100 ಎಕರೆ ಭೂಮಿ; ಇಸ್ರೇಲ್ ಮಾದರಿ ನೀರಾವರಿ: ನಿರಾಣಿ
Team Udayavani, Jun 27, 2021, 3:44 PM IST
ಬೀಳಗಿ: ನಾನು ಪ್ರತಿನಿಧಿಸುವ ಬೀಳಗಿ ಮತಕ್ಷೇತ್ರ ಮತ್ತು ಕಲಬುರಗಿ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಪ್ರತಿ ತಾಲೂಕಿನಲ್ಲಿ ಪ್ರಾಯೋಗಿಕವಾಗಿ 100 ಎಕರೆ ಭೂಮಿಯಲ್ಲಿ ಇಸ್ರೇಲ್ ಮಾದರಿ ನೀರಾವರಿ ಪದ್ದತಿ ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.
ಪಟ್ಟಣದ ನಿರಾಣಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಕ್ಕಳಿಗೆ ಟ್ಯಾಬ್ ವಿತರಣೆ ಹಾಗೂ ಎಂ.ಎನ್. ನಿರಾಣಿ ಕಾಲೇಜು ಆವರಣದಲ್ಲಿ 1.35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ 5 ಕೊಠಡಿಗಳ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಹೆಚ್ಚಿನ ಇಳುವರಿ ಪದ್ದತಿ ಅಳವಡಿಸುವ ಯೋಜನೆ ಮಾಡಲಾಗಿದ್ದು ಬರುವ ದಿನಗಳಲ್ಲಿ ಬೀಳಗಿ ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿ ಸುಮಾರು 15 ಸಾವಿರ ಎಕರೆ ಸವಳು-ಜವಳು ಜಮೀನಿದ್ದು ಅದನ್ನು ಮತ್ತೆ ಫಲವತ್ತಾದ ಜಮೀನು ಮಾಡಲು ಬೇಕಿರುವ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ಆದ್ಯತೆ: ಮಕ್ಕಳ ಶಿಕ್ಷಣಕ್ಕೆ ಅಗತ್ಯವಿರುವ ಕಲಿಕಾ ಪದ್ದತಿ ಹಾಗೂ ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಬೇಕಿರುವ ಹೊಸ ಹೊಸ ವಿಧಾನಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ತಂದು ಮಕ್ಕಳ ಶಿಕ್ಷಣ ಗುಣಮಟ್ಟ ಹೆಚ್ಚುವಂತೆ ಮಾಡಲಾಗುವುದು ಎಂದು ಹೇಳಿದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಆದರೆ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ. ಅದಕ್ಕಾಗಿ ಮಕ್ಕಳ ಆಸಕ್ತಿಗೆ ಅನುಸಾರವಾಗಿ ಅವರ ಬುದ್ದಿ ಶಕ್ತಿ ಹೆಚ್ಚಳ ಮಾಡುವ ಕೆಲಸ ಮಾಡಬೇಕಿದೆ. ಅದಕ್ಕಾಗಿ ತಾಲೂಕಿನ ಬಿಇಒ ಹಾಗೂ ಶಿಕ್ಷಕರಿಗೆ ಎಲ್ಲ ಮಾಹಿತಿ ನೀಡಲಾಗಿದೆ. ಈ ಬಾರಿಯೂ ತಾಲೂಕು 10 ನೇ ತರಗತಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಜತೆಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ರ್ಯಾಂಕ್ ಪಡೆಯುವಂತಾಗಬೇಕು ಎಂದು ಹೇಳಿದರು. ಗುಣಮಟ್ಟದ ಕಾಮಗಾರಿಗೆ ಸೂಚನೆ: ಸರ್ಕಾರದಿಂದ ಜನರ ಅನುಕೂಲಕ್ಕಾಗಿ ಮಂಜೂರಾಗುವ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ನಿರ್ಮಿತಿ ಕೇಂದ್ರದಿಂದ ಆಗುವ ಕೆಲಸಗಳ ಬಗ್ಗೆ ನಿರಂತರ ನಿಗಾ ವಹಿಸಿ ಎಂದು ಕಾಲೇಜು ಸಿಬ್ಬಂದಿಗೆ ಸೂಚಿಸಿದರು.
ಪಪಂ ಸದಸ್ಯ ಮುತ್ತು ಬೋರ್ಜಿ, ಶ್ರೀಶೈಲ ಯಂಕಂಚಿಮಠ, ಬಸವರಾಜ ಉಮಚಗಿಮಠ, ಆನಂದ ಇಂಗಳಗಾಂವಿ, ಈರಣ್ಣ ತೋಟದ, ರಾಜೇಶ ಗುರಾಣಿ, ವಿಜಯಲಕ್ಷ್ಮೀ ಪಾಟೀಲ, ತಹಶೀಲ್ದಾರ್ ಶಂಕರ ಗೌಡಿ, ನಿರ್ಮಿತಿ ಕೇಂದ್ರದ ಅಧಿಕಾರಿಗಳಾದ ಎಸ್.ಎನ್. ಹಿರೇಮಠ, ಮಾಹಾಂತೇಶ ಕಪಾಲಿ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಸೋಮಶೇಖರ ಮಾರನೂರ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