ಕಲಾದಗಿ-ಕಾತರಕಿ ಬ್ಯಾರೇಜ್‌ಗೆ ತಲುಪದ ನೀರು

•ಮೇಲ್ಭಾಗದ ಬ್ಯಾರೇಜ್‌ಗಳಿಗೆ ಮಾತ್ರ ತಲುಪುತ್ತಿದೆ ನೀರು •ಜಿಲ್ಲಾಡಳಿತ ಮಲತಾಯಿ ಧೋರಣೆ: ಆರೋಪ

Team Udayavani, Jun 2, 2019, 2:27 PM IST

bk-tdy-3..

ಕಲಾದಗಿ: ಕಲಾದಗಿ-ಕಾತರಕಿ ಬ್ಯಾರೇಜ್‌ಗೆ ರೈತರು ಭೇಟಿ ನೀಡಿದ್ದರು.

ಕಲಾದಗಿ: ಕಲಾದಗಿ-ಕಾತರಕಿ ಬ್ಯಾರೇಜ್‌ ಈ ಭಾಗದ ರೈತರಿಗೆ ಇದ್ದೂ ಇಲ್ಲದಂತಾಗಿದೆ. ಹಿಡಕಲ್ ಜಲಾಶಯದಿಂದ ಪ್ರತಿ ಬಾರಿ ನೀರು ಬಿಟ್ಟಾಗ ಈ ಬ್ಯಾರೇಜ್‌ಗೆ ಬರುತ್ತಲೇ ನೀರಿನ ಹರಿವು ಸ್ಥಗಿತಗೊಳ್ಳುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಜಿಲ್ಲಾಡಳಿತ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಚಿಕ್ಕಾಲಗುಂಡಿ ರೈತ ಮಲ್ಲಿಕಾರ್ಜುನ ಪಾಟೀಲ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾರೇಜ್‌ಗೆ ರೈತ ಮುಖಂಡರೊಂದಿಗೆ ಭೇಟಿ ನೀಡಿದ್ದ ಅವರು, ಬೀಳಗಿ, ಮುಧೋಳ, ಬಾಗಲಕೋಟೆ ತಾಲೂಕಿನ ಘಟಪ್ರಭಾ ನದಿ ಪಾತ್ರದ ಹಲವು ಹಳ್ಳಿಗಳ ಜನರಿಗೆ, ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಈ ಬಾರಿಯ ಬೇಸಿಗೆ ಆರಂಭದಿಂದಲೂ ಘಟಪ್ರಭಾ ನದಿಗೆ ನೀರು ಬಿಡಲಾಗುತ್ತಿದೆ, ಆಲಗುಂಡಿ ಬ್ಯಾರೇಜಿನ ಮೇಲುಗಡೆಯ ಎಲ್ಲಾ ಬ್ಯಾರೇಜ್‌ಗಳಿಗೂ ನೀರು ಬಂದು ತುಂಬಿಕೊಳ್ಳುತ್ತಿವೆ. ಕಲಾದಗಿ-ಕಾತರಕಿ ಬ್ಯಾರೇಜ್‌ಗೆ ನೀರು ಬಂದು ತಲುಪುತ್ತಿಲ್ಲ. ಘಟಪ್ರಭಾ ಬಲದಂಡೆ ಕಾಲುವೆಗೂ ನೀರು ಬಿಡಿಸಿ. ಆಗ ಮೇಲಗಡೆಯ ಎಲ್ಲ ಬ್ಯಾರೇಜುಗಳು ತುಂಬಿಕೊಳ್ಳುತ್ತಿವೆ. ಹಿಡಕಲ್ ಜಲಾಶಯದಿಂದ ನದಿಗೆ ನೀರು ಬಿಟ್ಟಾಗಲೂ ಮೇಲುಗಡೆಯ ಬ್ಯಾರೇಜುಗಳು ತುಂಬಿಕೊಳ್ಳುತ್ತಿವೆ. ಕಲಾದಗಿ ಕಾತರಕಿ ಬ್ಯಾರೇಜ್‌ ನೀರು ಬರುವುದೇ ಇಲ್ಲ, ಬಂದಾಗಲೂ ಗೇಟ್ ಹಾಕಿ ನೀರು ಸಂಗ್ರಹಿಸುತ್ತಿಲ್ಲ ಎಂದು ಆರೋಪಿಸಿದರು.

