ಇದ್ದೂ ಇಲ್ಲದಂತಾದ ಶುದ್ಧ ಕುಡಿಯುವ ನೀರಿನ ಘಟಕ

ಪದೇ ಪದೇ ದುರಸ್ತಿಗೆ ಬರುತ್ತಿದೆ ಘಟಕ ಶುದ್ಧ ನೀರಿಗಾಗಿ ಗ್ರಾಮಸ್ಥರ ಪರದಾಟ

Team Udayavani, Feb 28, 2020, 2:43 PM IST

28-Febraury-16

ಕಲಾದಗಿ: ಗ್ರಾಮೀಣ ಜನರ ಆರೋಗ್ಯ ಸುಧಾರಣೆಗೆ ಸರಕಾರ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಶುದ್ಧ ನೀರನ್ನು ಒದಗಿಸುತ್ತಿದೆ. ಆದರೆ, ಹಿರೇಶೆಲ್ಲಿಕೇರಿಯಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಇದ್ದೂ ಎಲ್ಲದಂತಾಗಿದೆ.

ಹಿರೇಶೆಲ್ಲಿಕೇರಿ ಗ್ರಾಮದಲ್ಲಿ ಹಿಂದಿನ ಶಾಸಕರಾಗಿದ್ದ ಜೆ.ಟಿ. ಪಾಟೀಲ ಅವಧಿಯಲ್ಲಿ ಘಟಕ ನಿಮಾಣಗೊಳಿಸಿ ಘಟಕ ಉದ್ಘಾಟಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಉದ್ಘಾಟನೆಯಾದಾಗಿನಿಂದ ಘಟಕ ಪದೇ ಪದೇ ದುರಸ್ತಿಗೆ ಬರುತ್ತಿದ್ದು, ಜನರಿಗೆ ಶುದ್ಧ ನೀರು ಮಾಯಾಜಲ ಇದ್ದಂತೆ ಎಂಬ ಅನುಮಾನ ಮೂಡಿದೆ. ಒಮ್ಮೆ ನೀರು ದೊರೆತರೆ, ಮತ್ತೆರಡು ದಿನದಲ್ಲಿ ಘಟಕ ಬಂದ್‌ ಆಗಿರುತ್ತದೆ. ಘಟಕ ಉದ್ಘಾಟನೆಯಾದಾಗಿನಿಂದ ನೀರು ಪಡೆದ ದಿನಗಳಿಗಿಂತ ನೀರು ಪಡೆಯದ ದಿನಗಳೆ ಹೆಚ್ಚು ಎನ್ನುತ್ತಿದ್ದಾರೆ ಗ್ರಾಮಸ್ಥರು.

2 ಸಾವಿರಕ್ಕೂ ಅಧಿ ಕ ಜನ: ಹಿರೇಶೆಲ್ಲಿಕೇರಿಯಲ್ಲಿ 600 ಕುಟುಂಬಗಳು, 2000ಕ್ಕೂ ಅ ಧಿಕ ಜನಸಂಖ್ಯೆ ಹೊಂದಿದೆ. ಕಲಾದಗಿ, ನೀರಬೂದಿಹಾಳ, ಚಿಕ್ಕಶೆಲ್ಲಿಕೇರಿ ಶುದ್ಧ ಕುಡಿಯುವ ನೀರಿನ ಘಟಕದಿಂದಲೇ ನೀರನ್ನು ತಂದು ಕುಡಿಯಬೇಕಾದ ಪರಿಸ್ಥಿತಿ ಇದೆ.

ನೀರಿಗಾಗಿ ಅಲೆದಾಟ: ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಗಾಗಿ ಐದಾರು ಕಿಲೋ ಮೀಟರ್‌ ದೂರವಿರುವ ಕಲಾದಗಿ, ನೀರಬೂದಿಹಾಳ, ಚಿಕ್ಕಶೆಲ್ಲಿಕೇರಿ ಗ್ರಾಮಕ್ಕೆ ಬಂದು ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ತುಂಬಿಕೊಂಡು ಹೋಗಿ ಶುದ್ದ ನೀರು ಸೇವನೆ ಮಾಡುತ್ತಿದ್ದಾರೆ.

