ಕೋವಿಡ್ ತಡೆಗೆ ಸರ್ಕಾರಗಳ ಅವಿರತ ಶ್ರಮ
Team Udayavani, Apr 15, 2020, 5:12 PM IST
ಜಮಖಂಡಿ: ನಗರದಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿದರು.
ಜಮಖಂಡಿ: ದೇಶ ಸಂದಿಗ್ಧ ಸ್ಥಿತಿಯಲ್ಲಿದ್ದು, ಮಹಾಮಾರಿ ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ನಿರಂತರ ಪ್ರಯತ್ನ ನಡೆಸುತ್ತಿವೆ. ದೇಶದ ಜನತೆ ತಮ್ಮ ಮನೆಗಳಲ್ಲಿದ್ದು, ರೋಗಾಣು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ ಎಂದು ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು.
ನಗರದಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ ಜಯಂತ್ಸುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಾ| ಬಿ.ಆರ್.ಅಂಬೇಡ್ಕರ ತತ್ವಾದರ್ಶಗಳನ್ನು ಇಂದಿನ ಯುವ ಜನಾಂಗ ಪಾಲಿಸಿಕೊಂಡು ಸಮೃದ್ಧ ಸಮಾಜ ನಿರ್ಮಿಸಲು ಮುಂದಾಗಬೇಕು ಎಂದರು. ಉದ್ಯಮಿ ಜಗದೀಶ ಗುಡಗುಂಟಿ, ವಕೀಲ ಚಂದ್ರಕಾಂತ ಉಪಾಧ್ಯೆ, ಶಶಿ ವಿಶ್ವಬ್ರಾಹ್ಮಣ, ವೀರಣ್ಣ ಕಲೂತಿ, ಕುಶಾಲ ವಾಘಮೋರೆ, ಅಜಯ ಕಡಪಟ್ಟಿ, ಪ್ರಶಾಂತ ಚರಕಿ, ಯಮನೂರ ಮೂಲಂಗಿ, ರಮೇಶ ಆಲಬಾಳ, ಶ್ರೀಶೈಲ ಪರೀಟ, ಮಲ್ಲು ಹೆಸಮನಿ, ಶಂಕರ ಕಾಳೆ, ಅಮರ ಸೋಳುಂಕೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