ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಮೂರು ಬಾರಿ ನಮಸ್ಕಾರ ಮಾಡಿದರೂ ಮೋದಿ ಇವರತ್ತ ತಿರುಗಿಯೂ ನೋಡಲಿಲ್ಲ

Team Udayavani, May 2, 2024, 5:38 PM IST

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

■ ಉದಯವಾಣಿ ಸಮಾಚಾರ
ಬಾಗಲಕೋಟೆ: ವಿಜಯಪುರದವರು ಇಲ್ಲಿನ ಡಿಸಿಸಿ, ಸಕ್ಕರೆ ಕಾರ್ಖಾನೆ ಮೇಲೆ ಕಣ್ಣಿಟ್ಟು ಬಂದಿದ್ದಾರೆ ಎಂಬ ಬಿಜೆಪಿ ಶಾಸಕ ಯತ್ನಾಳ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಶಿವಾನಂದ ಪಾಟೀಲ, ನಾನು ಯಾವುದೇ ಸಂಘ-ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಲು ಬಂದಿಲ್ಲ. ಈ ಜಿಲ್ಲೆಯ ಜನರ ಸೇವೆ ಮಾಡಲು ಬಂದಿದ್ದೇನೆ ಎಂದು ತಿರುಗೇಟು ನೀಡಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಳೆದ 1987ರಿಂದ ರಾಜಕೀಯದಲ್ಲಿ ಇದ್ದೇನೆ. ಒಂದು ಸಣ್ಣ ಟಿಎಪಿಸಿಎಂಎಸ್‌ ನಿಂದ ರಾಜಕೀಯ ಆರಂಭಿಸಿದ್ದು, ಅದಕ್ಕೆ ದೊಡ್ಡ ಆಸ್ತಿ ಮಾಡಿದ್ದೇನೆ. ವಿಜಯಪುರ ನಗರಸಭೆ
ಅಧ್ಯಕ್ಷನಾಗಿದ್ದಾಗ ಶಾಸ್ತ್ರಿ ಮಾರುಕಟ್ಟೆ ಕಟ್ಟಿ ಆದಾಯ ಬರುವ ಕೆಲಸ ಮಾಡಿದ್ದೇನೆ. ಆಗ ವಿಜಯಪುರ ನಗರಸಭೆಗೆ 3,700 ಆಸ್ತಿಗಳು ಉಳಿಸಿದ್ದೆ. ಆದರೆ, ಅವುಗಳನ್ನು ಮಾರಾಟ ಮಾಡಿದವರು ಯಾರು ಎಂಬುದು ಯತ್ನಾಳಗೆ ಗೊತ್ತಿದೆ. ಬಿಜೆಪಿಯ ಇಬ್ಬರು ಶಾಸಕರೇ ನಗರಸಭೆ ಆಸ್ತಿ ಮಾರಲು ಕಾರಣ. ಇದರ ಬಗ್ಗೆ ಯತ್ನಾಳ ಹೇಳಲಿ ಎಂದು ಸವಾಲು ಹಾಕಿದರು.

ಬ್ಯಾಂಕ್‌-ಕಾರ್ಖಾನೆ ಹಾಳು ಮಾಡಿಲ್ಲ:
ಬಸವನಬಾಗೇವಾಡಿಯಲ್ಲಿ ಸರ್ಕಾರದಿಂದಲೇ ಎರಡು ಮಾದರಿ ಮೆಗಾ ಮಾರುಕಟ್ಟೆ ಮಳಿಗೆ ಕಟ್ಟಿದ್ದೇನೆ. ರಾಜ್ಯದಲ್ಲೇ ಮಾದರಿಯಾದ ಕಲ್ಯಾಣ ಮಂಟಪ ಕಟ್ಟಲಾಗಿದೆ. ನಾನು ಕಟ್ಟಿದ ಕಟ್ಟಡಗಳನ್ನು ಹೋಗಿ ಎಣಿಸಿಕೊಂಡು ಬರಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಿಕ ಪದ ಬಳಕೆಯೂ ಮಾಡಬೇಕು ಎಂದರು.

