10ರೊಳಗೆ ದಾಖಲೆ ನೀಡದಿದ್ರೆ ಮಾಸಾಶನ ರದ್ದು
ಇನ್ನೂ 3311ಜನರ ದಾಖಲೆ ಪರಿಶೀಲನೆಯಾಗಬೇಕಿದೆ
Team Udayavani, Nov 5, 2022, 5:28 PM IST
ಗುಳೇದಗುಡ್ಡ: ಕಂದಾಯ ಇಲಾಖೆಯಿಂದ ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ವಿವಿಧ ಪಿಂಚಣಿ ಪಡೆಯುತ್ತಿರುವವರ ಕುರಿತು ಸಮಗ್ರ ಪರಿಶೀಲನೆ ನಡೆಯುತ್ತಿದ್ದು, ನ.10ರೊಳಗೆ ಆಯಾ ವಾರ್ಡ್ಗಳಲ್ಲಿನ ಕೇಂದ್ರಗಳಲ್ಲಿ ಕುಳಿತ ಗ್ರಾಮ ಲೆಕ್ಕಾಧಿಕಾರಿಗಳಿಗೆ ಪಿಂಚಣಿ ಪಡೆಯುವವರು ದಾಖಲೆ ನೀಡಬೇಕು. ಇಲ್ಲದಿದ್ದರೇ ಮಾಸಾಶನ ರದ್ದು ಮಾಡಲಾಗುವುದು ಎಂದು ತಹಶೀಲ್ದಾರ್ ಎಸ್.ಎಫ್.ಬೊಮ್ಮಣ್ಣವರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ವಿಧವಾ, ವೃದ್ಧಾಪ್ಯ, ಇಂದಿರಾಗಾಂಧಿ, ವಿಕಲಚೇತನ ಪಿಂಚಣಿ ಪಡೆಯುವವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ಬುಕ್ ಝರಾಕ್ಸ್ ಪ್ರತಿಗಳನ್ನು ಕೂಡಲೇ ನೀಡಬೇಕು. ಗುಳೇದಗುಡ್ಡ ಪಟ್ಟಣದಲ್ಲಿ ಸರಿಯಾದ ರೀತಿಯಲ್ಲಿ ದಾಖಲೆ ಸಲ್ಲಿಕೆ ಮಾಡಿಲ್ಲ. ಇನ್ನೂ 3311 ಜನರು ದಾಖಲೆ ನೀಡಬೇಕು ಎಂದು ತಿಳಿಸಿದ್ದಾರೆ.
ಗುಳೇದಗುಡ್ಡ ತಾಲೂಕಿನಲ್ಲಿ ಒಟ್ಟು 11154 ಜನರು ವಿಧವಾ, ವೃದ್ಧಾಪ್ಯ, ಇಂದಿರಾಗಾಂಧಿ, ವಿಕಲಚೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ವಿವಿಧ ಮಾಸಾಶನ ಪಡೆಯುತ್ತಿದ್ದಾರೆ. ಕಂದಾಯ ಇಲಾಖೆಯಿಂದ ಸದ್ಯ ಸಮಗ್ರ ಪರಿಶೀಲನೆ ನಡೆಯುತ್ತಿದ್ದು, 7843ಜನರು ದಾಖಲೆ ಪರಿಶೀಲನೆಯಾಗಿದ್ದು, ಇನ್ನೂ 3311ಜನರ ದಾಖಲೆ ಪರಿಶೀಲನೆಯಾಗಬೇಕಿದೆ ಎಂದು ಹೇಳಿದರು.
ಇಲ್ಲಿ ಭೇಟಿ ಕೊಡಿ: ಗ್ರಾಮೀಣ ಭಾಗದಲ್ಲಿ ಪೂರ್ಣಗೊಂಡಿದೆ. ಆದರೆ ಗುಳೇದಗುಡ್ಡ ಪಟ್ಟಣದಲ್ಲಿ ಇದುವರೆಗೂ ಜನರು ಸರಿಯಾಗಿ ಸ್ಪಂದಿಸಿಲ್ಲ. ಆದ್ದರಿಂದ ಜನರು ದಾಖಲೆ ಸಲ್ಲಿಸಲು ಸಾಲೇಶ್ವರ ದೇವಸ್ಥಾನ, ಹರದೊಳ್ಳಿ ಮಾರುತೇಶ್ವರ ದೇವಸ್ಥಾನ, ಖಜಾನೆ ಹತ್ತಿರ, ಕಂಠಿಪೇಟೆ ಬನಶಂಕರಿ ದೇವಸ್ಥಾನ, ಸರಕಾರಿ ಪ್ರಾಥಮಿಕ ಶಾಲೆ ನಂ.2ರಲ್ಲಿ, ರಜಂಗಳಪೇಟೆಯ ದಾನಮ್ಮ ದೇವಸ್ಥಾನದಲ್ಲಿ ನಮ್ಮ ಕಂದಾಯ ಇಲಾಖೆಯ ಸಿಬ್ಬಂದಿಗಳು ನೇಮಕ ಮಾಡಿದ್ದು, ಆಯಾ ವಾರ್ಡ್ಗಳ ಪಿಂಚಣಿ ಪಡೆಯುವ ಜನರು ಅವರಿಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನೀಡಿ, ದಾಖಲೆ ಪರಿಶೀಲನೆ ಮಾಡಿಕೊಳ್ಳಬೇಕು. ನ.10ರೊಳಗೆ ದಾಖಲೆ ಪರಿಶೀಲನೆ ಮಾಡಿಸದಿದ್ದರೇ ಅಂತಹವರ ಮಾಸಾಶನ ರದ್ದುಪಡಿಸಲಾಗುವುದು ಎಂದು ತಹಶೀಲ್ದಾರ್ ಎಸ್.ಎಫ್.ಬೊಮ್ಮಣ್ಣವರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ
Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’