IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ


Team Udayavani, May 9, 2024, 8:38 AM IST

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

ಮಹಾಲಿಂಗಪುರ : ಕಳೆದ ವರ್ಷದ ನವೆಂಬರ್ ನಲ್ಲಿ ಕೇಂದ್ರ ಲೋಕಸೇವಾ ಆಯೋಗವು ನಡೆಸಿದ IFS (ಭಾರತೀಯ ಅರಣ್ಯ ಸೇವೆ) ಪರೀಕ್ಷೆಯಲ್ಲಿ ಸಮೀಪದ ಅಕ್ಕಿಮರಡಿ(ಮುಧೋಳ ತಾಲೂಕು) ಗ್ರಾಮದ ಪ್ರಗತಿಪರ ರೈತರಾದ ಸದಾಶಿವ ಮತ್ತು ಸುರೇಖಾ ಕಂಬಳಿ ದಂಪತಿಗಳ ಸುಪುತ್ರನಾದ ಪಾಂಡುರಂಗ ಸದಾಶಿವ ಕಂಬಳಿ ಅವರು ದೇಶಕ್ಕೆ 42ನೇ ರ‌್ಯಾಂಕ್ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ‌

ಗ್ರಾಮೀಣ ಭಾಗದ ರೈತನ ಮಗನಾದ ಪಾಂಡುರಂಗ ಅವರು 1 ರಿಂದ 5ನೇ ತರಗತಿ ಶಿಕ್ಷಣವನ್ನು ಸೈದಾಪೂರ ಶಿವಲಿಂಗೇಶ್ವರ ಪ್ರಾಥಮಿಕ ಶಾಲೆಯಲ್ಲಿ, 6 ರಿಂದ 10ನೇ ತರಗತಿವರೆಗೆ ಕುಳಗೇರಿಯ ನವೋದಯ ಶಾಲೆಯಲ್ಲಿ ಕಲಿತಿದ್ದಾರೆ. ಪಿಯುಸಿ ಶಿಕ್ಷಣವನ್ನು ಯಲ್ಲಟ್ಟಿಯ ಕೊಣ್ಣೂರ ಪಿಯು ಕಾಲೇಜಿನಲ್ಲಿ, ಪದವಿ ಮತ್ತು ಇಂಜಿನಿಯರಿಂಗ್ ಶಿಕ್ಷಣವನ್ನು ಬೆಂಗಳೂರಿನ ಆರ್.ವ್ಹೀ.ಕಾಲೇಜಿನಲ್ಲಿ ಮುಗಿಸಿದ್ದಾರೆ. ಎರಡು ವರ್ಷ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿ ನೌಕರಿ ಮಾಡಿದ್ದಾರೆ. ನಂತರ ನೌಕರಿ ಬಿಟ್ಟು ದೇಶದ ಅತ್ಯುನ್ನತ ಯುಪಿಎಸ್ ಸಿ ಪರೀಕ್ಷೆ ಎದುರಿಸುವ ನಿರ್ಧಾರ ಕೈಗೊಂಡು, ಯಾವುದೇ ಕೋಚಿಂಗ್ ಇಲ್ಲದೇ ಸ್ವಸಾಮರ್ಥ್ಯದಿಂದ ಕಠಿಣ ಅಭ್ಯಾಸ ಮಾಡಿದ ಪಾಂಡುರಂಗ ಅವರು ಕಳೆದ ವರ್ಷದ ನವೆಂಬರ್ ನಲ್ಲಿ ಜರುಗಿದ ಯುಪಿಎಸ್ ಸಿಯ (IFS-ಭಾರತೀಯ ಅರಣ್ಯ ಸೇವೆ) ಪರೀಕ್ಷೆಯನ್ನು ಬರೆದಿದ್ದರು.

ಇಂದು (ಮೇ 8) IFS ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು. ಗ್ರಾಮೀಣ ಭಾಗದ ರೈತನ ಮಗನಾದ ಪಾಂಡುರಂಗ ಸದಾಶಿವ ಕಂಬಳಿ ಅವರು ಭಾರತ ದೇಶಕ್ಕೆ 42ನೇ ರ‌್ಯಾಂಕ್ ಪಡೆಯುವ ಮೂಲಕ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ಕೀರ್ತಿ ಯನ್ನು ದೇಶಾದ್ಯಂತ ಬೆಳಗಿಸಿದ್ದಾರೆ. ಬಾಕ್ಸ : ಯಾವುದೇ ಕೋಚಿಂಗ್ ಇಲ್ಲದೇ ಎರಡು ವರ್ಷಗಳ ಕಾಲ ಸ್ವ ಅಧ್ಯಯನ ಮಾಡಿ ಪರೀಕ್ಷೆ ಎದುರಿಸಿದ್ದೆನೆ. ಯುಪಿಎಸ್ ಸಿಯ IFS ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೆ ದೇಶಕ್ಕೆ 42 ನೇ ರ‌್ಯಾಂಕ್ ಪಡೆದಿರುವದಕ್ಕೆ ಬಹಳ ಸಂತೋಷವಾಗಿದೆ.

ರೈತನಾಗಿದ್ದರು ಸಹ ನಮ್ಮ ತಂದೆ ಹಾಗೂ ಮನೆಯ ಸದಸ್ಯರು ಮೊದಲಿನಿಂದಲೂ ನನ್ನ ಶಿಕ್ಷಣಕ್ಕೆ ನೀಡಿದ ಸಹಾಯ ಸಹಕಾರದಿಂದಲೇ ಈ ಸಾಧನೆ ಮಾಡಲು ಸಾಧ್ಯವಾಗಿದೆ.

– ಪಾಂಡುರಂಗ ಸದಾಶಿವ ಕಂಬಳಿ. ಯುಪಿಎಸ್ ಸಿಯ IFS ಪರೀಕ್ಷೆಯಲ್ಲಿ ದೇಶಕ್ಕೆ 42ನೇ ರ‌್ಯಾಂಕ್ ಪಡೆದ ಅಕ್ಕಿಮರಡಿ ಗ್ರಾಮದ ಯುವಕ.

 

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.