ನಿಯಮ ಉಲ್ಲಂಘಿಸಿ ಅಕ್ರಮ ಚುನಾವಣೆ

•ಅರ್ಹರೂ ಮತದಾರ ಪಟ್ಟಿಯಿಂದ ಹೊರಗೆ •ವಿವಿಧ ಇಲಾಖೆ ನೌಕರರ ಗಂಭೀರ ಆರೋಪ

Team Udayavani, Jun 3, 2019, 1:17 PM IST

bk-tdy-3..

ಬಾಗಲಕೋಟೆ: ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ ಯಂಕಂಚಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಾಗಲಕೋಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ 62 ಸ್ಥಾನಗಳಿಗೆ ಜೂ. 13ರಂದು ಚುನಾವಣೆ ನಡೆಯುತ್ತಿದ್ದು, ಸಂಘದ ಹಾಲಿ ಕಾರ್ಯಕಾರಿ ಸಮಿತಿ, ನಿಯಮ ಉಲ್ಲಂಘಿಸಿ, ಅಕ್ರಮ ಚುನಾವಣೆಗೆ ಮುಂದಾಗಿದೆ ಎಂದು ವಿವಿಧ ಇಲಾಖೆಗಳ ನೌಕರರು ಆರೋಪಿಸಿದರು.

ಸರ್ಕಾರಿ ಎಸ್‌.ಸಿ, ಎಸ್‌.ಟಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ ಯಂಕಂಚಿ, ಸಣ್ಣ ಉಳಿತಾಯ ಇಲಾಖೆಯ ಎಂ.ಸಿ. ಕೋಟಿ, ಪಶು ಸಂಗೋಪನೆ ಇಲಾಖೆಯ ಎಸ್‌.ಎಚ್. ಘಂಟಿ ಮುಂತಾದವರು ರವಿವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿದರು.

ಸರ್ಕಾರಿ ನೌಕರರ ಸಂಘದ ಚುನಾವಣೆ ವ್ಯಾಪ್ತಿಗೆ ಕೇಂದ್ರ ಸಮಿತಿಯಡಿ 46 ಇಲಾಖೆ ಹಾಗೂ ಜಿಲ್ಲೆಯಲ್ಲಿ ಸ್ಥಳೀಯವಾಗಿ ಕಾರ್ಯ ನಿರ್ವಹಿಸುವ 3 ಇಲಾಖೆಗಳು ಸೇರಿ ಒಟ್ಟು 49 ಇಲಾಖೆ ಬರುತ್ತಿದ್ದು, ಒಂದೊಂದು ಇಲಾಖೆಗೂ ನಿರ್ದೇಶಕ ಸ್ಥಾನ ಹಂಚಿಕೆ ಮಾಡುವ ಅಧಿಕಾರವನ್ನು ನಿಯಮಕ್ಕೆ ಒಳಪಟ್ಟು ಜಿಲ್ಲಾಘಟಕಕ್ಕೆ ನೀಡಲಾಗುತ್ತದೆ. ಆದರೆ, ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ, ತನ್ನ ಮನಸ್ಸಿಗೆ ಬಂದಂತೆ, ತಮ್ಮ ಸಂಬಂಧಿಕರ ಹಾಗೂ ಅತಿಹೆಚ್ಚು ಕೆಲಸ ಮಾಡುವ ಇಲಾಖೆಗೆ ಅತಿ ಕಡಿಮೆ ನಿರ್ದೇಶಕ ಸ್ಥಾನಗಳನ್ನು ಹಂಚಿಕೆ ಮಾಡಿದೆ. ಇನ್ನು 7 ಇಲಾಖೆಗಳಲ್ಲಿ ನೌಕರರಿದ್ದರೂ, ಅಲ್ಲಿ ನೌಕರರಿಲ್ಲ ಎಂದು ಬೇರೆ ಇಲಾಖೆಯನ್ನು ಆ ಸ್ಥಾನಗಳೊಂದಿಗೆ ವಿಲೀನ ಮಾಡಿ, 7 ಇಲಾಖೆಗೆ ಅವಕಾಶ ಸಿಗದಂತೆ ಮಾಡಿದ್ದಾರೆ ಎಂದರು.

ಸರ್ಕಾರಿ ನೌಕರರ ವೇತನದಲ್ಲಿ 100 ರೂ. ಕಡಿತ ಮಾಡಿಕೊಂಡು ಸಂಘದ ಸದಸ್ಯತ್ವ ನವೀಕರಣಕ್ಕೆ ಬಳಕೆ ಮಾಡಲಾಗುತ್ತದೆ. ಇದು ನೇರವಾಗಿ ಟ್ರೇಝರಿಯ ನಮ್ಮ ವೇತನ ಖಾತೆಯಿಂದ ಸಂಘದ ಖಾತೆಗೆ ಹೋಗುತ್ತದೆ. ಹೀಗೆ ಹಲವು ನೌಕರರು ಸದಸ್ಯತ್ವ ಶುಲ್ಕ ನೀಡಿದ್ದರೂ ಅವರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಚುನಾವಣೆ ಇದೇ ಜೂನ್‌ 13ರಂದು ನಡೆಯುತ್ತಿದ್ದರೂ ಅಧಿಕೃತವಾಗಿ ಪ್ರಚಾರ ಮಾಡಬೇಕಿದ್ದ ಹಾಲಿ ಕಾರ್ಯಕಾರಿ ಸಮಿತಿ, ಗೌಪ್ಯ ಎಂಬಂತೆ ಚುನಾವಣೆ ನಡೆಸಲು ಮುಂದಾಗಿದೆ ಎಂದು ಆರೋಪಿಸಿದರು.

ಸರ್ಕಾರಿ ನೌಕರರ ಸಂಘದ ಚುನಾವಣೆ, ಜಿಲ್ಲೆಯ ಎಲ್ಲ ಚುನಾವಣೆಗಳಿಗೆ ಮಾದರಿಯಾಗಿ, ಉತ್ತಮ ಹೆಸರು ಪಡೆಯಬೇಕು. ಆದರೆ, ಇಲ್ಲಿಯೇ ಅಕ್ರಮ ನಡೆಯುತ್ತಿದೆ. ಈ ಕುರಿತು ಜೂ. 3ರಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ. ಸರ್ಕಾರಿ ನೌಕರರ ಸಂಘದ ಚುನಾವಣಾಧಿಕಾರಿಗೂ ಮನವಿ ಕೊಡಲಿದ್ದು, ಪಾರದರ್ಶಕ ಚುನಾವಣೆ ನಡೆಸದಿದ್ದರೆ ಕಾನೂನು ಹೋರಾಟ ನಡೆಸಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಕಾರ್ಮಿಕ ಇಲಾಖೆಯ ಅಶೋಕ ಒಡೆಯರ, ಆರೋಗ್ಯ ಇಲಾಖೆಯ ರಾಜು ಅಜ್ಜೋಡಿ, ಶಿಕ್ಷಣ ಇಲಾಖೆಯ ಎಚ್.ಟಿ. ಕೊಡ್ಡನ್ನವರ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆಯ ಶಫಿಅಹ್ಮದ ಅಚನೂರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.