ಚಿಕ್ಕಪಡಸಲಗಿ ಬ್ಯಾರೇಜ್ಗೆ ನೀರು ಬಿಡಲು ಆಗ್ರಹ
Team Udayavani, Apr 11, 2020, 6:11 PM IST
ಜಮಖಂಡಿ: ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್ಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಾಸಕ ಆನಂದ ನ್ಯಾಮಗೌಡ ಹಿಪ್ಪರಗಿ ನೀರಾವರಿ ಇಲಾಖೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಜಮಖಂಡಿ: ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್ಗೆ ನೀರು ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಹಿಪ್ಪರಗಿ ನೀರಾವರಿ ಇಲಾಖೆ ಕಚೇರಿ ಆವರಣದಲ್ಲಿ ಶಾಸಕ ಆನಂದ ನ್ಯಾಮಗೌಡ ಪ್ರತಿಭಟನೆ ನಡೆಸಿದರು.
ಶಾಸಕರು ಮಾತನಾಡಿ, ನೀರಾವರಿ ಇಲಾಖೆ ಬೆಳಗಾವಿ ವಿಭಾಗೀಯ ಆಯುಕ್ತರಿಗೆ ಏ. 4ರಂದು ಮಧ್ಯಾಹ್ನ 2 ಗಂಟೆಗೆ 0.03 ಟಿಎಂಸಿ ನೀರು ಬಿಡುವಂತೆ ನಿರ್ದೇಶನ ನೀಡಿತ್ತು. ಆದರೆ, ಇದುವರೆಗೆ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು. ಹಿಪ್ಪರಗಿಯ ಸಹಾಯಕ ಅಭಿಯಂತರರು ನೀರು ಬಿಡಲು ಹಿಂದೇಟು ಹಾಕುತ್ತಿದ್ದಾರೆ. ಹಿಪ್ಪರಗಿ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ಶಾಸಕರು ಪೋನ್ ಮೂಲಕ ಡಿಸಿಎಂ ಗೋವಿಂದ ಕಾರಜೋಳ ಅವರೊಂದಿಗೆ ಚರ್ಚಿಸಿ ಅಧಿಕಾರಿಗಳ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದರು.
ನಾಲ್ಕು ದಿನದಲ್ಲಿ ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್ಗೆ ನೀರು ಹರಿಯಲಿದೆ ಎಂದು ಡಿಸಿಎಂ ಕಾರಜೋಳ, ಶಾಸಕರಿಗೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