ಜಾನಪದ ಕಲೆಗಳ ತವರೂರು ಜಮಖಂಡಿ; ಡಾ| ಬಸು ಬೇವಿನಗಿಡದ

ಕಲಾವಿದರು ದೇಹವನ್ನು ದೇಗುಲವನ್ನಾಗಿ ಮಾಡಿ ಕಾಪಾಡಿಕೊಂಡರೆ ಯಶಸ್ಸು ಬೆನ್ನುಹತ್ತಿ ಬರುತ್ತದೆ

Team Udayavani, Jun 1, 2022, 5:53 PM IST

ಜಾನಪದ ಕಲೆಗಳ ತವರೂರು ಜಮಖಂಡಿ; ಡಾ| ಬಸು ಬೇವಿನಗಿಡದ

ಜಮಖಂಡಿ: ಜಾನಪದ ಕಲೆಗಳ ತವರೂರು ಜಮಖಂಡಿ ಗುರುತಿಸಿಕೊಂಡಿದೆ. ಕಲೆಗಳಿಗಾಗಿ ಉಪಾಸಣೆ ಮಾಡುವವರನ್ನು ಬೆಳಕಿಗೆ ತರುವ ಕೆಲಸವನ್ನು ಧಾರವಾಡ ಆಕಾಶವಾಣಿ ಕೇಂದ್ರ ಮಾಡುತ್ತಿದೆ ಎಂದು ಆಕಾಶವಾಣಿ ಕೇಂದ್ರದ ನಿರ್ದೇಶಕ ಡಾ| ಬಸು ಬೇವಿನಗಿಡದ ಹೇಳಿದರು.

ನಗರದ ಬಸವ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌, ಬಸವ ಸಮಿತಿ ಮತ್ತು ಸಾಹಿತ್ಯ ಸೌರಭ ವೇದಿಕೆ ಸಹಯೋಗದಲ್ಲಿ ನಡೆದ ದೆಹಲಿಯ ಆಕಾಶವಾಣಿ ಕೇಂದ್ರದಿಂದ ಎ-ಗ್ರೇಡ್‌ ಮಾನ್ಯತೆ ಪಡೆದ ಚಿಕ್ಕಪಡಸಲಗಿಯ ಮಾದೇವ ಕಲ್ಯಾಣಿ ಕರಡಿಮೇಳ ಕಲಾತಂಡವದ ಅಭಿನಂದನಾ ಮತ್ತು ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ನಾಡಿನ ಅಪೂರ್ವ ಕಲೆಗಳಿಗೆ ಜನಮನ್ನಣೆ ನಿರಂತರವಾಗಿ ದೊರೆಯಬೇಕು. ಜಾನಪದ ಕಲೆಗಳಿಗೆ ಆಧುನಿಕ ಸ್ಪರ್ಶ ನೀಡಿ ಹೊಸತನ ತರುವ ಬಗ್ಗೆ ಕಲಾವಿದರು ಆಲೋಚನೆ ಮಾಡಬೇಕು. ಆಧುನಿಕತೆಯ ಭರಾಟೆಯಲ್ಲೂ ಸಹ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸಿ ಜೋಪಾನವಾಗಿ ಕಾಪಾಡಬೇಕಾಗಿದೆ ಎಂದರು.

ಆಕಾಶವಾಣಿ ಕಾರ್ಯಕ್ರಮ ಅಧಿಕಾರಿ ಶರಣಬಸವ ಚೋಳಿನ ಮಾತನಾಡಿ, ಇಂದಿನ ಒಳ್ಳೆಯ ಯುವ ಕಲಾವಿದರು ದುಶ್ಚಟಕ್ಕೆ ಬಲಿಯಾಗುತ್ತಿರುವುದು ವಿಷಾದನೀಯ. ಕಲಾವಿದರು ದೇಹವನ್ನು ದೇಗುಲವನ್ನಾಗಿ ಮಾಡಿ ಕಾಪಾಡಿಕೊಂಡರೆ ಯಶಸ್ಸು ಬೆನ್ನುಹತ್ತಿ ಬರುತ್ತದೆ ಎಂದರು.

