ಕನ್ನಡ ಈ ನೆಲದ ಅಸ್ಮಿತೆ: ಸಾಹಿತ್ಯ ಪರಿಷತ್ ಅಧ್ಯಕ್ಷ ಮ. ಕೃ.ಮೇಗಾಡಿ


Team Udayavani, Feb 28, 2024, 4:42 PM IST

ಕನ್ನಡ ಈ ನೆಲದ ಅಸ್ಮಿತೆ:ಸಾಹಿತ್ಯ ಪರಿಷತ್ ಅಧ್ಯಕ್ಷ ಮ. ಕೃ.ಮೇಗಾಡಿ

ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: ಕನ್ನಡ ಈ ನೆಲದ ಆಸ್ಮಿತೆಯಾಗಿದ್ದು, ಭಾವನೆಗಳ ಅಭಿವ್ಯಕ್ತಿ ಸೇರಿದಂತೆ ನವರಸಗಳಿಂದಾವೃತ
ಮೇರು ಕೃತಿಗಳಾಗಿವೆ ಎಂದು ರಬಕವಿ-ಬನಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ. ಕೃ. ಮೇಗಾಡಿ ಹೇಳಿದರು.

ಅವರು ಬನಹಟ್ಟಿಯ ಸೋಮವಾರ ಪೇಟೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಿಮಿತ್ತ ಆಗಮಿಸಿದ ಕನ್ನಡ ಜ್ಯೋತಿ ಹೊತ್ತ ರಥಕ್ಕೆ ಪೂಜೆ ಸಲ್ಲಿಸಿ ಸ್ವಾಗತಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾಷೆ ಆಯಾ ಪ್ರದೇಶಗಳ ಜನರ ಒತ್ತಾಸೆ ಮತ್ತು ಅಭಿಮಾನದಿಂದ ಅಮರತ್ವ ಹೊಂದುತ್ತದೆ ಎಂದರು. ಈ ಸಂದರ್ಭದಲ್ಲಿ ಮಕ್ಕಳು ನಾಡಿನ ವೀರ ಪುರುಷರ, ವನಿತೆಯರ ವೇಷ-ಭೂಷಣಗಳನ್ನು ತೊಟ್ಟು ಗಮನಸೆಳೆದರು. ಸೋಮವಾರ ಪೇಟೆ ಸಮಸ್ತ ದೈವ ಮಂಡಳಿ ಚೇರಮನ್ನರಾದ ಮಲ್ಲಿಕಾರ್ಜುನ ತುಂಗಳ, ಪ್ರಶಾಂತ ಕೊಳಕಿ, ಕಿರಣ ಆಳಗಿ, ಮಹಾಶಾಂತ ಶೆಟ್ಟಿ, ಶಂಕರ ಜುಂಜಪ್ಪನವರ, ಕನ್ನಡ ಯುವಕ ಸಂಘದ ಅಶೋಕ ವಸ್ತ್ರದ, ಪ್ರಭು ಗುಣಕಿ, ಸದಾಶಿವ ಗೋಂದಕರ, ಸುರೇಶ ಬಾಗೇವಾಡಿ, ಮುತ್ತಣ್ಣಾ ಚೌಡಕಿ, ಸದಾಶಿವ ಕುಂಬಾರ, ಗಂಗಾಧರ ಮೋಪಗಾರ, ಬಾಬು ಚನಾಳ, ಚಂದ್ರಶೇಖರ ಮಿರ್ಜಿ, ಮಲ್ಲಪ್ಪ ಹನಗಂಡಿ ಸೇರಿದಂತೆ ಅನೇಕರು ಇದ್ದರು.

ಮಹಾಲಿಂಗಪುರದಲ್ಲಿ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕರ್ನಾಟಕ ಸುವರ್ಣ ಸಂಭ್ರಮ ನಿಮಿತ್ತ ರಾಜ್ಯ ಸರ್ಕಾರದಿಂದ ಹಮ್ಮಿಕೊಂಡಿರುವ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಪುರಸಭೆ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು, ಶಾಲಾ ಮಕ್ಕಳು ಅದ್ಧೂರಿಯಾಗಿ ಸ್ವಾಗತಿಸಿದರು.