ಯತ್ನಾಳರು ಸಿದ್ದೇಶ್ವರ ಬ್ಯಾಂಕ್‌ ಅಧ್ಯಕ್ಷರಾಗಿದ್ದರು. ಅದು ಸೂಪರ್‌ಸೀಡ್‌ ಹಂತಕ್ಕೆ ಬಂದಿತ್ತು. ತಮ್ಮ ಸ್ವಂತ ಸಿದ್ದಸಿರಿ ಪತ್ತಿನ ಸಂಘ ಕಟ್ಟಿಕೊಂಡರು. ಇಂಡಿ ತಾಲೂಕಿನಲ್ಲಿ ನಾನು-ಅವರು ಕೂಡಿಯೇ ಸಕ್ಕರೆ ಕಾರ್ಖಾನೆ ಕಟ್ಟಿದ್ದೆವು. ಅದನ್ನೂ ಹಾಳು ಮಾಡಿದರು. ಹಲವು ರೈತರು, ಲಕ್ಷಾಂತರ ಹಣ ಬೋಜಾದಿಂದ ಸಂಕಷ್ಟದಲ್ಲಿದ್ದರು. ನಾನೇ ಅವರಿಗೆ ಹಣ ಕೊಡಿಸಿದೆ. ವಿಜಯಪುರ-ಬಾಗಲಕೋಟೆ ಜಿಲ್ಲೆಯಲ್ಲಿ 24 ಸಕ್ಕರೆ ಕಾರ್ಖಾನೆಗಳಿವೆ. ಪ್ರತಿಯೊಂದಕ್ಕೂ ನಾನು ಅಧ್ಯಕ್ಷನಾಗಿರುವ ಡಿಸಿಸಿ ಬ್ಯಾಂಕ್‌ನಿಂದ ಆರ್ಥಿಕ ನೆರವು ಕೊಡಿಸಿದ್ದೇನೆ. ಈತ ತನ್ನ ಸ್ವಂತದ ಕಾರ್ಖಾನೆ ಕಟ್ಟಿಕೊಂಡಿದ್ದಾನೆ. ಅದನ್ನು ಹೇಗೆ ಕಟ್ಟಿದ ಎಂದು ಹೇಳಲಿ ಎಂದು ಸವಾಲು ಹಾಕಿದರು.

ಮೋದಿ ತಿರುಗಿಯೂ ನೋಡಲಿಲ್ಲ: ಮಾತೆತ್ತಿದರೆ ಮೋದಿ ಎಂದು ಹೇಳುತ್ತಾರೆ. ಮೊನ್ನೆ ಬಾಗಲಕೋಟೆಯಲ್ಲಿ ಮೂರು ಬಾರಿ ನಮಸ್ಕಾರ ಮಾಡಿದರೂ ಮೋದಿ ಇವರತ್ತ ತಿರುಗಿಯೂ ನೋಡಲಿಲ್ಲ. ಇನ್ಯಾದರೂ ಮೋದಿ ಹೆಸರು ಹೇಳುವುದು ಬಿಡಲಿ ಎಂದರು.

ನೋಟಿಸ್‌ ಜಾರಿ: ಮೋದಿ ಕಾರ್ಯಕ್ರಮ ವೇಳೆ ರೋಜಾ ಮಾಡುವವರಿಗೆ ಟಿಕೆಟ್‌ ಕೊಟ್ಟಿದ್ದಾರೆ ಎಂದು ಧರ್ಮ ಅವಹೇಳನ ಮಾಡಿ ಯತ್ನಾಳ ಮಾತನಾಡಿದ್ದಾರೆ. ಈ ಕುರಿತು ಚುನಾವಣಾಧಿಕಾರಿಗೆ ದೂರು ನೀಡಿದ್ದು, ಅವರು ನೋಟಿಸ್‌ ಜಾರಿ ಮಾಡಿದ್ದಾರೆ. ಉತ್ತರ ಬಂದ ಬಳಿಕ ಪ್ರಕರಣ ದಾಖಲಿಸುವ ಕುರಿತೂ ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟ ಯತ್ನಾಳರಿಂದ ಹುಟ್ಟಿಲ್ಲ. ಅದು ಮೊದಲಿನಿಂದಲೂ ನಡೆಯುತ್ತಿದೆ. ಅಪ್ಪನಿಗೆ ಹುಟ್ಟಿದರೆ 2ಎ ಮೀಸಲಾತಿ ಕೊಡಿಸಲಿ ಎಂದು ಹೇಳುತ್ತಾನೆ. ಮೊದಲು ಆತ ಯಾರಿಗೆ ಹುಟ್ಟಿದ್ದಾನೆ ಎಂದು ಹೇಳಲಿ.
*ಶಿವಾನಂದ ಪಾಟೀಲ, ಸಚಿವ

ಟಾಪ್ ನ್ಯೂಸ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

1-pV

Bagalkote; ಅಬ್ಬರದ ಮಳೆ: ಸಿಡಿಲು ಬಡಿದು ಯುವಕ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.