ಹೆಚ್ಚಿದ ನೀರಿನ ಹಾಹಾಕಾರ

•ಟ್ಯಾಂಕರ್‌ ಮೂಲಕ ನೀರು ಪೂರೈಸಿದ್ದರೂ ಸಾಕಾಗುತ್ತಿಲ್ಲ•ಹಿಡಕಲ್ ಜಲಾಶಯದಿಂದಲೂ ಬರಲಿಲ್ಲ ನೀರು

Team Udayavani, May 29, 2019, 10:02 AM IST

bk-tdy-2..

ಬನಹಟ್ಟಿ : ನಗರದ ನೀರಿನ ಟ್ಯಾಂಕ್‌ ಹತ್ತಿರದ ಪ್ರದೇಶದಲ್ಲಿ ಬೋರವೆಲ್ ನೀರಿಗಾಗಿ ಕೊಡಗಳನ್ನು ಸರತಿಯಲ್ಲಿ ಇಡಲಾಗಿದೆ.

ಬನಹಟ್ಟಿ: ಒಂದೂವರೆ ತಿಂಗಳಿಂದ ರಬಕವಿ- ಬನಹಟ್ಟಿ, ರಾಮಪುರ ಹಾಗೂ ಹೊಸೂರ ಜನತೆ ಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಆದರೆ, ಕಳೆದ ಐದಾರು ದಿನಗಳಿಂದ ನೀರಿನ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಸ್ಥಳೀಯ ಗುಡ್ಡದ ಪ್ರದೇಶದಲ್ಲಿ ಜನರು ನೀರಿಗಾಗಿ ನಾಲ್ಕಾರು ದಿನಗಳ ಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ. ಇಲ್ಲಿ ಸರತಿಯಲ್ಲಿಟ್ಟ ಕೊಡಗಳನ್ನು ಯಾರು ಮನೆಗೆ ತೆಗೆದುಕೊಂಡು ಹೋಗಿಲ್ಲ. ವಾರಕ್ಕೆ ಹತ್ತಾರು ಕೊಡು ನೀರು ಸಿಗುವುದು ಕೂಡಾ ದುರ್ಬಲವಾಗಿದೆ. ಬೋರವೆಲ್ ಸಮರ್ಪಕವಾಗಿ ನೀರು ಕೊಡುತ್ತಿಲ್ಲ. ಆದರೂ ಈ ಭಾಗದಲ್ಲಿ ಟ್ಯಾಂಕರ್‌ ಕಳುಹಿಸುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ನೀರಿನ ಟ್ಯಾಂಕ್‌ ಹಿಂದುಗಡೆಯ ಸಾರ್ವಜನಿಕರು.

ಟ್ಯಾಂಕರ್‌ ನೀರು ಸಾಲುತ್ತಿಲ್ಲ: ಆದರೆ ನಗರಸಭೆಯವರು ಕೂಡಾ ನೀರು ಪೂರೈಸಲು ಹರಸಾಹಸ ಮಾಡುತ್ತಿದ್ದಾರೆ. ನೀರಿನ ಅವಶ್ಯಕತೆ ಇದ್ದ ಪ್ರದೇಶದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 8 ಟ್ಯಾಂಕರ್‌ಗಳ ಮೂಲಕ 28 ಟ್ರಿಪ್‌ ನೀರು ಪೂರೈಸಲಾಗುತ್ತಿದೆ. ಆದರೂ ನೀರಿನ ಸಮಸ್ಯೆ ಮಾತ್ರ ಕಡಿಮೆ ಆಗಿಲ್ಲ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿದರೂ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ನೀರು ಎಲ್ಲೆಂದರಲ್ಲಿ ಸಾಕಾಗುತ್ತಿಲ್ಲ.

