ಅನಾವರಣಗೊಳ್ಳಲು ಸಿದ್ದವಾಗುತ್ತಿದೆ ದೇಶದ ಅತಿದೊಡ್ಡ ಮಾಸ್ಕ್, 108 ಅಡಿ ಉದ್ದದ ಮಲ್ಲಯ್ಯ ಧ್ವಜ


Team Udayavani, Mar 27, 2021, 8:31 AM IST

ಅನಾವರಣಗೊಳ್ಳಲು ಸಿದ್ದವಾಗುತ್ತಿದೆ ದೇಶದ ಅತಿದೊಡ್ಡ ಮಾಸ್ಕ್, 108 ಅಡಿ ಉದ್ದದ ಮಲ್ಲಯ್ಯ ಧ್ವಜ

ಅಮೀನಗಡ (ಬಾಗಲಕೋಟೆ): ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆಯಲ್ಲೂ ಕೊರೊನಾ ಜಾಗೃತಿ!

ಹೌದು, ಶ್ರೀಶೈಲ ಕ್ಷೇತ್ರವೂ ಭಾರತದ ಪ್ರಾಚೀನ ಧಾರ್ಮಿಕ ಕ್ಷೇತ್ರದಲ್ಲಿ ಇತಿಹಾಸದಲ್ಲಿ ತುಂಬಾ ಪ್ರಾಚೀನವಾದದು. ವೇದಗಳಲ್ಲಿ, ಪುರಾಣ ಆಗಮಗಳಲ್ಲಿ ಇದನ್ನು ತುಂಬಾ ಪವಿತ್ರ ಕ್ಷೇತ್ರವೆಂದು ಪರಿಗಣಿಸಲಾಗಿದೆ. ಮಾರ್ಚ್ ತಿಂಗಳು ಮಲ್ಲಯ್ಯನ ಪಾದಯಾತ್ರೆ ಮಾಡುವ ಭಕ್ತರಿಗೆ ಶ್ರೀಶೈಲ ಮಲ್ಲಿಕಾರ್ಜುನದೇ ಧ್ಯಾನ. ಲಕ್ಷಾಂತರ ಭಕ್ತರು ಉತ್ತರ ಕರ್ನಾಟಕದಿಂದ ಪಾದಯಾತ್ರೆ ಕೈಗೊಳ್ಳುವುದು ಶತಮಾನಗಳ ಇತಿಹಾಸವಿದೆ.

ಮಾ.29 ರಂದು ಪಟ್ಟಣದಿಂದ ಬೆಂಗಳೂರಿನ ಅಮ್ಮಾ ಪೌಂಡೇಶನ್ ಮತ್ತು ಪಟ್ಟಣದ ಶ್ರೀಶೈಲ ಭಕ್ತರು ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಪಾದಯಾತ್ರೆಯಲ್ಲಿ ಧಾರ್ಮಿಕ ಜಾಗೃತಿ ಹಾಗೂ ಕೊರೊನಾ ಜಾಗೃತಿ ಮಾಡುವ ಮೂಲಕ ಧಾರ್ಮಿಕ ಆಚರಣೆಯ ಜೊತೆಗೆ ಸಾಮಾಜಿಕ ಕಳಕಳಿಯ ಚಟುವಟಿಕೆ ಮಾಡಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಕೊರೊನಾ ಜಾಗೃತಿ: ದಿನೇ ದಿನೆ ಹೆಚ್ಚುತ್ತಿರುವ ಕೊರೊನಾ ವೈರಸ್ ಹಾವಳಿಯಿಂದಾಗಿ ಪಟ್ಟಣದಿಂದ ಶ್ರೀಶೈಲ ಪಾದಯಾತ್ರೆಗೆ ಹೊರಡುವ ಭಕ್ತರು ಈ ಭಾರಿ ಪಾದಯಾತ್ರೆಯಲ್ಲಿ ಕೊರೊನಾ ಜಾಗೃತಿ ಮೂಡಿಸಲು 8 ಅಡಿ ಉದ್ದನೆಯ 6 ಅಡಿ ಅಗಲದ ದೇಶದ ಅತಿದೊಡ್ಡ ಮಾಸ್ಕ್ ತಯಾರಿಸಿ ರಸ್ತೆಯುದ್ದಕ್ಕೂ ಪ್ರಮುಖ ನಗರಗಳಲ್ಲಿ ಜಾಗೃತಿ ಮೂಡಿಸಲು ಹಾಗೂ ರಸ್ತೆಯುದ್ದಕ್ಕೂ ಮಾಸ್ಕ್ ವಿತರಣೆ, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಇದರ ಕುರಿತು ಮೈಕ್ ಮೂಲಕ ಜಾಗೃತಿ ಅಭಿಯಾನ ಮಾಡಲು ಸಿದ್ದತೆ ಮಾಡಿದ್ದಾರೆ. ಇದು ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಮಲ್ಲಯ್ಯನ ಧ್ವಜ: ಪಟ್ಟಣದಿಂದ ಶ್ರೀಶೈಲ ಪಾದಯಾತ್ರೆಗೆ ಹೋಗುವ ಮಲ್ಲಯ್ಯನ ಭಕ್ತರು ಈ ಭಾರಿ ಸುಮಾರು 108 ಅಡಿ ಉದ್ದನೇಯ ಮಲ್ಲಯ್ಯ ಧ್ವಜ ಸಿದ್ದಪಡಿಸಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆಯ ಮೂಲಕ ಧಾರ್ಮಿಕ ಜಾಗೃತಿ ಮಾಡಲು ವಿಶೇಷ ತಯಾರಿ ಮಾಡಿದ್ದಾರೆ.

