ನೇಕಾರರಿಗೆ ಸಾಲಮನ್ನಾ ಆದೇಶ ಪ್ರತಿ ವಿತರಣೆ


Team Udayavani, Mar 16, 2020, 2:51 PM IST

ನೇಕಾರರಿಗೆ ಸಾಲಮನ್ನಾ ಆದೇಶ ಪ್ರತಿ ವಿತರಣೆ

ಬನಹಟ್ಟಿ: ಸಹಕಾರಿ ಸಂಘಗಳು ನೇಕಾರರಿಗೆ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಪರಿಶೀಲನೆ ಮಾಡಿ ನಂತರ ಪ್ರಮಾಣ ಪತ್ರ ನೀಡಬೇಕು. ಈ ಸಂದರ್ಭದಲ್ಲಿ ಸಹಕಾರಿ ಸಂಘಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯುತ್ತವೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಸ್ಥಳೀಯ ಮೂಡಲಗಿ ಕುರುಹಿನಶೆಟ್ಟಿ ಕೊ-ಆಫ್‌ ಕ್ರೆಡಿಟ್‌ ಸೊಸೈಟಿಯ ಸ್ಥಳೀಯ ಶಾಖೆಯಲ್ಲಿ ಸಾಲ ಪಡೆದ ನೇಕಾರರ ಸಾಲ ಮನ್ನಾ ಮರುಪಾವತಿ ಅದೇಶದ ಪ್ರತಿಗಳನ್ನು ನೇಕಾರರಿಗೆ ವಿತರಣೆ ಮಾಡಿ ಅವರು ಮಾತನಾಡಿದರು. ನೇಕಾರರಿಗೆ ಸಾಲ ನೀಡುವ ವಿಧಾನವೂ ಕೂಡಾ ರೈತರಂತೆ ಸರಳೀಕರಣಗೊಳ್ಳಬೇಕು. ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಇನ್ನೂ ನೇಕಾರರ ಕ್ಯಾಶ್‌ ಕ್ರೆಡಿಟ್‌ ಸೌಲಭ್ಯ ಗೊಂದಲದ ಗೂಡಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ನೇಕಾರರ ಕ್ಯಾಶ್‌ ಕ್ರೆಡಿಟ್‌ ಸೌಲಭ್ಯವನ್ನು ಕೂಡಾ ಮನ್ನಾ ಮಾಡಲಾಗುವುದು. ಸಾಲ ಮನ್ನಾ ಸೌಲಭ್ಯ ಪಡೆದುಕೊಂಡ ನೇಕಾರರು ಮುಂದಿನ ದಿನಗಳಲ್ಲಿ ಸ್ವಾವಲಂಬಿಗಳಾಗಿ ಬದುಕಲಿ ಎಂದರು.

ಇದೇ ಸಂದರ್ಭದಲ್ಲಿ ಸಹಕಾರಿ ಸಂಘದ ಮುಖ್ಯ ಕಚೇರಿಯ ಅಧ್ಯಕ್ಷ ಬಿ.ಸಿ. ಮುಗಳಖೋಡ, ಸ್ಥಳೀಯ ಸಲಹಾ ಸಮಿತಿ ಕಾರ್ಯಾಧ್ಯಕ್ಷ ಗಂಗಪ್ಪ ಮಂಟೂರ ಮಾತನಾಡಿ, ಸಹಕಾರಿ ಸಂಘದ 67 ಜನ ಫಲಾನುಭವಿಗಳ 29,83,668 ರೂ. ಖಾತೆಗೆ ಜಮೆ ಆಗಿರುತ್ತದೆ. ಮುಂದಿನ ದಿನಗಳಲ್ಲಿ ಇನ್ನೂ 24 ಫಲಾನುಭವಿಗಳ ರೂ.27,16,216 ಸಾಲ ಮನ್ನಾ ಮೊತ್ತ ಜಮೆ ಆಗಬೇಕಾಗಿದೆ ಎಂದರು.

ಉಪಾಧ್ಯಕ್ಷ ಎಲ್‌.ಎಲ್‌. ಪೂಜೇರಿ, ವಿಷ್ಣುಕಾಂತ ಲಡ್ಡಾ, ಎಸ್‌.ಬಿ. ವಸ್ತದ, ಬಿ.ಎಸ್‌. ಗಿಡದಾನಪ್ಪಗೋಳ, ವಿ.ಎನ್‌. ಡುಮಕಿಮಠ, ಈಶ್ವರ ಪಟಗುಂಡಿ, ಎಚ್‌.ಐ. ಮುಲ್ಲಾ, ರಾಜು ಅಂಬಲಿ, ಚನಮಲ್ಲಪ್ಪ ಮೂಲಿಮನಿ, ಕುಮಾರ ಕದಂ, ಲಕ್ಕಪ್ಪ ಪಾಟೀಲ, ಪ್ರವೀಣ ಧಬಾಡಿ, ಬಸು ಅಮಟಿ ಇದ್ದರು. ಸಂಘದ ವ್ಯವಸ್ಥಾಪಕ ಪ್ರಮೋದ ಯಲಬುರ್ಗಿಮಠ ನಿರೂಪಿಸಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.