ಕೊಯ್ನಾ ನೀರು ಬರದಿದ್ದರೆ ಜಲ ಸಮಸ್ಯೆ
Team Udayavani, May 9, 2019, 11:58 AM IST
ಬಾಗಲಕೋಟೆ: ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಯ ಒಡಲು ಖಾಲಿಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ನೀರು ಸಂಗ್ರಹ ಒಂದಷ್ಟು ಹೆಚ್ಚಿನ ಪ್ರಮಾಣದಲ್ಲಿದ್ದರೂ ಅದು ಎರಡು ವಾರಕ್ಕೆ ಖಾಲಿಯಾಗುವ ಆತಂಕ ಸೃಷ್ಟಿಯಾಗಿದೆ.
ಹೌದು, ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಯ 14 ನಗರ ಪ್ರದೇಶ, ಸುಮಾರು 510ಕ್ಕೂ ಹೆಚ್ಚು ಹಳ್ಳಿಗಳು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಹಿನ್ನೀರನ್ನೇ ನಂಬಿಕೊಂಡಿವೆ.
ಆಲಮಟ್ಟಿ ಜಲಾಶಯದಲ್ಲಿ ಸದ್ಯ ಇರುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕೆಂಬ ನಿರ್ಣಯ ಮಾಡಿದ್ದರೂ ಅದು ಕಡ್ಡಾಯವಾಗಿ ಕಾರ್ಯಗತವಾಗುತ್ತಿಲ್ಲ ಎಂಬ ಮಾತೂ ಕೇಳಿ ಬರುತ್ತಿದೆ.
ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ವಿಜಯಪುರ, ಬಾಗೇವಾಡಿ, ಮನಗೂಳಿ, ನಿಡಗುಂದಿ, ಕೋಲಾರ, ಬಾಗಲಕೋಟೆ, ಇಳಕಲ್ಲ, ಹುನಗುಂದ, ಗುಳೇದಗುಡ್ಡ, ಕಮತಗಿ, ಅಮೀನಗಡ, ಬೀಳಗಿ, ಕುಷ್ಟಗಿ ನಗರ-ಪಟ್ಟಣಗಳು ಅವಲಂಬಿತವಾಗಿವೆ. ಅಲ್ಲದೇ ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ನದಿಯ ನೀರನ್ನು ನಂಬಿಕೊಂಡೇ ಒಟ್ಟು 19 ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಗಳು ಇಂದಿಗೂ ಕಾರ್ಯ ನಿರ್ವಹಿಸುತ್ತಿವೆ. 19 ಯೋಜನೆಗಳಡಿ 190 ಹಳ್ಳಿಗಳಿಗೆ ಕೃಷ್ಣೆಯ ನೀರು ಪೂರೈಕೆ ಮಾಡಲಾಗುತ್ತಿದೆ. ಕೃಷ್ಣೆ ಸಂಪೂರ್ಣ ಬರಿದಾದರೆ, 14 ನಗರ-ಪಟ್ಟಣ ಹಾಗೂ 190 ಹಳ್ಳಿಗಳಿಗೆ ಜೀವಜಲದ ಸಮಸ್ಯೆ ತೀವ್ರಗೊಳ್ಳಲಿದೆ.
2016ರ ಪರಿಸ್ಥಿತಿ ಇಲ್ಲ: ಕಳೆದ 2016ರಲ್ಲಿ ಕೃಷ್ಣಾ ನದಿ ಸಂಪೂರ್ಣ ಖಾಲಿಯಾಗಿತ್ತು. ಆಗ ನದಿಯ ತಗ್ಗು-ದಿನ್ನಿಗಳಲ್ಲಿದ್ದ ನೀರನ್ನೂ ಒಂದೆಡೆ ಸಂಗ್ರಹಿಸಿ, ವಿದ್ಯುತ್ ಮೋಟಾರ್ ಮೂಲಕ, ಜಾಕವೆಲ್ ವರೆಗೆ ಹರಿಸಿ, ಆ ನೀರನ್ನು ಕುಡಿಯಲು ಬಳಕೆ ಮಾಡಲಾಗಿತ್ತು. ಆಗ 7 ಟಿಎಂಸಿ ನೀರನ್ನು ಮಾರಿಕೊಳ್ಳಲಾಗಿತ್ತು ಎಂಬ ದೊಡ್ಡ ವಿವಾದವೂ ಎಲ್ಲೆಡೆ ಹಬ್ಬಿತ್ತು. ಆದರೆ, ಈ ಬಾರಿ ಅಂತಹ ಪರಿಸ್ಥಿತಿ ಇಲ್ಲ.
ಸದ್ಯ ಜಲಾಶಯದಲ್ಲಿ 28.20 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಇದರಲ್ಲಿ 17.36 ಡೆಡ್ ಸ್ಟೋರೇಜ್ ಇದ್ದು, ಉಳಿದ 10.36 ಟಿಎಂಸಿ ನೀರು ಬಳಕೆಗೆ ಲಭ್ಯವಿದೆ. ಇದರಲ್ಲಿ ಮೇ ಮೊದಲ ಅಥವಾ 2ನೇ ವಾರದಲ್ಲಿ ರಾಯಚೂರಿನ ಶಾಖೋತ್ಪನ್ ಕೇಂದ್ರಕ್ಕೆ 2 ಟಿಎಂಸಿ ಅಡಿ ನೀರು ಕೊಡಬೇಕೆಂಬ ಒಪ್ಪಂದವಿದ್ದು, ಈಗಾಗಲೇ ನಿತ್ಯ 2662 ಕ್ಯುಸೆಕ್ ನೀರನ್ನು ರಾಯಚೂರು ವಿದ್ಯುತ್ ಉತ್ಪಾದನೆ ಕೇಂದ್ರಕ್ಕೆ ಬಿಡಲಾಗುತ್ತಿದೆ. ಉಳಿದ 9.36 ಟಿಎಂಸಿ ನೀರನ್ನು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯ ವ್ಯಾಪ್ತಿಯ ಕುಡಿಯುವ ನೀರಿನ ಯೋಜನೆಗಳಿಗಾಗಿ ಬಳಸಿಕೊಳ್ಳಲು ಮೀಸಲಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