ಕಬಡ್ಡಿ ಗಂಡುಗಲಿಗಳ ದೇಶಿ ಆಟ; ಕಬಡ್ಡಿ, ಖೋಖೋ ಪಂದ್ಯಾವಳಿಗೆ ಚಾಲನೆ

ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಕ್ರೀಡೆಯು ಮಹತ್ವದ ಪಾತ್ರ ವಹಿಸುತ್ತದೆ

Team Udayavani, Dec 3, 2022, 6:23 PM IST

ಕಬಡ್ಡಿ ಗಂಡುಗಲಿಗಳ ದೇಶಿ ಆಟ; ಕಬಡ್ಡಿ, ಖೋಖೋ ಪಂದ್ಯಾವಳಿಗೆ ಚಾಲನೆ

ಕಮತಗಿ: ಕಬಡ್ಡಿ ಆಟವು ಗಂಡುಗಲಿಗಳ ದೇಶಿ ಆಟವಾಗಿದ್ದು, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ ಎಂದು ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಎಲ್‌.ಜಯಂತಿ ಹೇಳಿದರು.

ಪಟ್ಟಣದ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಮೈದಾನದಲ್ಲಿ ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ಶ್ರೀಮತಿ ಯೋಗಿನಿದೇವಿ ಆರ್‌. ಪಾಟೀಲ ಗ್ರಾಮೀಣ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿವಿ ವ್ಯಾಪ್ತಿಯ ಅಂತರ ಕಾಲೇಜುಗಳ ಕಬಡ್ಡಿ ಹಾಗೂ ಖೋಖೋ ಪಂದ್ಯಾವಳಿ ಹಾಗೂ ವಿವಿ ತಂಡ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಬಡ್ಡಿ ಆಟವು ಪುರುಷ ಪ್ರಧಾನವಾಗಿತ್ತು. ತಂದೆ-ತಾಯಿಗಳ ಪ್ರೋತ್ಸಾಹದಿಂದ ಕಬಡ್ಡಿ ಆಟದಲ್ಲಿ ಮಹಿಳೆಯರು ಸಕ್ರಿಯರಾಗಿರುವುದು ನೇಪಥ್ಯಕ್ಕೆ ಸರಿಯುವ ಹಂತದಲ್ಲಿದ್ದ ಕಬಡ್ಡಿ ಆಟವು ಮತ್ತೆ ತನ್ನ ವೈಭವವನ್ನು ಉಳಿಸಿಕೊಂಡಿದೆ. ಸೋಲು-ಗೆಲುವು ಲೆಕ್ಕಕ್ಕೆ ಇಟ್ಟುಕೊಳ್ಳದೇ ಕ್ರೀಡೆಯಲ್ಲಿ ಸಕ್ರಿಯರಾಗುವುದು. ಕ್ರೀಡಾಸ್ಫೂರ್ತಿಯನ್ನು ಮೆರೆಯುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಲಕ್ಷಣ ಎಂದರು.

ಕ್ರೀಡಾಜ್ಯೋತಿಗೆ ಚಾಲನೆ ನೀಡಿದ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ| ಸಕಾ³ಲ್‌ ಹೂವಣ್ಣ ಮಾತನಾಡಿ, ಕ್ರೀಡಾಸ್ಫೂರ್ತಿಯಿಂದ ಭಾಗವಹಿಸುವುದರಿಂದ ಕ್ರೀಡಾಪಟು ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು. ಕ್ರೀಡೆಗೆ ಇತ್ತಿಚಿನ ದಿನಗಳಲ್ಲಿ ಸಾಕಷ್ಟು ಪ್ರೋತ್ಸಾಹ-ನೆರವು ದೊರೆಯುತ್ತಿದೆ. ಇದರಿಂದ ಕ್ರೀಡಾಕ್ಷೇತ್ರವು ಬಲಿಷ್ಠವಾಗಲು ಸಾಧ್ಯವಾಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರೀಡಾಪಟುಗಳಿಗೆ ಸಾಕಷ್ಟು ಪ್ರಮಾಣದಲ್ಲಿ ನೆರವು ನೀಡುತ್ತಿದೆ. ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಕ್ರೀಡೆಯು ಮಹತ್ವದ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಕ್ರೀಡೆಗಳಲ್ಲಿ ಪ್ರತಿಯೊಬ್ಬರು ಸಕ್ರಿಯರಾಗಬೇಕು ಎಂದು ಕರೆ ನೀಡಿದರು.

ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶ್ರೀ ಹುಚ್ಚೇಶ್ವರ ಸ್ವಾಮೀಜಿ ಹಾಗೂ ಕುಂದರಗಿಯ ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ಕುಮಚಗಿ ಅಧ್ಯಕ್ಷತೆ ವಹಿಸಿದ್ದರು. ಸಹ ಕಾರ್ಯದರ್ಶಿ ವಿದ್ಯಾಧರ ಆರ್‌. ಮಳ್ಳಿ, ಆಡಳಿತಾಧಿಕಾರಿ ಅನಿಲಕುಮಾರ ಎಸ್‌. ಕಲ್ಯಾಣಶೆಟ್ಟಿ, ಯುವ ಉದ್ಯಮಿ ಸಾಯಿಕಿರಣ ಸರಡಗಿ, ಪ್ರವೀಣ ಹೆರೂರ, ಪಪಂ ಸದಸ್ಯ ದೇವಿಪ್ರಸಾದ ನಿಂಬಲಗುಂದಿ, ಮಾಜಿ ಸದಸ್ಯ ಸಿದ್ದು ಹೊಸಮನಿ, ಬಿಜೆಪಿ ಅಧ್ಯಕ್ಷ ಗಂಗಾಧರ ಕ್ಯಾದಿಗ್ಗೇರಿ, ಕಾಲೇಜಿನ ಪ್ರಾಚಾರ್ಯ ಡಾ| ಶ್ರೀದೇವಿ ರೆಡ್ಡಿ, ಕ್ರೀಡಾ ಸಂಘಟನಾ ಕಾರ್ಯದರ್ಶಿ ಮಹಾಂತೇಶ ಲಾಯದಗುಂದಿ, ಮುಖ್ಯೋಪಾಧ್ಯಾಯ ಎಸ್‌.ವಿ. ಶೆಟ್ಟರ, ಪ್ರಾಚಾರ್ಯರಾದ ಎಸ್‌.ವಿ.ಬಾಗೇವಾಡಿ, ಪಿ.ಎಂ.ಗುರುವಿನಮಠ, ಉಪನ್ಯಾಸಕರಾದ ಎ.ಎಚ್‌. ಮಲಘಾಣ, ಜಿ.ಎಲ್‌. ವಾಲಿಕಾರ, ಶ್ರೀಮತಿ ಎಸ್‌.ವಿ. ಕಲ್ಮನಿ ಸೇರಿದಂತೆ ಮತ್ತಿತರರು ಇದ್ದರು.

ಹೇಮಲತಾ ಬಾಗಲಕೋಟೆ ಪ್ರಾರ್ಥಿಸಿದರು. ಪೂಜಾ, ಕಮ್ಮಾರ, ಗೀತಾ ಉಮಚಗಿ, ಹುಚ್ಚೇಶ ಲಾಗುಯದಗುಂದಿ, ಬಸವರಾಜ ನಿಡಗುಂದಿ ನಿರೂಪಿಸಿದರು. ಉಪನ್ಯಾಸಕ ಕಲ್ಯಾಣ ಎಸ್‌. ಭಜಂತ್ರಿ ಪರಿಚಿಯಿಸಿದರು. ಉಪನ್ಯಾಸಕ ಬಿ.ಎಚ್‌. ಕಂಬಾಳಿಮಠ ಸ್ವಾಗತಿಸಿದರು. ಕ್ರೀಡಾ ಸಹಸಂಘಟನಾ ಕಾರ್ಯದರ್ಶಿ ಎ.ಎಚ್‌. ಮಲಘಾಣ ವಂದಿಸಿದರು.

ಹೆಣ್ಣು ಮಕ್ಕಳು ಖೋಖೋ, ಕಬಡ್ಡಿಯಂತಹ ಗಂಡುಗಲಿಗಳ ಆಟದಲ್ಲಿ ಸಕ್ರಿಯರಾಗಿರುವುದು ತಂದೆ-ತಾಯಿಗಳ ಪ್ರೋತ್ಸಾಹವೇ ಕಾರಣವಾಗಿದೆ. ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕು. ಕ್ರೀಡೆಯು ಎತ್ತರಕ್ಕೆ ಬೆಳೆಸುತ್ತದೆ.
ಎಲ್‌. ಜಯಂತಿ, ಅಂತಾರಾಷ್ಟ್ರೀಯ
ಮಹಿಳಾ ಕಬಡ್ಡಿ ಪಟು

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.