Jamakhandi; ಹೆತ್ತವರ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ: ಕಡ್ಡಿ


Team Udayavani, Oct 23, 2023, 11:36 AM IST

Jamakhandi; ಹೆತ್ತವರ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ: ಕಡ್ಡಿ

ಜಮಖಂಡಿ: ಜೀವನದಲ್ಲಿ ಹೆತ್ತವರ ಋಣ ಯಾರಿಂದಲೂ ತೀರಿಸಲು ಸಾಧ್ಯವಿಲ್ಲ, ಆದರೇ ಅವರ ನೆನಪುಗಳು ಅವರು ತೋರಿದ
ಮಾರ್ಗದರ್ಶನದಲ್ಲಿ ನಾವುಗಳು ಕಾಯಕ ಜೀವನ ಸಾಗಿದರೇ ಸ್ವಲ್ಪಮಟ್ಟಿಗೆ ಋಣ ಕಡಿಮೆ ಮಾಡಿಕೊಳ್ಳಲು ಸಾಧ್ಯವಿದೆ ಎಂದು ಸಾಹಿತಿ, ಚಿಂತಕ ಬಸವರಾಜ ಕಡ್ಡಿ ಹೇಳಿದರು.

ನಗರದ ರಮಾನಿವಾಸ ಸಭಾಭವನದಲ್ಲಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಂದೆ-ತಾಯಿ ಪುಣ್ಯಸ್ಮರಣೆಗಾಗಿ ಕಳೆದ 50 ವರ್ಷಗಳಿಂದ ದತ್ತಿನಿಧಿ  ಮೂಲಕ ಸಾಮಾಜಿಕ ಸೇವೆ ಹಮ್ಮಿಕೊಂಡು ಗಿರಡ್ಡಿ ಕುಟುಂಬ ಋಣ ಕಡಿಮೆ ಮಾಡುವ ಕಾಯಕದಲ್ಲಿ ತೊಡಗಿಕೊಂಡಿದೆ. ಅಕ್ಟೋಬರ್‌ 24ರಂದು ತುಂಗಳ ಗ್ರಾಮದಲ್ಲಿ 50ನೇ ಪುಣ್ಯಾರಾಧನೆ ಮತ್ತು ಜಾನಪದ ವಾದ್ಯಮೇಳ ವೈಭವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ತಾಲೂಕಾಧ್ಯಕ್ಷ ಸಂತೋಷ ತಳಕೇರಿ ಮಾತನಾಡಿ, ತಾಲೂಕಿನ ತುಂಗಳ ಗ್ರಾಮದಲ್ಲಿ ಅಕ್ಟೋಬರ್‌ 24ರಂದು 9ಗಂಟೆಗೆ ಗಿರಡ್ಡಿ ಪರಿವಾರ, ನಮನ ಟ್ರಸ್ಟ್‌ ಬೆಂಗಳೂರ, ಕನ್ನಡ ಸಾಹಿತ್ಯ ಪರಿಷತ್‌ ಜಮಖಂಡಿ, ಇಂಚಗೇರಿ ಆಧ್ಯಾತ್ಮ ಸಂಪ್ರದಾಯ ಸಹಯೋಗದಲ್ಲಿ ಜಾನಪದ ವಾದ್ಯಮೇಳ ವೈಭವ ಕಾರ್ಯಕ್ರಮ ನಡೆಯಲಿದೆ. ಕಲಾವಿದ ಶ್ರೀಶೈಲ ಕುಂಚನೂರ ಸಂಗಡಿಗರಿಂದ ಭಜನೆ, ಕಲಾವಿದ ಮಹಾದೇವ ಕಲ್ಯಾಣಿ ಸಂಗಡಿಗರಿಂದ ಕರಡಿವಾದನ, ಕಲಾವಿದ ಸಚಿನ ಮಾದರ ಅವರಿಂದ ಕಣಿವಾದನ ಮತ್ತು ಬಿ.ಎನ್‌.ಅಸ್ಕಿ ಅವರಿಂದ ತತ್ವಪದಗಳು ಮೂಡಿ ಬರಲಿವೆ ಎಂದರು.

ಅಂದು ಬೆಳಗ್ಗೆ 11ಗಂಟೆಗೆ ಉದ್ಘಾಟನಾ ಸಮಾರಂಭದಲ್ಲಿ ಇಂಚಗೇರಿ ಮಠದ ಸಮರ್ಥ ಸದ್ಗುರು ರೇವಣಸಿದ್ಧೇಶ್ವರ ಮಹಾರಾಜರ
ಮತ್ತು ಹುಲ್ಯಾಳದ ಗುರುದೇವಾಶ್ರಮದ ಹರ್ಷಾನಂದ ಶ್ರೀ ಸಾನಿಧ್ಯ ವಹಿಸುವರು. ಶರಣ ಶ್ರೀ ಶಿವಲಿಂಗಪ್ಪ ಮೈಗೂರ ಅಧ್ಯಕ್ಷತೆ
ವಹಿಸುವರು. ನ್ಯಾಯವಾದಿ ಎನ್‌. ಎಸ್‌.ದೇವರವರ, ಡಾ| ಎಸ್‌.ಎಸ್‌. ಸುವರ್ಣಖಂಡಿ, ಡಾ|ಸಂಗಮೇಶ ಮಟೋಳಿ, ವಚನಸಾಹಿತಿ ಬಸವರಾಜ ಕಡ್ಡಿ, ಮುಕುಂದ ಬೆಳಗಲಿ, ಸಂತೋಷ ತಳಕೇರಿ ಬಿ.ಟಿ.ಮಾಳಿ ಆಗಮಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಿವೃತ್ತ ಪ್ರಾಚಾರ್ಯ ಎಸ್‌.ಎಸ್‌.ಸುವರ್ಣಖಂಡಿ, ಪ್ರಾಚಾರ್ಯ ಡಾ| ಟಿ.ಪಿ.ಗಿರಡ್ಡಿ, ವಿನೋದ ಲೋಣಿ ಸಹಿತ ಹಲವರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.