ಬಿಸಿಯೂಟ ಅವ್ಯವಹಾರದಲ್ಲಿ ಅಧಿಕಾರಿಗಳು ಶಾಮೀಲು


Team Udayavani, Sep 23, 2018, 3:12 PM IST

23-sepctember-17.jpg

ಜಮಖಂಡಿ: ಪ್ರಾಥಮಿಕ, ಪ್ರೌಢಶಾಲೆ ಮಕ್ಕಳಿಗೆ ಸರಕಾರದಿಂದ ನೀಡಲಾಗುವ ಬಿಸಿಯೂಟದಲ್ಲಿ ಅವ್ಯವಹಾರ ನಡೆದಿದೆ. ಮಕ್ಕಳ ದಾಖಲಾತಿ, ಹಾಜರಾತಿ ಹಾಗೂ ಪೂರೈಕೆಯ ಅಂಕಿ-ಅಂಶಗಳು ಸಂಪೂರ್ಣ ವ್ಯತ್ಯಾಸವಾಗಿದ್ದು ತನಿಖೆ ನಡೆಸಬೇಕು ಎಂದು ತಾಪಂ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದರು.

ನಗರದ ತಾಪಂ ಸಭಾಭವನದಲ್ಲಿ ಶನಿವಾರ ತಾಪಂ ಅಧ್ಯಕ್ಷೆ ನಾಗವ್ವ ಕುರಣಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಬಿಸಿಯೂಟ ಅ ಧಿಕಾರಿ ಪ್ರಗತಿ ಪರಿಶೀಲನೆ ನಡೆಸುವ ವೇಳೆ ಅ ಧಿಕಾರಿಗಳ ಹಾಗೂ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ತೇರದಾಳ ಶಾಸಕ ಸಿದ್ದು ಸವದಿ ಮಧ್ಯೆ ಪ್ರವೇಶಿಸಿ ತಾಲೂಕು ಬಿಸಿಯೂಟ ಅಧಿಕಾರಿಗಳ ನೀಡಿದ ಪ್ರಗತಿ ವರದಿ ಪರಿಶೀಲಿಸಿದ ನಂತರ ಅಂಕಿ-ಅಂಶಗಳ ಪ್ರಕಾರ ಮಕ್ಕಳ ಹಾಜರಾತಿ ಕಡಿಮೆಯಿದ್ದು, ಪೂರೈಕೆಯಲ್ಲಿ ವ್ಯತ್ಯಾಸವಾಗಿದ್ದು, ಅಂದಾಜು 10 ರಿಂದ 20 ಸಾವಿರ ಮಕ್ಕಳಿಗೆ ಆಹಾರ ಪೂರೈಸದಿದ್ದರೂ ಯಾವ ಆಧಾರದ ಮೇಲೆ, ಯಾಕೆ ವೇತನ ಪಾವತಿ ಮಾಡಲಾಗಿದೆ. ಓರ್ವ ವಿದ್ಯಾರ್ಥಿಗೆ ನಿತ್ಯ 5 ರೂ.ದಂತೆ ಅಂದಾಜು 10 ರಿಂದ 20 ಸಾವಿರ ವಿದ್ಯಾರ್ಥಿಗಳ ಒಂದು ದಿನದ ವೆಚ್ಚ 50 ರಿಂದ 95 ಸಾವಿರ ರೂ. ಪೋಲಾಗಿದ್ದು ತಾಲೂಕು ಮಟ್ಟದ ಅಧಿಕಾರಿಗಳು ಗಮನಿಸುವ ಮೂಲಕ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ತಾ.ಪಂ ಅಧ್ಯಕ್ಷೆ ನಾಗವ್ವ ಕುರಣಿ, ಉಪಾಧ್ಯಕ್ಷೆ ಸುಂದ್ರವ್ವ ಬೆಳಗಲಿ, ಸ್ಥಾಯಿ ಸಮಿತಿ ಚೇರಮನ್‌ ಗುರಪಾದಯ್ಯ ಮರಡಿಮಠ, ತಾ.ಪಂ ಇಒ ಎ.ಜಿ. ಪಾಟೀಲ ಸಹಿತ ತಾ.ಪಂ ಸದಸ್ಯರು ಇದ್ದರು. ಖಾಸಗಿ ಆಸ್ಪತ್ರೆಯ ವೈದ್ಯರು ಸುಳ್ಳು ಹೇಳುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿಯಲ್ಲಿ ತೊಡಗಿಕೊಂಡಿದ್ದಾರೆ. ರೋಗಿಯ ಚಿಕಿತ್ಸೆ ಅರಿತು ರೋಗ ನಿರೋಧಕ ಔಷ ಧ ನೀಡದೇ ಮನಬಂದಂತೆ ಉಪಚಾರ ನೀಡುವ ಮೂಲಕ ಬಡವರ ತೊಂದರೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉಪವಿಭಾಗ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಕೆ.ಕೆ. ಬಣ್ಣದ ಮಾತನಾಡಿ, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಹತೋಟಿಯಲ್ಲಿ ಇಲ್ಲ. ತಾಲೂಕು ಆರೋಗ್ಯ ಅಧಿಕಾರಿಗಳು ಸಭೆ ಕರೆದು ಎಚ್ಚರಿಕೆ ನೀಡಲಿದ್ದಾರೆ. ಅನುಮಾನ ಬಂದ ಖಾಸಗಿ ವೈದ್ಯರ ಮೇಲೆ ವಂಚನೆ ಪ್ರಕರಣ ದಾಖಲು ಮಾಡಲು ಸಾಧ್ಯವಿದ್ದು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಅಥವಾ ಆರೋಗ್ಯ ಇಲಾಖೆ ಸಮಿತಿ ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಸರಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಸರಕಾರಿ ಆಸ್ಪತ್ರೆಗೆ 5 ರಿಂದ 6 ಎಕರೆ ಜಾಗ ಲಭಿಸಿದಲ್ಲಿ ಬಿಡುಗಡೆಗೊಂಡ ಅನುದಾನ ಬಳಕೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಲು ಸಾಧ್ಯ ಎಂದರು.