ಜಮಖಂಡಿ ಎಸಿಯವರು ಮೇಲುಗಡೆಯ ಬ್ಯಾರೇಜ್‌ನ ಗೇಟ್ ತೆರವುಗೊಳಿಸಲು ಕ್ರಮ ಕೈಗೊಳ್ಳದೇ, ಕಲಾದಗಿ ಕಾತರಕಿ ಬ್ಯಾರೇಜ್‌ನಲ್ಲಿ ನೀರು ಸಂಗ್ರಹವಾಗುತ್ತಿದ್ದಂತೆಯೇ ಕೆಳಗಡೆ ಎರಡು ಲೇಯರ್‌ನ ಮೇಲಗಡೆಯ ಗೇಟ್ ತೆಗೆಯಲು ಸೂಚಿಸಿ ಆದೇಶಿಸುತ್ತಾರೆ ಎಂದರು.

ಕಳೆದ ಬಾರಿ ಒಂದು ಟಿಎಂಸಿ ನೀರು ಬಿಟ್ಟಾಗ ಕಲಾದಗಿ ಬ್ಯಾರೇಜ್‌ ದಾಟಿ ಮುಂದೆ ಆನದಿನ್ನಿವರೆಗೂ ನೀರು ಹರಿದು ಬ್ರಿಜ್‌ ತುಂಬಿಕೊಂಡಿತ್ತು. ಈ ಬಾರಿ 2 ಟಿ.ಎಂ.ಸಿ ನದಿಗೆ ನೀರು ಹರಿಸಿದರೂ ಬಾಗಲಕೋಟೆ ತಾಲೂಕಿನ ಬ್ಯಾರೇಜುಗಳಿಗೆ ನೀರು ಬರುತ್ತಿಲ್ಲ. ಆನದಿನ್ನಿ ಬ್ಯಾರೇಜ್‌ವರೆಗೂ ನೀರು ತಲುಪಿಸಲು ಕ್ರಮ ಕೈಗೊಳ್ಳಬೇಕಾದ ಧಿಕಾರಿಗಳ ನಿರ್ಲಕ್ಷ್ಯದಿಂದ ಬ್ಯಾರೇಜ್‌ಗೆ ನೀರು ಬರುತ್ತಿಲ್ಲ ಎಂದು ಆರೋಪಿಸಿದರು. ತುರ್ತಾಗಿ ನಮ್ಮ ಬ್ಯಾರೇಜ್‌ವರೆಗೂ ನೀರು ಬರುವಂತೆ ನೀರು ಬಿಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕುಮ್ಮಣ್ಣ ಮೂಲಿಮನಿ, ಲಕ್ಷ್ಮಣ ಶಿರಬೂರ, ಭೀಮಪ್ಪ ಸೊರಗಾವಿ, ರವಿ ಹುದ್ದಾರ, ಭೀಮಶಿ ಪೆಟ್ಲೂರ, ವೆಂಕಪ್ಪ ಅಂಬಿಗೇರ, ಅಶೋಕ ಜಂಬಗಿ, ಈರಣ್ಣ ಹಿರೇಮಠ, ರವಿ ತಮ್ಮಣ್ಣ ಹುದ್ದಾರ ಇದ್ದರು.

ಜಿಲ್ಲಾಧಿಕಾರಿಗಳಿಗೆ ನಾಳೆ ಮನವಿ ಪತ್ರ:

ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ಪ್ರತೀ ಬಾರಿ ನೀರು ಬಿಟ್ಟಾಗ ಕಲಾದಗಿ ಕಾತರಕಿ ಬ್ಯಾರೇಜ್‌ಗೆ ನೀರು ಬರುತ್ತಿಲ್ಲ. ಇದರಿಂದ ಮೂರು ತಾಲೂಕಿನ ಹಲವು ಹಳ್ಳಿಗಳ ರೈತರಿಗೆ ಅನ್ಯಾಯವಾಗುತ್ತಿದೆ. ಈ ಭಾಗದ ರೈತರಿಗೆ ಅನ್ಯಾಯವಾಗದಂತೆ ಶಾಶ್ವತ ಪರಿಹಾರ ಒದಗಿಸಿ ಕೊಡಲು ಮತ್ತು ನೀರು ಹರಿಸಲು ಆಗ್ರಹಿಸಿ ಜೂನ್‌ 3ರಂದು ಮನವಿ ಸಲ್ಲಿಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.