3ರಂದು ಶ್ರೀ ಹುಚ್ಚೇಶ್ವರ ಮಹಾರಥೋತ್ಸವ


Team Udayavani, Feb 28, 2021, 3:57 PM IST

3ರಂದು ಶ್ರೀ ಹುಚ್ಚೇಶ್ವರ ಮಹಾರಥೋತ್ಸವ

ಕಮತಗಿ: ಪಟ್ಟಣದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದಿಂದ ಪ್ರತಿವರ್ಷ ನಡೆಯುವ “ಕಮತಪುರ ಉತ್ಸವ’ವನ್ನು ಮಾ.3ರಂದು ಕೋವಿಡ್‌ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷರು, ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಮುರಗೇಶ ಕಡ್ಲಿಮಟ್ಟಿ ತಿಳಿಸಿದರು.

ಶ್ರೀಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಮತಪುರ ಉತ್ಸವ ಪ್ರತಿವರ್ಷ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯುತ್ತಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಕೋವಿಡ್‌ ನಿಯಮ ಪಾಲಿಸಿ ಉತ್ಸವವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದರು. ಮಾರ್ಚ್‌ 3ರಂದು ಬೆಳಗಿನ ಜಾವ 5ಗಂಟೆಗೆ ಪಟ್ಟಣದ ಹಳೆಯ ರಥಬೀದಿಯಲ್ಲಿ ಬೆಳಗಿನ ಹುಚ್ಚಯ್ಯ ಲಘುರಥೋತ್ಸವ ಇದ್ದು, ಈ ಸಂದರ್ಭದಲ್ಲಿ ಸಿಡಿಮದ್ದು ಸುಡುವ ಕಾರ್ಯಕ್ರಮ ಜರುಗಲಿದೆ. ಬೆಳಗ್ಗೆ 9.30 ಗಂಟೆಗೆ ವಿಭಿನ್ನ ವಾದ್ಯಮೇಳ, ವಿವಿಧ ಜಾನಪದ ಕಲಾತಂಡಗಳು, ಅಶ್ವಸಹಿತವಾಗಿ ಮಹಾರಥದ ಕಳಸದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ಪ್ರಭುಲಿಂಗಯ್ಯ ಕಾಳಹಸ್ತಿಮಠ ದಂಪತಿಯಿಂದ ಬಂಗಾರ ಕಳಸದ ಪೂಜೆ, ಹುಚ್ಚಪ್ಪಹಿರಾಳ ದಂಪತಿಯಿಂದ ಉತ್ಸವಮೂರ್ತಿ ಪೂಜೆ ನಂತರ ಸಂಜೆ 5ಕ್ಕೆ ಮಹಾರಥೋತ್ಸವ ಜರುಗಲಿದೆ ಎಂದರು.

ಹೊಸಳ್ಳಿ ಬೂದೀಶ್ವರ ಸಂಸ್ಥಾನಮಠದ ಜಗದ್ಗುರು ಬೂದೀಶ್ವರ ಸ್ವಾಮೀಜಿ, ಮುನವಳ್ಳಿಸೋಮಶೇಖರಮಠದ ಶ್ರೀ ಮುರುಘೇಂದ್ರ ಸ್ವಾಮೀಜಿ, ಗಂಗಾವತಿ ಕಲ್ಮಠದ ಡಾ|ಕೊಟ್ಟೂರ ಸ್ವಾಮೀಜಿ, ಉಪ್ಪಿನಬೆಟಗೇರಿ ಮುರುಸಾವಿರ ವಿರಕ್ತಮಠದ ಶ್ರೀ ಕುಮಾರ ವಿರೂಪಾಕ್ಷ ಸ್ವಾಮೀಜಿ, ಅಮೀನಗಡ ಪ್ರಭುಶಂಕರೇಶ್ವರಮಠದ ಶ್ರೀಶಂಕರ ರಾಜೇಂದ್ರ ಸ್ವಾಮೀಜಿ, ಗುಳೇದಗುಡ್ಡಮುರುಘಾಮಠದ ಶ್ರೀ ಕಾಶೀನಾಥ ಸ್ವಾಮೀಜಿ,ಕುಂದರಗಿ ಅಡವಿಸಿದ್ದೇಶ್ವರಮಠದ ಶ್ರೀ ಅಮರಸಿದ್ದೇಶ್ವರಸ್ವಾಮೀಜಿ, ಕೋಟೆಕಲ್ಲ-ಗುಳೇದಗುಡ್ಡ ಅಮರೇಶ್ವರ ಮಠದ ಶ್ರೀ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ಕಮತಗಿ ಹಿರೇಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಗುಳೇದಗುಡ್ಡ ಮರಡಿಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಕುಂಟೋಜಿ ಹಿರೇಮಠದಶ್ರೀ ಚನ್ನವೀರ ಸ್ವಾಮೀಜಿ, ಕಮತಗಿ ಯಲ್ಲಮ್ಮದೇವಿ ದೇವಸ್ಥಾನದ ಮಾತೋಶ್ರೀ ಬಸವಣ್ಣೆಮ್ಮತಾಯಿ ಬಸರಕೋಡ ಸಾನ್ನಿಧ್ಯ ವಹಿಸುವರು ಎಂದರು. ಶ್ರೀ ಹುಚ್ಚೇಶ್ವರ ಸಂಸ್ಥಾನಮಠದ ಹುಚ್ಚೇಶ್ವರ ಸ್ವಾಮೀಜಿ, ಯಲ್ಲಪ್ಪ ವಡ್ಡರ, ಮಹಾಂತೇಶ ಅಂಗಡಿ,ಶಿವಶಂಕರ ಬಡದಾನಿ ಹಾಜರಿದ್ದರು.

ಕಮತಪುರ ಉತ್ಸವದಂಗವಾಗಿ ಮಾ.3ರಂದು ಮಹಾರಥೋತ್ಸವ ಜರುಗಲಿದ್ದು, ಜಾತ್ರೆ ನಿಮಿತ್ತ ಬೆಳಗಿನ ಜಾವ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ನಡೆಯಲಿದೆ. ಮರುದಿನ ಸಂಜೆ ಜಂಗೀ ನಿಕಾಲಿ ಕುಸ್ತಿ, ಮಾ.7ರಂದು ಕಳಸದ ಇಳಿಸುವ ಕಾರ್ಯಕ್ರಮ ನಡೆಯಲಿದೆ.-ಶ್ರೀ ಹುಚ್ಚೇಶ್ವರ ಸ್ವಾಮೀಜಿ, ಶ್ರೀ ಹೊಳೆ ಹುಚ್ಚೇಶ್ವರ ಸಂಸ್ಥಾನಮಠ, ಕಮತಗಿ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.