ಐಟಿ ಕ್ಷೇತ್ರ ಓಟದ ಕುದುರೆ ಇದ್ದಂತೆ : ಸಿದ್ದನಗೌಡ

ಗ್ರಾಹಕರ ಅವಶ್ಯಕತೆಗೆ ತಕ್ಕಂತೆ ಗುಣಾತ್ಮಕ ಸೇವೆ ಒದಗಿಸಿ

Team Udayavani, May 16, 2022, 2:48 PM IST

11

ಬಾಗಲಕೋಟೆ: ಐಟಿ ತಂತ್ರಜ್ಞಾನ ಎನ್ನುವುದು ಇಂದು ಕುದುರೆ ಓಟವಿದ್ದಂತೆ. ನಿರಂತರ ನಾವು ವೇಗವಾಗಿ ಓಡಬೇಕು. ನಮ್ಮನ್ನು ಸದಾಕಾಲ ಉನ್ನತೀಕರಿಸಿಕೊಂಡು ಎಲ್ಲ ಕಡೆಯಿಂದ ವೇಗವಾಗಿ ಗ್ರಹಿಸಿ ನಮ್ಮ ಕೌಶಲ್ಯದೊಂದಿಗೆ ಸೂಕ್ತ ಸ್ಥಳವನ್ನು ಆಯ್ಕೆ ಮಾಡಿಕೊಂಡು ಮುನ್ನುಗ್ಗುವುದು ಇಂದು ಅನಿವಾರ್ಯವಾಗಿದೆ ಎಂದು ಅಮೆರಿಕಾ ದೇಶದ ಸಿಟ್ರಿಕ್ಸ್‌ ಕಂಪನಿಯ ಹಿರಿಯ ತಾಂತ್ರಿಕ ಯೋಜನಾ ವ್ಯವಸ್ಥಾಪಕ ಮತ್ತು ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನ ಹಳೆಯ ವಿದ್ಯಾರ್ಥಿ ಸಿದ್ದನಗೌಡ ರಾಠಿ ಹೇಳಿದರು.

ನಗರದ ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಐಟಿ ಕ್ಷೇತ್ರದ ಆಧುನಿಕ ತಂತ್ರಜ್ಞಾನಗಳಾದ ಕ್ಲೌಡ್ ಮೈಗ್ರೇಶನ್‌, ಆರ್ಟಿಫಿಸಿಯಲ್‌ ಇಂಟೆಲಿಜೆನ್ಸ್‌, ಕ್ವಾಂಟಮ್‌ ಕಂಪ್ಯೂಟಿಂಗ್‌, ಬ್ಲಾಕ್ಚೆನ್, ಸೈಬರ್‌ ಸೆಕ್ಯೂರಿಟಿ, ಇಂತಹ ಆಧುನಿಕ ಜ್ಞಾನಗಳನ್ನು ಅಧ್ಯಯನ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಉತ್ತಮ ಸಂವಹನ ಗ್ರಾಹಕರ ಅವಶ್ಯಕತೆಗಳಿಗೆ ತಕ್ಕಂತೆ ಗುಣಾತ್ಮಕ ಸೇವೆ ಒದಗಿಸುವುದು ಐಟಿ ತಂತ್ರಜ್ಞರ ಜವಾಬ್ದಾರಿಯಾಗಿದೆ ಎಂದರು.

ಬಿವಿವಿಎಸ್‌ ತಾಂತ್ರಿಕ ಶಿಕ್ಷಣ ನಿರ್ದೇಶಕ ಡಾ| ಆರ್‌. ಎನ್‌. ಹೆರಕಲ್‌ ಮಾತನಾಡಿ, ತಂತ್ರಜ್ಞಾನವು ಇಂದು ಅಡುಗೆ ಮನೆಯಿಂದ ಹಿಡಿದು ಮಿಸಾಯಿಲ್‌ ಕ್ಷೇತ್ರದವರೆಗೆ ವ್ಯಾಪಿಸಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ರೋಬೋಟ್‌ ಸರ್ಜರಿ, ಎಂಆರ್‌ಐ ಸ್ಕ್ಯಾನಿಂಗ್‌, 3ಡಿ ಪ್ರಿಂಟಿಂಗ್‌ ನಂತಹ ತಂತ್ರಜ್ಞಾನಗಳು ಜನರಿಗೆ ಬಹಳ ಸಹಕಾರಿಯಾಗುತ್ತಿವೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ|ಎಸ್‌. ಎಸ್‌. ಇಂಜಗನೇರಿ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನದ ಸಹಾಯದಿಂದ ನಾವಿಂದು ನಮ್ಮ ಹಿರಿಯರಿಗಿಂತ ಉತ್ತಮ ಗುಣಮಟ್ಟದ ಜೀವನ ಸಾಗಿಸುತ್ತಿದ್ದೇವೆ. ತಂತ್ರಜ್ಞಾನವು ಬದುಕಿನ ಎಲ್ಲ ಆಯಾಮಗಳಲ್ಲಿ ಪ್ರಮುಖ ಪಾತ್ರ ವಹಿಸಿ ಹಲವಾರು ಸಮಸ್ಯೆಗಳಿಂದ ಮುಕ್ತಗೊಳಿಸಿ ಜೀವನಮಟ್ಟವನ್ನು ಸಂತೋಷದಿಂದ ಸಾಗಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ನಡೆದಿದ್ದ ಯಶಸ್ವಿ ಅಣುನ್ಪೋಟ ಪರೀಕ್ಷೆ ಸ್ಮರಣಾರ್ಥ ಪ್ರತಿವರ್ಷ ಹಮ್ಮಿಕೊಳ್ಳುವ ಇಂತಹ ತಂತ್ರಜ್ಞಾನ ದಿನಾಚರಣೆಗಳು ಮುಂಬರುವ ಯುವ ತಂತ್ರಜ್ಞರಿಗೆ ಉನ್ನತ ಸಾಧನೆ ಮಾಡಲು ಪ್ರೇರಣೆಯಾಗಲಿ ಎಂದರು.

ಡಾ|ಅನಿಲ್‌ ದೇವನಗಾವಿ ಪರಿಚಯಿಸಿದರು. ಅನುಷಾ ದೇಶಪಾಂಡೆ ಪ್ರಾರ್ಥಿಸಿದರು. ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಮುಖ್ಯಸ್ಥ ಡಾ| ವಿ.ಬಿ. ಪಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕಾಡೆಮಿಕ್‌ ಡಾ|ಪಿ.ಎನ್‌. ಕುಲಕರ್ಣಿ ಸ್ವಾಗತಿಸಿದರು. ಡಾ| ಛಾಯಾ ಲಕ್ಷ್ಮೀ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.