ಅಸ್ಲಂನ ಕೈಚಳಕ: 108 ಅಡಿ ಉದ್ದದ ಮಲ್ಲಯ್ಯನ ಧ್ವಜಕ್ಕೆ ಗದಗ ಜಿಲ್ಲೆಯ ಸ್ಯಾಟಿನ್ ಬಟ್ಟೆ ಬಳಸಲಾಗಿದೆ ಮತ್ತು ಬಾಗಲಕೋಟೆಯ ಖ್ಯಾತ ಕಲಾವಿದ ಅಸ್ಲಂ ಕಲಾದಗಿ ಹಾಗೂ ರವೀಂದ್ರ ಬಂಡಿ ಅವರು ಬಟ್ಟೆಯ ಮೇಲೆ ಆಕರ್ಷಕವಾದ ಮಲ್ಯಯನ ಚಿತ್ರ ಮತ್ತು ಮಾಸ್ಕ್ ಜಾಗೃತಿ ಸಂದೇಶಗಳನ್ನು ಬಿಡಿಸಿದ್ದಾರೆ. ಇದು ನೋಡುಗರ ಕಣ್ಮನ ಸೆಳೆಯುತ್ತಿದೆ.

ಬೆಂಗಳೂರಿನ ಭಕ್ತರ ಪಾದಯಾತ್ರೆ: ಬೆಂಗಳೂರಿನ ಅಮ್ಮಾ ಪೌಂಡೇಶನ್ ಮತ್ತು ಪಟ್ಟದ ಶ್ರೀಶೈಲ ಭಕ್ತರು ಕಳೆದ 7 ವರ್ಷಗಳಿಂದ ಅಮೀನಗಡ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆ ಮಾಡುತ್ತಿದ್ದಾರೆ. ಪಟ್ಟಣದ ಉದ್ಯಮಿ ಮಂಜುನಾಥ ಬಂಡಿ ರಾಜಧಾನಿ ಬೆಂಗಳೂರಿಗೂ ಈ ಭಕ್ತಿಯ ನಂಟನ್ನು ಹಚ್ಚಿಸಿ ಪ್ರತಿವರ್ಷ ಬೆಂಗಳೂರಿನಿಂದ 25 ಜನರನ್ನು ಕರೆತಂದು ಪಟ್ಟಣದಿಂದ 450 ಕಿಮಿ ನಡೆಸಿ ಅವರಲ್ಲಿ ಭಕ್ತಿ ಬೀಜವನ್ನು ಬಿತ್ತುತ್ತಿದ್ದಾರೆ. ಪಟ್ಟಣದಿಂದ ಸುಮಾರು 200 ಭಕ್ತರು ಕೂಡಾ ಅವರ ಜೊತೆ ಶ್ರೀಶೈಲ ಪಾದಯಾತ್ರೆ ಮಾಡುತ್ತಾರೆ.

