‘ಅಪೂರ್ಣಗೊಂಡ ಕಾಮಗಾರಿ ಶೀಘ್ರ ಪೂರ್ಣಗೊಳಿಸುವೆ’

ಬಾಗಲಕೋಟೆ-ಕುಡಚಿ ರೈಲು ಮಾರ್ಗಕ್ಕೆ ಒತ್ತು

Team Udayavani, Jun 14, 2019, 2:34 PM IST

bk-tdy-3..

ಜಮಖಂಡಿ: ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ ಅವರನ್ನು ಸನ್ಮಾನಿಸಲಾಯಿತು.

ಜಮಖಂಡಿ: ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ಶೀಘ್ರ ಮುಗಿಸಲು ಸಿಎಂ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ತರುವ ಮೂಲಕ ಜಿಲ್ಲೆಯಲ್ಲಿ ಅಪೂರ್ಣಗೊಂಡ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ನಗರದಲ್ಲಿ ಗುರುವಾರ ಜಮಖಂಡಿ ವಿಧಾನಸಭೆ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಬಾಗಲಕೋಟೆ-ಕುಡಚಿ ರೈಲು ಮಾರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಿ, ಈ ಭಾಗದ ಜನತೆಗೆ ಅನುಕೂಲವಾಗುವಂತೆ ಮಾಡಲಾಗುತ್ತದೆ. ರೈಲು ಮಾರ್ಗ ವಿಳಂಬಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ತನ್ನ ಪಾಲಿನ ಅನುದಾನ ನೀಡಿದ್ದು, ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದ ಕಾಮಗಾರಿ ನಿಧಾನವಾಗಿ ಸಾಗಿದೆ ಎಂದರು.

ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಿದರೂ ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಕಣಕ್ಕಿಳಿದು ಗೆಲುವು ಸಾಧಿಸಿರುವುದು ಸಂತೋಷ ನೀಡಿದೆ. ಜನರ ಪ್ರೀತಿ ವಿಶ್ವಾಸಕ್ಕೆ ಎಂದೂ ಚ್ಯುತಿ ಬಾರದಂತೆ ನಡೆದುಕೊಳ್ಳುವುದಾಗಿ ಹೇಳಿದರು. ಅಪೂರ್ಣಗೊಂಡ ಡಾ| ಗುರುದೇವ ರಾನಡೆ ಸಮುದಾಯ ಭವನಕ್ಕೆ ಕೇಂದ್ರದಿಂದ ಇನ್ನಷ್ಟು ಅನುದಾನ ತಂದು ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದರು. ಬಾಗಲಕೋಟೆ ಲೋಕಸಭೆ ಮತಕ್ಷೇತ್ರದಲ್ಲಿನ ಜನರ ನಾಡಿ ಮಿಡಿತಕ್ಕೆ ಸ್ಪಂದಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿದರು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ರಾಜ್ಯದ 171 ವಿಧಾನಸಭೆ ಮತಕ್ಷೇತ್ರದಲ್ಲಿ ಬಿಜೆಪಿ ಪ್ರಥಮ ಸ್ಥಾನದಲ್ಲಿದೆ. ಶೀಘ್ರದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಗೆ ಕ್ಷಣಗಣನೆ ನಡೆದಿದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕಂಡ ರಾಮರಾಜ್ಯ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡುತ್ತಿದ್ದರಿಂದ ಹೆಚ್ಚಿನ ಸಂಖ್ಯೆಯ ಬಿಜೆಪಿ ಸಂಸದರು ಲೋಕಸಭೆಗೆ ಹೋಗಿದ್ದಾರೆ. ಬಿಜೆಪಿ ತತ್ವ-ಸಿದ್ದಾಂತಗಳನ್ನು ಅರಿತು ಕಾರ್ಯಕರ್ತರು ಸಂಘಟಿತರಾಗಬೇಕು. ಕಾಂಗ್ರೆಸ್‌ ಪಕ್ಷದ ಮುಖಂಡರು ವಿನಾಕಾರಣ ಬಿಜೆಪಿ ಟೀಕಿಸುತ್ತಿರುವುದು ಖಂಡನೀಯ. ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಮಾದರಿ ಪ್ರಧಾನಿಯಾಗಲಿದ್ದಾರೆ ಎಂದರು.

ತೇರದಾಳ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದು ಸವದಿ, ಬಿಜೆಪಿ ಮುಖಂಡ, ಉದ್ಯಮಿ ಜಗದೀಶ ಗುಡಗುಂಟಿ, ಜಿ.ಎಸ್‌.ನ್ಯಾಮಗೌಡ, ಬಸವರಾಜ ಸಿಂಧೂರ, ಜಿಪಂ ಸದಸ್ಯ ಶಿವಾನಂದ ಪಾಟೀಲ ಮಾತನಾಡಿದರು. ಟಿಎಪಿಸಿಎಂಎಸ್‌ ಸೊಸಾಯಿಟಿಗೆ ಹಾಗೂ ಎಪಿಎಂಸಿಗೆ ಆಯ್ಕೆಯಾದ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು.

ತಾಪಂ ಅಧ್ಯಕ್ಷೆ ನಾಗವ್ವ ಕುರಣಿ, ತಿಮ್ಮನಗೌಡ ಬಿರಾದಾರ, ಈಶ್ವರ ಆದೆಪ್ಪನ್ನವರ, ಅಶೋಕ ತುಂಗಳ, ಜಿಪಂ ಸದಸ್ಯ ಬಸವರಾಜ ಬಿರಾದಾರ, ಬಸವರಾಜ ಕಲೂತಿ, ನಾಗಪ್ಪ ಸನದಿ, ದೇವಲ ದೇಸಾಯಿ, ಹನಮಂತ ಇಟ್ಟಿ, ಏಗಪ್ಪ ಸವದಿ, ಮನೋಹರ ಶಿರೋಳ, ಡಾ| ವಿಜಯಲಕ್ಷ್ಮೀ ತುಂಗಳ, ವಿಜಯಲಕ್ಷ್ಮೀ ಉಕುಮನಾಳ, ಶಶಿಕಾಂತ ವಿಶ್ವಬ್ರಾಹ್ಮಣ ಇದ್ದರು.

ಬಿಜೆಪಿ ನಗರ ಘಟಕ ಅಧ್ಯಕ್ಷ ಡಾ| ರಾಕೇಶ ಲಾಡ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಸಿ.ಟಿ.ಉಪಾಧ್ಯೆ ನಿರೂಪಿಸಿದರು. ನಗರಸಭೆ ಮಾಜಿ ಸದಸ್ಯ ಶ್ರೀನಿವಾಸ ಅಪರಂಜಿ ವಂದಿಸಿದರು.

ಟಾಪ್ ನ್ಯೂಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.