ಶಿಲ್ಪಕಲೆಗೆ ಜೀವನ ಪಣಕ್ಕಿಟ್ಟ ಜಕಣಾಚಾರಿ; ಎನ್‌.ವೈ

ರಾಜ್ಯದ ಬೇಲೂರು-ಹಳೆಬೀಡಿನಲ್ಲಿ ನಾಜೂಕಿನ ಶಿಲ್ಪಕಲೆ ನಾಡಿಗೆ ಕೊಟ್ಟ ಮಹಾನ್‌ ಶಿಲ್ಪಿಯಾಗಿದ್ದರು.

Team Udayavani, Jan 2, 2023, 5:13 PM IST

ಶಿಲ್ಪಕಲೆಗೆ ಜೀವನ ಪಣಕ್ಕಿಟ್ಟ ಜಕಣಾಚಾರಿ; ಎನ್‌.ವೈ

ಬಾಗಲಕೋಟೆ: ಇಡೀ ಜೀವನವನ್ನೇ ಶಿಲ್ಪ ಕಲೆಗಾಗಿ ಪಣಕ್ಕಿಟ್ಟಂತಹ ಶಿಲ್ಪಿ ಜಕಣಾಚಾರಿಯಾಗಿದ್ದರು ಎಂದು ಜಿಪಂ ಉಪ ಕಾರ್ಯದರ್ಶಿ ಎನ್‌.ವೈ. ಬಸರಿಗಿಡದ ಹೇಳಿದರು.

ಡಾ|ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಜಿ.ಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ರವಿವಾರ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಉದ್ಘಾಟಿಸಿ ಅವರು ಮಾತನಾಡಿದರು.

ಜಕಣಾಚಾರಿ ತನ್ನ ಶಿಲ್ಪ ಕಲೆ ಮೇಲೆ ಅಗಾಧ ದ ನಂಬಿಕೆಯಿಂದ ಕೆತ್ತಲಾಗಿದ್ದ ಚೆನ್ನಕೇ ಶವ ಮೂರ್ತಿಯಲ್ಲಿ ದೋಷವಿದೆ ಎಂಬ ಮಾತು ತನ್ನ ಮಗನಾದ ಡಂಕನಾಚಾರಿಯಿಂದ ಕೇಳಿ ಬಂದಾಗ ಮತ್ತು ಅದು ನಿಜವಾದಾಗ ತನ್ನ ಬಲಗೈಯನ್ನೇ ಕತ್ತರಿಸಿಕೊಂಡು ಮಾತಿಗೆ ತಕ್ಕಂತೆ ನಡೆದುಕೊಂಡು ಅಮರಶಿಲ್ಪಿಯಾಗಿ, ರಾಜ್ಯದ ಬೇಲೂರು-ಹಳೆಬೀಡಿನಲ್ಲಿ ನಾಜೂಕಿನ ಶಿಲ್ಪಕಲೆ ನಾಡಿಗೆ ಕೊಟ್ಟ ಮಹಾನ್‌ ಶಿಲ್ಪಿಯಾಗಿದ್ದರು ಎಂದರು.

ಇಳಕಲ್‌ ಡಯಟ್‌ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜಗದೇವ ಮರೋಳ ವಿಶೇಷ ಉಪನ್ಯಾಸಕರಾಗಿ ಮಾತನಾಡಿ, ಜಕಣಾಚಾರಿ ಕೆತ್ತಿದ ಹಲವಾರು ಶಿಲ್ಪಗಳು ಇಂದಿಗೂ ಕಂಗೊಳಿಸುತ್ತಿವೆ. ಬೇಲೂರು, ಹಳೆಬೀಡು ಸೋಮನಾಥಪುರ ದೇವಾಲಯಗಳಲ್ಲಿ ಅವರ ಶಿಲ್ಪಕಲಾ ಕೌಶಲ್ಯ ನೋಡಬಹುದು.ಕಲೆ ಎಲ್ಲರಿಗೂ ಒಲಿಯುವಂಥದ್ದಲ್ಲ.

ಜ್ಞಾನಭಾವದಿಂದ ತಪಸ್ಸಿನಿಂದ ಮಾತ್ರ ಶ್ರೇಷ್ಠ ಶಿಲ್ಪಿಯಾಗಲು ಸಾಧ್ಯ. ಶಿಲ್ಪಿಯಾದವನು ಹೇಗೆ ಇರಬೇಕು ಎಂಬುದನ್ನು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಅದರಂತೆಯೇ ಜಕಣಾಚಾರಿ ತಮ್ಮ ಕೆತ್ತನೆ ಮತ್ತು ನಡತೆಗಳಿಂದ ಅಮರಶಿಲ್ಪಿಯಾಗಿ ಅಜರಮರಾಗಿದ್ದಾರೆ ಎಂದು ಹೇಳಿದರು.  ಮುರನಾಳ ಜಗನ್ನಾಥ ಮಹಾಸ್ವಾಮಿ ಸಾನ್ನಿಧ್ಯ ವಹಿಸಿದ್ದರು. ಈ ವೇಳೆ ವಿಶ್ವಕರ್ಮ ಸಮುದಾಯದ ಮುಖಂಡರಾದ ಸಂಗಣ್ಣ ಹಡಗಲಿ, ವಿ.ಎಂ. ಕಮ್ಮಾರ, ಗ್ರೇಡ್‌-2 ತಹಶಿಲ್ದಾರ್‌ ಎಂ.ಎನ್‌. ಬಿರಾದಾರ ಸೇರಿದಂತೆ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ ಸ್ವಾಗತಿಸಿದರು. ಶಂಕರಲಿಂಗ ದೇಸಾಯಿ ನಿರೂಪಿಸಿದರು.

ಭಾವಚಿತ್ರ ಮೆರವಣಿಗೆ: ಶಾಸಕ ಡಾ| ವೀರಣ್ಣ ಚರಂತಿಮಠ ಬೆಳಗ್ಗೆ 9.30ಕ್ಕೆ ಜಿಲ್ಲಾಡಳಿತ ಭವನ ಆವರಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಭಾವಚಿತ್ರ ಮತ್ತು ವಿವಿಧ ಜನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು. ಮೆರಣಿಗೆ ಜಿಲ್ಲಾಡಳಿತ  ಭವನದಿಂದ ಪ್ರಾರಂಭವಾಗಿ ನವನಗರದ ಬಸ್‌ ನಿಲ್ದಾಣ, ಎಲ್‌ಐಸಿ ವೃತ್ತದ ಮಾರ್ಗವಾಗಿ ಸಾಗಿ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಮುಕ್ತಾಯಗೊಂಡಿತು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.