ಪಟ್ಟಣದ ಹೆಸ್ಕಾಂ ಗಣಪತಿ ದೇವಸ್ಥಾನ ಮುಂದೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಅವರು ನಾಡದೇವಿ ಭುವನೇಶ್ವರಿ ಮೂರ್ತಿಗೆ ಮಾರ್ಲಾಪಣೆ ಮತ್ತು ಪುಷ್ಪವೃಷ್ಟಿಯ ಮೂಲಕ ಸ್ವಾಗತಿಸಿದರು.

ಮೆರವಣಿಗೆಯಲ್ಲಿ ಸಂಗಾನಟ್ಟಿ ಹಲಗೆಮೇಳ ಮತ್ತು ಮಹಾಲಿಂಗಪುರ ಕರಡಿ ಕಲಾವಿದರು, ಗೊಂಬೆ ಕುಣಿತದ ಕಲಾವಿದರು, ಪುರಸಭೆ ಸದಸ್ಯರು, ವಿವಿಧ ಶಾಲೆಯ ಮಕ್ಕಳು, ಶಿಕ್ಷಕರು, ಸಾಹಿತಿಗಳು, ಸಾರ್ವಜನಿಕರು, ಪತ್ರಕರ್ತರು ಭಾಗವಹಿಸಿದ್ದರು. ಪಟ್ಟಣದ ಚನ್ನಮ್ಮ ವೃತ್ತ, ಗಾಂಧಿ  ವೃತ್ತ, ಅಂಬೇಡ್ಕರ್‌ ವೃತ್ತ, ಪುರಸಭೆ ಮಾರ್ಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಮೆರವಣಿಗೆ ನಡೆಸಲಾಯಿತು.

ಸಿಆರ್‌ಪಿ ಎಸ್‌. ಎನ್‌.ಬ್ಯಾಳಿ, ಪುರಸಭೆ ಮಾಜಿ ಅಧ್ಯಕ್ಷ ಜಿ.ಎಸ್‌.ಗೊಂಬಿ, ಸಪನಾ ಅನಿಗೋಳ, ವೀರೇಶ ಆಸಂಗಿ, ಅರವಿಂದ ಹೂಗಾರ, ಶಿವಾನಂದ ಮೆಳವಂಕಿ, ಚನಮಲ್ಲ ಕರಡಿ, ಸುವರ್ಣಾ ಆಸಂಗಿ, ರಾಜೇಶ ಭಾವಿಕಟ್ಟಿ, ಶ್ರೀನಿವಾಸ ಕಾಂಬಳೇಕರ, ಜಗದೀಶ ಪಾಟೀಲ, ವೈ.ವೈ.ಗಜ್ಜನ್ನವರ, ಲೋಕೇಶ ಹುಕುಮನವರ, ಪುರಸಭೆ ಅಧಿಕಾರಿಗಳಾದ ಎಸ್‌.ಎನ್‌.ಪಾಟೀಲ,
ವ್ಹಿ.ಜಿ.ಕುಲರ್ಣಿ, ಸಿದ್ದು ಅಳ್ಳಿಮಟ್ಟಿ, ಮಹಾಲಿಂಗ ಮೂಗಳಖೋಡ, ರಾಜು ಹೂಗಾರ, ಸಿ.ಎಸ್‌.ಮಠಪತಿ, ಬಿ.ವೈ. ಮರದಿ, ಎಂ.ಕೆ.ದಳವಾಯಿ, ರವಿ ಹಲಸಪ್ಪಗೋಳ, ಚನ್ನಮ್ಮ ಪಟ್ಟಣಶೆಟ್ಟಿ, ಪ್ರೀತಿ ಹುಲಕುಂದ, ರಾಜೇಶ್ವರಿ ಸೋರಗಾಂವಿ, ರಾಮು ಮಾಂಗ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.