ರಸ್ತೆಯುದ್ದಕ್ಕೂ ಸನ್ಮಾನ: ಪಟ್ಟಣದಿಂದ ಹೋಗುವ’ ಪಾದಯಾತ್ರೆಯು ಶ್ರೀ ಶೈಲ ಮಲ್ಲಿಕಾರ್ಜುನ ದೇವಸ್ಥಾನ ತಲುಪುವರೆಗೂ ದಾರಿಯುದ್ದಕ್ಕೂ ದಾಸೋಹ ಮತ್ತು ವಿವಿಧ ರೀತಿಯ ಸೇವೆ ಮಾಡುವ ಮುಖ್ಯಸ್ಥರಿಗೆ ಅಮ್ಮಾ ಪೌಂಡೇಶನ್ ಮತ್ತು ಅಮೀನಗಡ ಶ್ರೀಶೈಲ ಭಕ್ತರ ಪರವಾಗಿ ಸನ್ಮಾನ ಮಾಡಿ ಅವರಿಗೂ ದಾಸೋಹದ ಕುರಿತು ಜಾಗೃತಿ ಮಾಡಲಾಗುತ್ತಿದೆ.

ಒಟ್ಟಾರೆ ಬೆಂಗಳೂರು ಮತ್ತು ಪಟ್ಟಣದ ಶ್ರೀಶೈಲ ಭಕ್ತರು ಧಾರ್ಮಿಕ ಜಾಗೃತಿ ಮತ್ತು ಕೊರೊನಾ ಜಾಗೃತಿ ಮಾಡುವ ಉದ್ದೇಶದಿಂದ 108 ಉದ್ದದ ಮಲ್ಯಯ್ಯನ ಧ್ವಜ ಮತ್ತು 8 ಅಡಿ ಉದ್ದದ ಮಾಸ್ಕ ತಯಾರಿ ಮಾಡಿದ್ದು ಎಲ್ಲರ ಗಮನ ಸೆಳೆದಿದೆ.

ಮಾ.29ರಂದು ಮಲ್ಲಯ್ಯನ ಧ್ವಜ ಪ್ರದರ್ಶನ: ಶ್ರೀಶೈಲ ಪಾದಯಾತ್ರೆ ಅಂಗವಾಗಿ ಧಾರ್ಮಿಕ ಜಾಗೃತಿ ಹಾಗೂ ಕೊರೊನಾ ಜಾಗೃತಿ ಮೂಡಿಸಲು 108 ಅಡಿ ಉದ್ದದ ಮಲ್ಲಯ್ಯನ ಧ್ವಜ ಹಾಗೂ ದೇಶದ ಅತಿ ದೊಡ್ಡ ಮಾಸ್ಕ ಅನಾವರಣ ಕಾರ್ಯಕ್ರಮ ಮಾ.29ರಂದು ಸಂಜೆ 4ಕ್ಕೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ಅವರು ಮಲ್ಲಯ್ಯನ ಧ್ವಜಾ ಅನಾವರಣಗೊಳಿಸುವರು. ಗಚ್ಚಿನಮಠದ ಶಂಕರರಾಜೇಂದ್ರ ಸ್ವಾಮೀಜಿ, ಶ್ರೀಶೈಲ್ ಜಗದ್ಗುರು ಪೀಠದ ಶಾಖಾಮಠ ಸಂಡೂರ ತಾಲೂಕಿನ ಅಂತಾಪುರದ ಕುಮಾರ ಪಂಡಿತಾರಾಧ್ಯ ಸ್ವಾಮೀಜಿ ಸಾನಿಧ್ಯ ವಹಿಸುವರು. ಬೆಂಗಳೂರಿನ ನಾಗಾರ್ಜುನ ವಿವಿಯ ನಿರ್ದೇಶಕ ಮನೋಹರ ಸರೋಜಿ, ರಾಷ್ಟ್ರೀಯ ವಾಲಿಬಾಲ್ ಮಾಜಿ ಆಟಗಾರ ರೋಹಿತ ಕೆಂಪೇಗೌಡ, ರಾಷ್ಟ್ರೀಯ ಆಟಗಾರ್ತಿ ಪ್ರಮೀಳಾ ಗಟ್ಟಿ, ಸಂಪನ್ಮೂಲ ವ್ಯಕ್ತಿ ರಮೇಶ ಉಮ್ರಾಣಿ, ಜ್ಞಾನಜ್ಯೋತಿ ಕಾಲೇಜು ಪ್ರಾಚಾರ್ಯ ರಮೇಶ ಸೇರಿದಂತೆ ಪಟ್ಟಣದ ಗಣ್ಯಮಾನ್ಯರಿಂದ 150 ಕೆಜಿ ಹೂಗಳ ಪುಷ್ಪಾರ್ಚನೆ ಮೂಲಕ ಪಥ ಸಂಚಲನ ನಡೆಯಲಿದೆ ಎಂದು ಉದ್ಯಮಿ ಮಂಜುನಾಥ ಬಂಡಿ ತಿಳಿಸಿದ್ದಾರೆ.

ಎಚ್.ಎಚ್.ಬೇಪಾರಿ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.