ಶುದ್ಧ ಕುಡಿಯುವ ನೀರಿನ ಘಟಕ ಬಂದ್‌: ಶುದ್ಧ ನೀರು ಪೂರೈಸುತ್ತಿದ್ದ ಕಾಡಸಿದ್ದೇಶ್ವರ ದೇವಸ್ಥಾನ ಹತ್ತಿರದ ಘಟಕ ಕೂಡಾ ಬಂದ್‌ ಆಗಿದೆ. ಇದರಿಂದ ತೀವ್ರ ತೊಂದರೆಯಾಗಿದೆ. ನಗರದಲ್ಲಿ ಸರಕಾರಿ 5 ಶುದ್ಧ ನೀರಿನ ಘಟಕಗಳಿದ್ದರೂ ಕೂಡ ನೀರಿಲ್ಲದೆ ತನ್ನ ಕಾರ್ಯ ಸ್ಥಗಿತಗೊಳಿಸಿವೆ. ಜನತೆಗೆ ಕುಡಿಯಲು ಶುದ್ಧ ನೀರಿಗಾಗಿ ಲಕ್ಷ್ಮೀ ನಗರ, ಮಂಗಳವಾರ ಪೇಟೆ ಹೊರತುಪಡಿಸಿದರೆ ದೂರದ 2-3 ಕಿ.ಮೀ. ದೂರ ಸಾಗಬೇಕಿದೆ.

ಆಡಳಿತ ಮತ್ತು ವಿರೋಧ ಪಕ್ಷದವರು ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಿಸುವಲ್ಲಿ ವಿಫಲರಾಗಿದ್ದಾರೆ. ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲಾಯಿತು. ಆದರೆ, ರಬಕವಿ ಬನಹಟ್ಟಿ ಹತ್ತಿರ ಮಹಿಷವಾಡಗಿ ಬ್ಯಾರೇಜ್‌ಗೆ ಬಂದು ತಲುಪುವುದು ಕೂಡಾ ಕಷ್ಟವಾಗಿದೆ.

ಉತ್ತಮ ಮಳೆ ಬಿದ್ದರೂ ನೀರಿನ ಬವಣೆ ಮಾತ್ರ ತಪ್ಪಿಲ್ಲ. ನೇಕಾರಿಕೆಯ ನಗರಗಳು ಈಗ ನೀರಿಗಾಗಿ ಪರದಾಡುತ್ತಿವೆ. ನೇಕಾರರು ಮನೆಯ ಉದ್ಯೋಗವನ್ನು ಬಿಟ್ಟು ನೀರಿಗಾಗಿ ಹಗಲು ರಾತ್ರಿ ಪರದಾಡುವಂತಾಗಿದೆ.

ಸ್ಥಳೀಯ 31 ವಾರ್ಡ್‌ಗಳಲ್ಲಿ ತಾರತಮ್ಯ ಎಸಗದೆ ನೀರು ಪೂರೈಕೆಗೆ ಸನ್ನದ್ಧವಾಗಿದೆ. ಸದ್ಯಕ್ಕೆ ನೀರಿನ ಸಮಸ್ಯೆ ಅಷ್ಟಾಗಿ ಇಲ್ಲ. ಎಲ್ಲ ಕಡೆ ನಿಯಂತ್ರಣದಲ್ಲಿದೆ. ಬೋರವೆಲ್ಲಗಳು ಬಂದ್‌ ಆದ ಕಡೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದ್ದೇವೆ. ಅಲ್ಲದೇ ಖಾಸಗಿ ಬೋರವೆಲ್ಗಳ ಮಾಲೀಕರ ಮನವೊಲಿಸಿ ಅವರಿಂದಲು ನೀರು ಕೊಡಿಸುವ ವ್ಯವಸ್ಥೆ ಮಾಡಿದ್ದೇವೆ. •ಆರ್‌. ಎಂ. ಕೊಡಗೆ, ಪೌರಾಯುಕ್ತರು ರಬಕವಿ-ಬನಹಟ್ಟಿ ನಗರಸಭೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.