ತಾಪಂ ಅಧಿಧೀನದಲ್ಲಿರುವ ನಗರದ ಕುಡಚಿ ರಸ್ತೆಯಲ್ಲಿರುವ 6 ಬಿಎಲ್‌ಡಿಇ ಕಾಲೇಜು ಎದುರಿಗೆ 1 ಹಾಗೂ ಸಾವಳಗಿಯಲ್ಲಿ 3 ಅಂಗಡಿಕಾರರು ಕಳೆದ ವರ್ಷಗಳಿಂದ ಬಾಡಿಗೆ ತುಂಬಿರುವುದಿಲ್ಲ. ಎಸ್‌. ಎಂ. ದಳವಾಯಿ, ಎಸ್‌.ಎಂ. ಪಾಟೀಲ ಎಂಬುವರು ಕಳೆದ 10 ವರ್ಷಗಳಿಂದ ಬಾಡಿಗೆ ಹಣ ಕಟ್ಟಿರುವುದಿಲ್ಲ ಯಾಕೆ, ಅಧಿಕಾರಿಗಳು ಯಾಕೆ ಮೌನ ವಹಿಸಿದ್ದಾರೆ ಸಭೆಯಲ್ಲಿ ಬಹಿರಂಗ ಪಡಿಸಬೇಕೆಂದು ತಾ.ಪಂ ಸದಸ್ಯ ಶ್ರೀಮಂತ ಚೌರಿ ಒತ್ತಾಯಿಸಿದರು.

ತಾ.ಪಂ ಇಒ ಎ.ಜಿ.ಪಾಟೀಲ ಮಾತನಾಡಿ, ಒಂದು ವಾರದಲ್ಲಿ ಬಾಡಿಗೆ ತುಂಬುವಂತೆ ನೋಟಿಸ್‌ ನೀಡಲಾಗುವುದು. ನಂತರ ಬಾಡಿಗೆ ಪರಿಷ್ಕರಣೆ ಮಾಡಿ ಹೊಸದಾಗಿ ಬಾಡಿಗೆ ತುಂಬುವಂತೆ ಸೂಚಿಸಲಾಗುವುದು. ಕರಾರುಗಳಿಗೆ ಒಪ್ಪದಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರುವ ಮೂಲಕ ಮತ್ತೊಮ್ಮೆ ಹರಾಜು ಪ್ರಕ್ರಿಯೆ ನಡೆಸಲಾಗುವು ಎಂದರು.

ಜಿಪಂ ಸದಸ್ಯರಾದ ಶಿವಾನಂದ ಪಾಟೀಲ, ಪುಂಡಲೀಕ ಪಾಲಬಾವಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಪೂರೈಸುವ ಆಹಾರ ಧಾನ್ಯಗಳು ರಾತ್ರಿ ವೇಳೆಯಲ್ಲಿ ಸಾಗಾಣಿಕೆ ಮಾಡುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ಮನೆಯಲ್ಲಿ ವಿತರಿಸಲಾಗುತ್ತಿದೆ. ಸರಕಾರ ಆಹಾರ ಧಾನ್ಯ ರಾತ್ರಿ ವೇಳೆಯಲ್ಲಿ ಯಾಕೆ ಪೂರೈಕೆ ಮಾಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.