![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಜ್ಞಾನ-ವಿಜ್ಞಾನದಲ್ಲಿ ಭಾರತದ ಸಾಧನೆ ಅಪಾರ: ಡಾ| ಮಹಾಂತ ದೇವರು
ಪಾಲಕರು ಮಕ್ಕಳ ಜತೆ ಬೆರೆಯಬೇಕು.
Team Udayavani, Dec 18, 2023, 2:21 PM IST
![ಜ್ಞಾನ-ವಿಜ್ಞಾನದಲ್ಲಿ ಭಾರತದ ಸಾಧನೆ ಅಪಾರ: ಡಾ| ಮಹಾಂತ ದೇವರು](https://www.udayavani.com/wp-content/uploads/2023/12/Dala-620x255.jpg)
ತೇರದಾಳ: ಅಂದು ಭಾರತವನ್ನು ಕಡೆಗಣಿಸಿದ್ದ ಇಂಗ್ಲೆಂಡ್, ಅಮೆರಿಕಾ ಸೇರಿದಂತೆ ಜಗತ್ತಿನ ಅನೇಕ ರಾಷ್ಟ್ರಗಳು ಇಂದು ನಮ್ಮ ರಾಷ್ಟ್ರವನ್ನು ನೋಡುವ ದೃಷ್ಟಿ ಬದಲಾಗಿ ಶ್ರೇಷ್ಠ ಭಾರತ ಎಂಬುದಾಗಿ ಅರ್ಥೈಸಿಕೊಂಡಿರುವುದು ಹೆಮ್ಮೆ. ಇದಕ್ಕೆ ನಮ್ಮಲ್ಲಾದ ಹಲವು ಬದಲಾವಣೆಗಳೆ ಕಾರಣ. ಉತ್ತಮ ಶಿಕ್ಷಣ ಪಡೆದ ನಮ್ಮವರು ಜ್ಞಾನ, ವಿಜ್ಞಾನದಲ್ಲಿ ಮಾಡಿದ ಸಾಧನೆ ಅಪಾರವಾಗಿದೆ ಎಂದು ಶೇಗುಣಸಿ ವಿರಕ್ತಮಠದ ಡಾ| ಮಹಾಂತ ದೇವರು ಹೇಳಿದರು.
ಪಟ್ಟಣದ ಸಿದ್ದೇಶ್ವರ ವಿದ್ಯಾವರ್ಧಕ ಸಂಘದ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ವಿಜ್ಞಾನ ಪಿಯು ಕಾಲೇಜಿನ ವಾರ್ಷಿಕೋತ್ಸವ ಉತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಇಂದಿನ ಮಕ್ಕಳಿಗೆ ಅಕ್ಷರದ ಜತೆಗೆ ಸಂಸ್ಕಾರ ಕಲಿಸಬೇಕಿದೆ. ಮಕ್ಕಳ ಮನಸ್ಸು ವಿಕಸಿತವಾಗುವಂತಹ ಶಿಕ್ಷಣ ನೀಡಬೇಕಿದೆ.
ಅಗತ್ಯಬಿದ್ದರೆ ಈ ಸಂಸ್ಥೆಯ ಮಕ್ಕಳಿಗೆ ಮೌಲ್ಯಶಿಕ್ಷಣದ ಶಿಬಿರ ನಡೆಸಲು ಸಿದ್ಧರಾಗಿರುವುದಾಗಿ ಹೇಳಿದರು.
ಹಿರಿಯ ಸಾಹಿತಿ ಸಿದ್ದು ದಿವಾನ ಮಾತನಾಡಿ, ಪಾಲಕರು ಮಕ್ಕಳ ಜತೆ ಬೆರೆಯಬೇಕು. ಅವರಲ್ಲಿನ ಭಯ ಹೋಗಲಾಡಿಸಬೇಕು.
ಸಾಮಾಜಿಕ ಮೌಲ್ಯ ಬಿತ್ತುವ ಕೆಲಸ ಶಾಲೆಗಳೊಂದಿಗೆ ಮನೆಯಿಂದಲೂ ನಡೆಯಬೇಕಿದೆ ಎಂದರು.
ತೇರದಾಳ ಶಾಸಕ ಸಿದ್ದು ಸವದಿ, ಮುಖಂಡ ಸಿದ್ದು ಕೊಣ್ಣುರ, ಕ್ಷೇತ್ರಶಿಕ್ಷಣಾಧಿಕಾರಿ ಎ.ಕೆ. ಬಸಣ್ಣವರ ಮಾತನಾಡಿದರು.
ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಡಾ| ಶಂಕರ ಅಥಣಿ, ಚೇರಮನ್ ಮಹೇಶ ಯಾದವಾಡ ಉದ್ಘಾಟಿಸಿದರು. ಶಂಕರ
ಮಂಗಸೂಳಿ, ಪ್ರಕಾಶ ಕಾಲತಿಪ್ಪಿ, ಬಿಆರ್ಸಿ ರಮೇಶ ಅವಟಿ, ಸಿಆರ್ಪಿ ಎ.ಆರ್. ಮುಧೋಳ, ಆಡಳಿತಾಧಿಕಾರಿ ಎಂ.ಬಿ.ಮಾಳೇದ, ಪ್ರಾಚಾರ್ಯ ಜಾಯ್ ಸೆಬ್ ಸ್ಟೇನ್, ಆಡಳಿತ ಮಂಡಳಿಯವರು, ಸಿಬ್ಬಂದಿ, ಪಾಲಕರು ಉಪಸ್ಥಿತರಿದ್ದರು. ಮಕ್ಕಳಿಗೆ ಪಾರಿತೋಷಕ ವಿತರಣೆ ಜರುಗಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.