2ರೂಗೆ 20 ರೂ. ಖರ್ಚು: ಇಪ್ಪತ್ತು ಲೀಟರ್‌ ಬಾಟಲಿ ನೀರಿಗೆ 2 ರೂಪಾಯಿ ನಾಣ್ಯ ಇಲ್ಲವೇ ಕಾರ್ಡ್‌ ಹಚ್ಚಿ ತುಂಬಿಕೊಂಡು ಹೋಗಿ ಕುಡಿಯುವ ಬದಲು ದೂರ ಊರಿಗೆ ಹೋಗಿ ಬರಲು 20 ರೂಪಾಯಿ ಪೆಟ್ರೋಲ್‌ ಖರ್ಚು ಮಾಡಬೇಕಾಗಿದೆ ಎಂದು ಗ್ರಾಮಸ್ಥ ಬಸವಂತಪ್ಪ ಸೂಳಿಕೇರಿ ದೂರಿದ್ದಾರೆ.

ಸರಕಾರದ ಆದೇಶ ಮೇರೆಗೆ ಆರ್‌ಒ ಪ್ಲಾಂಟ್‌ಗಳನ್ನು ನಿರ್ವಹಣೆಗೆ ಖಾಸಗಿ ಏಜೆನ್ಸಿಯವರಿಗೆ ನೀಡಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಯಾರು ಏಜೆನ್ಸಿ ಪಡೆದಿದ್ದಾರೋ ಅವರಿಗೆ ಶೀಘ್ರ ದುರಸ್ತಿ ಮಾಡಲು ಸೂಚನೆ ನೀಡಲಾಗುವುದು.
ಎನ್‌.ವಾಯ್‌.ಬಸರಿಗಿಡದ,
ಬಾಗಲಕೋಟೆ ಇಒ

ಗ್ರಾಮದಲ್ಲಿ ಮೊದಲೇ ಗಡಸು ನೀರು ಇದೆ. ಜನರು ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸಿಗುತ್ತಿಲ್ಲ. ಪದೇ ಪದೇ ರಿಪೇರಿಗೆ ಬರುತ್ತದೆ. ಇದರಿಂದ ಜನರಿಗೆ ತೊಂದರೆಯಾಗಿದೆ.
ರಾಜು ಮರಪುಲಿ,
ಹಿರೇಶೆಲ್ಲಿಕೇರಿ ಗ್ರಾಮಸ್ಥ

ಚಿಕ್ಕಶೆಲ್ಲಿಕೇರಿ ಗ್ರಾಪಂ ವ್ಯಾಪ್ತಿಯಲ್ಲಿನ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಅದರಲ್ಲಿ ಎರಡು ಗ್ರಾಪಂ ನಿರ್ವಹಣೆ ಮಾಡುತ್ತಿತ್ತು. ಉಳಿದೆರಡು ಐದು ವರ್ಷದವರೆಗೆ ಗುತ್ತಿಗೆ ಪಡೆದವರದಾಗಿತ್ತು. ಈಗ ಸರಕಾರದ ಆದೇಶದ ಹಿನ್ನೆಲೆಯಲ್ಲಿ ಘಟಕದ ನಿರ್ವಹಣೆಯನ್ನು ಖಾಸಗಿ ಏಜೆನ್ಸಿಯವರಿಗೆ ನೀಡಲಾಗಿದೆ. ದುರಸ್ತಿಗೆ ಕ್ರಮ ವಹಿಸಲಾಗುವುದು.
ಸಿ.ಎಚ್‌.ಪವಾರ,
ಚಿಕ್ಕಶೆಲ್ಲಿಕೇರಿ ಗ್ರಾಪಂ ಪಿಡಿಒ

„ಚಂದ್ರಶೇಖರ .ಆರ್‌.ಎಚ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.