ಭಾರತ-ಪಾಕ್ ಯುದ್ಧ ಬೇಡ: ಪೇಜಾವರ ಶ್ರೀ
Team Udayavani, Mar 5, 2019, 12:55 AM IST
ಬಾಗಲಕೋಟೆ: “ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ಬೇಡ. ಯುದ್ಧದಿಂದ ಎರಡೂ ದೇಶಗಳಿಗೆ ಅಪಾರ
ಹಾನಿಯಾಗಲಿದೆ’ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದಿಂದ ಎರಡೂ ದೇಶಕ್ಕೆ ಹಾನಿಯಾಗಲಿದೆ. ಹೀಗಾಗಿ
ಪಾಕಿಸ್ತಾನಕ್ಕೆ ಸರ್ಜಿಕಲ್ ಸ್ಟ್ರೆ „ಕ್ ಮೂಲಕವೇ ಬುದ್ಧಿಕಲಿಸಬೇಕು. ಪಾಕಿಸ್ತಾನ ಯುದ್ಧದಂತಹ ದುಸ್ಸಾಹಸಕ್ಕೆ ಇಳಿಯುವುದಿಲ್ಲ. ಹೀಗಾಗಿ ಯುದ್ಧ ಬೇಡ. ನಮ್ಮ ಭಾರತೀಯ ಸೇನೆಗೆ ಇಡೀ ದೇಶದ ಬೆಂಬಲವಿದೆ. ಕೇಂದ್ರ ಸರ್ಕಾರ ಮತ್ತು ಸೇನೆ ಉಗ್ರರ ವಿರುದ್ಧ ದಿಟ್ಟತನದ ಕ್ರಮ ಕೈಗೊಂಡಿದೆ. ಇದರಿಂದ ನಮಗೆಲ್ಲ ಧೈರ್ಯ ಬಂದಿದೆ ಎಂದರು.
ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವಾಯು ಸೇನೆಯ ದಾಳಿ ಕುರಿತು ವಿವಿಧ ರಾಜಕೀಯ ಪಕ್ಷಗಳ ನಾಯಕರು ಬೇರೆ ಬೇರೆ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಮತ ಬೇಧಗಳೇನೇ ಇದ್ದರೂ ದೇಶ ರಕ್ಷಣೆ ವಿಷಯದಲ್ಲಿ ಅವನ್ನೆಲ್ಲ ಮರೆತು ಒಂದಾಗಬೇಕು ಎಂದರು. ಕೃಷ್ಣ ಮಠಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡದಿರುವ ವಿಷಯ ದೊಡ್ಡದು ಮಾಡುವುದು ಬೇಡ. ಮೊನ್ನೆ ಸಿದ್ದರಾಮಯ್ಯ ಸಿಕ್ಕಿದ್ದರು. ಮಾತನಾಡಿದ್ದೇನೆ. ಎಲ್ಲವೂ ಸರಿ ಹೋಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