ಹುನಗುಂದ ಕೃಷಿ ಸಂಸ್ಕರಣಾ ಕಾರಿಡಾರ್‌


Team Udayavani, Jan 29, 2018, 6:15 AM IST

MB-29.jpg

ಹುನಗುಂದ(ಬಾಗಲಕೋಟೆ): ಅತಿ ದೊಡ್ಡ ಸೂಕ್ಷ್ಮ ಹನಿ ನೀರಾವರಿ ಯೋಜನೆಯ ಯಶಸ್ವಿ ಅನುಷ್ಠಾನದ ಮೂಲಕ ವಿಶ್ವದ ಗಮನಸೆಳೆದಿರುವ ಹುನಗುಂದ, ಈಗ ಉತ್ತರ ಕರ್ನಾಟಕದ “ಕೃಷಿ ಸಂಸ್ಕರಣಾ ಕಾರಿಡಾರ್‌’ ಆಗಿ ಪರಿವರ್ತನೆ ಆಗಲಿದೆ.

ಸಂಸ್ಕರಣಾ ಘಟಕಗಳು, ನೇರ ಮಾರುಕಟ್ಟೆ, ಕೃಷಿಗೆ ಸಂಬಂಧಿಸಿದ ಕೈಗಾರಿಕೆಗಳು ಸೇರಿ ಬರದ ನಾಡಿನ ಸಮಗ್ರ ಕೃಷಿ ಬೆಳವಣಿಗೆಗೆ ಇದು ಮುನ್ನುಡಿ ಬರೆಯಲಿದೆ.

ಈ ನಿಟ್ಟಿನಲ್ಲಿ ಸರ್ಕಾರ 15 ಕಂಪೆನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಬೀಜ ಬಿತ್ತನೆಯಿಂದ ಹಿಡಿದು ಮಾರುಕಟ್ಟೆ ಹಂತದವರೆಗೂ ಸಮಗ್ರ ಕೃಷಿ ನಿರ್ವಹಣೆ ಇದರಡಿ ಆಗಲಿದೆ. ಇದು ರೈತರ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹುನಗುಂದ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆ ಭಾಗದಲ್ಲಿ ಈ ಕಾರಿಡಾರ್‌ ನಿರ್ಮಾಣವಾಗಲಿದೆ ಎಂದರು.

13 ಲಕ್ಷ ಎಕರೆ ವಿಸ್ತರಣೆ: ವಿಶ್ವದ ಅತಿ ದೊಡ್ಡ ಸೂಕ್ಷ್ಮ ಹನಿ ನೀರಾವರಿ ಯೋಜನೆ ಯಶಸ್ವಿ ಬೆನ್ನಲ್ಲೇ ಮುಂದಿನ 5 ವರ್ಷಗಳಲ್ಲಿ 13 ಲಕ್ಷ ಎಕರೆ ಪ್ರದೇಶದಲ್ಲಿ ಸೂಕ್ಷ್ಮಹನಿ ನೀರಾವರಿಯನ್ನು ವಿಸ್ತರಿಸಲು ಉದ್ದೇಶಿಸಲಾಗಿದೆ. ಇದರಿಂದ ಒಟ್ಟಾರೆ ರಾಜ್ಯದ ಮಳೆಯಾಶ್ರಿತ ಪ್ರದೇಶದಲ್ಲಿ ಸುಮಾರು ಶೇ.20ರಷ್ಟು ಸೂಕ್ಷ್ಮ ಹನಿ ನೀರಾವರಿಯ ವ್ಯಾಪ್ತಿಗೊಳಪಡಲಿದೆ. ಈ ಪೈಕಿ ಈಗಾಗಲೇ ವಿವಿಧ ಹಂತಗಳಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

“ಆದರೆ, ಕೇವಲ ರಾಜ್ಯ ಸರ್ಕಾರದಿಂದ ಎಲ್ಲಡೆ ಸೂಕ್ಷ್ಮ ಹನಿನೀರಾವರಿ ಯೋಜನೆ ಅಸಾಧ್ಯದ ಮಾತು. ಕೇಂದ್ರ ಸರ್ಕಾರ ಕನಿಷ್ಠ ಶೇ.50ರಷ್ಟು ಸಬ್ಸಿಡಿ ನೀಡಬೇಕು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಹೇಳುತ್ತಾರೆ’.

ಈ ಪೈಕಿ ಭದ್ರಾ ಮೇಲ್ದಂಡೆಯಲ್ಲೇ 5.50 ಲಕ್ಷ ಎಕರೆ ಪ್ರದೇಶವನ್ನು ಸೂಕ್ಷ್ಮ ಹನಿ ನೀರಾವರಿಗೆ ಪರಿವರ್ತಿಸಲಾಗುವುದು. ಉಳಿದಂತೆ ಸಿಂಗಟಾಲೂರಿನಲ್ಲಿ 2.5 ಲಕ್ಷ, ಕೊಪ್ಪಳ 2.8 ಲಕ್ಷ, ಮಳವಳ್ಳಿಯಲ್ಲಿ 75 ಸಾವಿರ, ತರೀಕೆರೆ 50 ಸಾವಿರ ಎಕರೆಯಲ್ಲಿ ವಿಸ್ತರಿಸಲಾಗುವುದು. ಖಾಸಗಿ ಸಹಭಾಗಿತ್ವದಲ್ಲೂ ಇದನ್ನು ಅನುಷ್ಠಾನಗೊಳಿಸಲು
ಚಿಂತನೆ ನಡೆದಿದೆ ಎಂದರು.

ಲಭ್ಯ ನೀರಲ್ಲಿ ದುಪ್ಪಟ್ಟು ನೀರಾವರಿ: ಹುನಗುಂದ ತಾಲೂಕಿನ ರಾಮಥಾಳ (ಮರೋಳ)ದಲ್ಲಿ ಈಗಾಗಲೇ ಪ್ರಾಯೋಗಿಕವಾಗಿ 60 ಸಾವಿರ ಎಕರೆಯಲ್ಲಿ ಸೂಕ್ಷ್ಮ ಹನಿ ನೀರಾವರಿ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಇದರಿಂದ ಹುನಗುಂದ ತಾಲೂಕಿನ ಒಟ್ಟು 55 ಹಳ್ಳಿಗಳ ಸುಮಾರು 15 ಸಾವಿರ ರೈತರಿಗೆ ಅನುಕೂಲವಾಗಲಿದೆ ಎಂದರು. ಸೂಕ್ಷ್ಮ ಹನಿ ನೀರಾವರಿ ಪದಟಛಿತಿಯಲ್ಲಿ 23 ಬೆಳೆ ಬೆಳೆಯಬಹುದು. ಇಳುವರಿ ಕೂಡ ಹೆಚ್ಚಾಗಿದೆ ಎಂದು ಮಾಹಿತಿ ನೀಡಿದರು.

– ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.