ಜಾತ್ರೆಯಲಿ ನಾಟಕ ಪ್ರದರ್ಶನಕೆ ಅವಕಾಶ ನೀಡಿ


Team Udayavani, Jan 9, 2022, 7:32 PM IST

ಜಾತ್ರೆಯಲಿ ನಾಟಕ ಪ್ರದರ್ಶನಕೆ ಅವಕಾಶ ನೀಡಿ

ಬಾದಾಮಿ: ಬನಶಂಕರಿ ಜಾತ್ರೆಯಲ್ಲಿ ಕೋವಿಡ್‌ ಮುಂಜಾಗ್ರತಾ ಕ್ರಮ ಅನುಸರಿಸಿ ನಾಟಕ ಪ್ರದರ್ಶನ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಗುಳೇದಗುಡ್ಡದ ಶ್ರೀ ಸಂಗಮೇಶ್ವರ ಸಾಂಸ್ಕೃತಿಕ ಮತ್ತು ನಾಟ್ಯ ಸಂಘದ ಮಾಲೀಕೆ ಜ್ಯೋತಿ ಗುಳೇದಗುಡ್ಡ ಆಗ್ರಹಿಸಿದರು.

ಪಟ್ಟಣದ ಕಾನಿಪ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾವಿದರು ದುಡಿಯಲು ಅವಕಾಶ ಕಲ್ಪಿಸಬೇಕು. ಕಲಾವಿದರಿಗೆ ಬನಶಂಕರಿ ಜಾತ್ರೆಯಲ್ಲಿ ಒಂದು ತಿಂಗಳು ಕಲೆ ಪ್ರದರ್ಶನ ಮಾಡಿದರೆ ಮುಂದಿನ ಒಂದು ವರ್ಷದ ಜೀವನ ನಡೆಯುತ್ತದೆ. ಎರಡು ವರ್ಷಗಳಿಂದ ನಾಟಕ ಬಂದ್‌ ಆಗಿರುವುದರಿಂದ ಎಲ್ಲ ಕಲಾವಿದರು ಕಷ್ಟದಲ್ಲಿ ಇದ್ದಾರೆ. ಜೀವನ ನಡೆಸಲು, ಕುಟುಂಬ ನಿರ್ವಹಣೆ ಮಾಡಲು ಕಲಾವಿದರು ಪರದಾಡುವಂತಾಗಿದೆ.

ಕಲಾವಿದರ ಸಮಸ್ಯೆಗೆ ಪರಿಹಾರ ನೀಡಲು ಕೋವಿಡ್‌ ನಿಯಮ ಅನುಸರಿಸಿ ಮಾಸ್ಕ್, ಸ್ಯಾನಿಟೈಸರ್‌ ಮತ್ತು ಸಾಮಾಜಿಕ ಅಂತರದೊಂದಿಗೆ ಶೇ. 50 ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದಿದ್ದರೆ ಎಲ್ಲ ಕಲಾವಿದರು ಸಭೆ ಸೇರಿ ಮುಂದಿನ ದಿನಗಳಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ಬನಶಂಕರಿಯಿಂದ ಬಾದಾಮಿವರೆಗೆ ಮತ್ತು ಜಿಲ್ಲಾಡಳಿತದವರೆಗೆ ಪಾದಯಾತ್ರೆ ಮಾಡಿ ಜಿಲ್ಲಾಡಳಿತದ ಗಮನ ಸೆಳೆಯಲಾಗುವುದು. ಜಿಲ್ಲಾಡಳಿತ ಮತ್ತು ಸರಕಾರ ಕಲಾವಿದರಿಗೆ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಕಲಾವಿದ ರಾಜಮಹ್ಮದ ಮುಲ್ಲಾ ಮಾತನಾಡಿ, ಜಾನಪದ ಕಲೆಗಳಲ್ಲಿ ಒಂದಾದ ನಾಟಕ ಕಲೆ ಅವಸಾನದ ಅಂಚಿನಲ್ಲಿದ್ದು, ಕಲೆ ಕಲಾವಿದರನ್ನು ಉಳಿಸಲು ಸರಕಾರ ಕ್ರಮ ವಹಿಸಬೇಕು. ನಾಟಕ ಬಂದ್‌ ಮಾಡಿದರೆ ಕಲಾವಿದರು ಬದುಕುವುದು ಹೇಗೆ? ಸಾಲ ಮಾಡಿ ನಾಟಕ ನಡೆಸುತ್ತಿದ್ದಾರೆ. ಈ ಬಾರಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದಿದ್ದರೆ ಕಲಾವಿದರು ಮತ್ತಷ್ಟು ಸಮಸ್ಯೆಗಳ ಸುಳಿಯಲ್ಲಿ ಸಿಲುಕುತ್ತಾರೆ ಎಂದರು. ಇನ್ನೋರ್ವ ಕಲಾವಿದ ಮಂಜುನಾಥ ಗುಳೇದಗುಡ್ಡ ಮಾತನಾಡಿ, ಸರಕಾರ ಚುನಾವಣೆ ಬಂದಾಗ ಜನರನ್ನು ಕೂಡಿಸುತ್ತಾರೆ.

ಆದರೆ, ಜಾತ್ರೆ ಹಬ್ಬ ಹರಿದಿನಗಳನ್ನು ಮಾಡಲು ಕೊರೊನಾ ಬರುತ್ತಿದೆಯೇ ಎಂದು ಪ್ರಶ್ನಿಸಿದರು. ಚುನಾವಣೆ ಬಂದಾಗ ನೀತಿ ಸಂಹಿತೆ, ಕೊರೊನಾ ನೆಪವೊಡ್ಡಿ ಬನಶಂಕರಿ ಜಾತ್ರೆ ಬಂದ್‌ ಮಾಡಿದರೆ ಇದನ್ನೇ ನಂಬಿ ಜೀವನ ನಡೆಸುವವರ ಗತಿ ಏನು ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶೇಖಪ್ಪ ಹೊಸಮನಿ, ರಾಜಮಹ್ಮದ ಮುಲ್ಲಾ, ಲಾಳೇಶ ಕರ್ಜಗಿ, ಮಂಜುನಾಥ ಗುಳೇದಗುಡ್ಡ, ಬಸೀರ ತಾಳಿಕೋಟಿ ಹಾಜರಿದ್ದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.