ತಹಶೀಲ್ದಾರ್‌ ಪ್ರಶಾಂತ ಚನಗೊಂಡ ಉದ್ಘಾಟಿಸಿ ಮಾತನಾಡಿ, ಕಲಾವಿದರಿಗೆ ರಾಜ್ಯ ಸರ್ಕಾರ ಮಾಸಿಕ 3 ಸಾವಿರ ಮಾಸಾಶನ ನೀಡುತ್ತಿದ್ದು, ಕಲಾವಿದರು ಪ್ರಯೋಜನ ಪಡೆದುಕೊಳ್ಳಬೇಕು. ನಗರದಲ್ಲಿ ರಾಜ್ಯಮಟ್ಟದ ಕಲಾಪ್ರದರ್ಶನ ಹಮ್ಮಿಕೊಂಡರೆ ತಾಲೂಕಾಡಳಿತ ಸಹಕಾರ ನೀಡಲಿದೆ ಎಂದರು.

ಇದೇ ಸಂದರ್ಭದಲ್ಲಿ ದೆಹಲಿಯ ಆಕಾಶವಾಣಿ ಕೇಂದ್ರದಿಂದ ಎ-ಗ್ರೇಡ್‌ ಮಾನ್ಯತೆ ಪಡೆದ ಕಲಾವಿದರಾದ ಮಾದೇವ ಕಲ್ಯಾಣಿ, ಸದಾಶಿವ ನ್ಯಾಮಗೌಡ, ಸಿದ್ದಪ್ಪ ಮಟೋಳಿ, ಶಂಕರ ನ್ಯಾಮಗೌಡ, ಸದಾಶಿವ ಮಟೋಳಿ, ಶಂಕರ ಭಜಂತ್ರಿ, ರಾಮು ಭಜಂತ್ರಿ, ಮಾರುತಿ ಭಜಂತ್ರಿ ಅವರನ್ನು ಸನ್ಮಾನಿಸಲಾಯಿತು.

ಸಿದ್ಧಕ್ಷೇತ್ರದ ಸಿದ್ಧಮುತ್ಯಾ ಶ್ರೀ ಸಾನ್ನಿಧ್ಯ ಹಾಗೂ ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಅಧ್ಯಕ್ಷತೆ ವಹಿಸಿದ್ದರು. ಡಾ.ಸಂಗಮೇಶ ಮಟೋಳಿ, ಡಾ.ಟಿ.ಪಿ. ಗಿರಡ್ಡಿ, ಬಸವ ಸಮಿತಿ ಅಧ್ಯಕ್ಷ ಕಾಡು ಮಾಳಿ, ಸಾಹಿತಿ ಗುರುನಾಥ ಸುತಾರ, ಕಸಾಪ ಅಧ್ಯಕ್ಷ ಸಂತೋಷ ತಳಕೇರಿ, ಚಿತ್ತರಂಜನ ನಾಂದ್ರೇಕರ, ಸಾರಿಗೆ ಘಟಕ ವ್ಯವಸ್ಥಾಪಕ ಸಂಗಮೇಶ ಮಟೋಳಿ, ರಮೇಶ ದೇಸಾಯಿ ಸಹಿತ ಹಲವರು ಇದ್ದರು. ಬಿ.ಎನ್‌.ಅಸ್ಕಿ ಪ್ರಾರ್ಥಿಸಿದರು. ಸಾಹಿತಿ ಶಂಕರ ಲಮಾಣಿ ಸ್ವಾಗತಿಸಿದರು. ಶಿಕ್ಷಕಿ ಸರಿತಾ ಶಿರಗುಪ್ಪಿ ನಿರೂಪಿಸಿದರು. ಪ್ರೊ| ರಾಜಶೇಖರ ಹೊಸಟ್ಟಿ ವಂದಿಸಿದರು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.