತ್ತೆಯಾಗಿಲ್ಲ. ಹೀಗಾಗಿ ಗ್ರಾಮದ ಕಂಟೈನ್‌ಮೆಂಟ್‌ ಪ್ರದೇಶ, ನಿರ್ಬಂಧದಿಂದ ಮುಕ್ತಗೊಳಿಸಲಾಗಿದೆ. ಯಾವುದೇ ಪ್ರದೇಶದಲ್ಲಿ ಮೊದಲು ಸೋಂಕಿತರು ಕಂಡು ಬಂದ 28 ದಿನಗಳ ಬಳಿಕ ಹೊಸ ಸೋಂಕಿತರು ಕಂಡು ಬರದೇ ಇದ್ದಲ್ಲಿ ಅದನ್ನು ಸೋಂಕು ಮುಕ್ತ ಎಂದು ಘೋಷಿಸಬಹುದಾಗಿದೆ. ಈ ಹಿನ್ನಲೆಯಲ್ಲಿ ಮುಗಳಖೋಡ ಗ್ರಾಮದಲ್ಲಿ ಏಪ್ರಿಲ್‌ 12ರಂದು ಪಿ-240 ಓರ್ವ ವ್ಯಕ್ತಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು.

ಸೋಂಕು ಕಂಡು ಬಂದ 28 ದಿನಗಳ ಬಳಿಕ ಯಾವುದೇ ಸೋಂಕಿತರು ಕಂಡುಬಂದಿಲ್ಲ. ನಂತರ ಅವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರೆಲ್ಲರ ಹೋಮ್‌ ಕ್ವಾರಂಟೈನ್‌ ಪೂರ್ಣಗೊಂಡಿರುವುದರಿಂದ ಮುಗಳಖೋಡ ಗ್ರಾಮವನ್ನು ಕೋವಿಡ್‌ ಮುಕ್ತ ಗ್ರಾಮವೆಂದು ಘೋಷಿಸಿ ಕಂಟೇನ್‌ಮೆಂಟ್‌ ಝೋನ್‌ ತೆರವುಗೊಳಿಸಿರುವುದಾಗಿ ಜಿಲ್ಲಾ ವಿಪತ್ತು ನಿರ್ವಹಣೆ ಘಟಕದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ರಾಜೇಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.