IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ
Team Udayavani, May 9, 2024, 8:38 AM IST
ಮಹಾಲಿಂಗಪುರ : ಕಳೆದ ವರ್ಷದ ನವೆಂಬರ್ ನಲ್ಲಿ ಕೇಂದ್ರ ಲೋಕಸೇವಾ ಆಯೋಗವು ನಡೆಸಿದ IFS (ಭಾರತೀಯ ಅರಣ್ಯ ಸೇವೆ) ಪರೀಕ್ಷೆಯಲ್ಲಿ ಸಮೀಪದ ಅಕ್ಕಿಮರಡಿ(ಮುಧೋಳ ತಾಲೂಕು) ಗ್ರಾಮದ ಪ್ರಗತಿಪರ ರೈತರಾದ ಸದಾಶಿವ ಮತ್ತು ಸುರೇಖಾ ಕಂಬಳಿ ದಂಪತಿಗಳ ಸುಪುತ್ರನಾದ ಪಾಂಡುರಂಗ ಸದಾಶಿವ ಕಂಬಳಿ ಅವರು ದೇಶಕ್ಕೆ 42ನೇ ರ್ಯಾಂಕ್ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.
ಗ್ರಾಮೀಣ ಭಾಗದ ರೈತನ ಮಗನಾದ ಪಾಂಡುರಂಗ ಅವರು 1 ರಿಂದ 5ನೇ ತರಗತಿ ಶಿಕ್ಷಣವನ್ನು ಸೈದಾಪೂರ ಶಿವಲಿಂಗೇಶ್ವರ ಪ್ರಾಥಮಿಕ ಶಾಲೆಯಲ್ಲಿ, 6 ರಿಂದ 10ನೇ ತರಗತಿವರೆಗೆ ಕುಳಗೇರಿಯ ನವೋದಯ ಶಾಲೆಯಲ್ಲಿ ಕಲಿತಿದ್ದಾರೆ. ಪಿಯುಸಿ ಶಿಕ್ಷಣವನ್ನು ಯಲ್ಲಟ್ಟಿಯ ಕೊಣ್ಣೂರ ಪಿಯು ಕಾಲೇಜಿನಲ್ಲಿ, ಪದವಿ ಮತ್ತು ಇಂಜಿನಿಯರಿಂಗ್ ಶಿಕ್ಷಣವನ್ನು ಬೆಂಗಳೂರಿನ ಆರ್.ವ್ಹೀ.ಕಾಲೇಜಿನಲ್ಲಿ ಮುಗಿಸಿದ್ದಾರೆ. ಎರಡು ವರ್ಷ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿ ನೌಕರಿ ಮಾಡಿದ್ದಾರೆ. ನಂತರ ನೌಕರಿ ಬಿಟ್ಟು ದೇಶದ ಅತ್ಯುನ್ನತ ಯುಪಿಎಸ್ ಸಿ ಪರೀಕ್ಷೆ ಎದುರಿಸುವ ನಿರ್ಧಾರ ಕೈಗೊಂಡು, ಯಾವುದೇ ಕೋಚಿಂಗ್ ಇಲ್ಲದೇ ಸ್ವಸಾಮರ್ಥ್ಯದಿಂದ ಕಠಿಣ ಅಭ್ಯಾಸ ಮಾಡಿದ ಪಾಂಡುರಂಗ ಅವರು ಕಳೆದ ವರ್ಷದ ನವೆಂಬರ್ ನಲ್ಲಿ ಜರುಗಿದ ಯುಪಿಎಸ್ ಸಿಯ (IFS-ಭಾರತೀಯ ಅರಣ್ಯ ಸೇವೆ) ಪರೀಕ್ಷೆಯನ್ನು ಬರೆದಿದ್ದರು.
ಇಂದು (ಮೇ 8) IFS ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು. ಗ್ರಾಮೀಣ ಭಾಗದ ರೈತನ ಮಗನಾದ ಪಾಂಡುರಂಗ ಸದಾಶಿವ ಕಂಬಳಿ ಅವರು ಭಾರತ ದೇಶಕ್ಕೆ 42ನೇ ರ್ಯಾಂಕ್ ಪಡೆಯುವ ಮೂಲಕ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ಕೀರ್ತಿ ಯನ್ನು ದೇಶಾದ್ಯಂತ ಬೆಳಗಿಸಿದ್ದಾರೆ. ಬಾಕ್ಸ : ಯಾವುದೇ ಕೋಚಿಂಗ್ ಇಲ್ಲದೇ ಎರಡು ವರ್ಷಗಳ ಕಾಲ ಸ್ವ ಅಧ್ಯಯನ ಮಾಡಿ ಪರೀಕ್ಷೆ ಎದುರಿಸಿದ್ದೆನೆ. ಯುಪಿಎಸ್ ಸಿಯ IFS ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೆ ದೇಶಕ್ಕೆ 42 ನೇ ರ್ಯಾಂಕ್ ಪಡೆದಿರುವದಕ್ಕೆ ಬಹಳ ಸಂತೋಷವಾಗಿದೆ.
ರೈತನಾಗಿದ್ದರು ಸಹ ನಮ್ಮ ತಂದೆ ಹಾಗೂ ಮನೆಯ ಸದಸ್ಯರು ಮೊದಲಿನಿಂದಲೂ ನನ್ನ ಶಿಕ್ಷಣಕ್ಕೆ ನೀಡಿದ ಸಹಾಯ ಸಹಕಾರದಿಂದಲೇ ಈ ಸಾಧನೆ ಮಾಡಲು ಸಾಧ್ಯವಾಗಿದೆ.
– ಪಾಂಡುರಂಗ ಸದಾಶಿವ ಕಂಬಳಿ. ಯುಪಿಎಸ್ ಸಿಯ IFS ಪರೀಕ್ಷೆಯಲ್ಲಿ ದೇಶಕ್ಕೆ 42ನೇ ರ್ಯಾಂಕ್ ಪಡೆದ ಅಕ್ಕಿಮರಡಿ ಗ್ರಾಮದ ಯುವಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’