ಕಾರಜೋಳ ಎದುರು ಸಾಲು ಸಾಲು ಸವಾಲು

•ನೆರೆ-ಬರದ ಮಧ್ಯೆ ಯುಕೆಪಿ ಸಮಸ್ಯೆ•ಹಾರಿಕೆ ಉತ್ತರ ಕೊಡದೇ ನಿಭಾಯಿಸಬೇಕಿದೆ ಜವಾಬ್ದಾರಿ

Team Udayavani, Sep 17, 2019, 11:26 AM IST

bk-tdy-1

ಬಾಗಲಕೋಟೆ: ಜಿಲ್ಲೆಯ ಮುಧೋಳ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ, ಬಿಜೆಪಿಯ ಹಿರಿಯ ದಲಿತ ನಾಯಕ ಗೋವಿಂದ ಕಾರಜೋಳರಿಗೆ ರಾಜ್ಯದ ಉಪ ಮುಖ್ಯಮಂತ್ರಿ ಸ್ಥಾನ ದೊರೆತಿದ್ದು, ಇದೀಗ ಜಿಲ್ಲೆಯ ಉಸ್ತುವಾರಿ ಸಚಿವರ ಹೊಣೆಯನ್ನೂ ವಹಿಸಲಾಗಿದೆ. ಹೀಗಾಗಿ ಕಾರಜೋಳರ ಎದುರು ಸಾಲು ಸಾಲು ಸವಾಲುಗಳಿದ್ದು, ಹೀಗಾಗಿ ಅವರು ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಲಿ ಎಂಬುದು ಅವರ ಅಭಿಮಾನಿಗಳ ಒತ್ತಾಸೆ.

ಹಿಂದೆ ಇದೇ ಕಾರಜೋಳರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲೆಯಲ್ಲಿ ಭೀಕರ ಪ್ರವಾಹ ಎದುರಾಗಿತ್ತು. ಇದೀಗ ಅವರೇ ಉಸ್ತುವಾರಿಯಾಗಿದ್ದು, ಪುನಃ ದೊಡ್ಡ ಮಟ್ಟದ ಪ್ರವಾಹ ಬಂದಿದೆ. ಈ ಬಾರಿ ಬರೋಬ್ಬರಿ 195 ಹಳ್ಳಿಗಳು, ಅಕ್ಷರಶಃ ಮುಳುಗಿದ್ದು, ಜನರು ಪುನರ್‌ ಬದುಕು ಕಟ್ಟಿಕೊಳ್ಳಲು ಹೈರಾಣಾಗುತ್ತಿದ್ದಾರೆ. ಇದೆಲ್ಲದರ ಮಧ್ಯೆ ಹತ್ತು ಹಲವು ಸಮಸ್ಯೆಗಳಿಗೆ ಜಿಲ್ಲೆಯಲ್ಲಿವೆ. ಕನಿಷ್ಠ ಮೂಲ ಸೌಲಭ್ಯಗಳಿಲ್ಲದ ಆಸರೆ ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಬೇಕಿದೆ. ನೆರೆ-ಬರದಿಂದ ನಲುಗಿದ ಜಿಲ್ಲೆಯ ಜನರ ಬದುಕು, ಮೇಲಕ್ಕೆತ್ತುವ ದೊಡ್ಡ ಹೊಣೆಗಾರಿಕೆ ಗೋವಿಂದ ಕಾರಜೋಳ ಅವರ ಮೇಲಿದೆ.

ಹೇಳಿದ್ದೇ ಮಾಡಿದರೆ ಸಾಕು: ವಿರೋಧ ಪಕ್ಷದಲ್ಲಿದ್ದಾಗ ಹೋರಾಟ ಮಾಡಿ, ಒತ್ತಾಯಿಸುವುದು ಸರಳ. ಅಧಿಕಾರ ಸಿಕ್ಕಾಗ ಆ ಹೋರಾಟ-ಒತ್ತಾಯ ಮರೆಯದೇ, ತಾವೇ ಸರ್ಕಾರಕ್ಕೆ ಕೊಟ್ಟ ಸಲಹೆಯಂತೆ ನಡೆದುಕೊಳ್ಳಬೇಕು ಎಂಬುದು ಹಲವರ ಅಭಿಪ್ರಾಯ. ಕಾಂಗ್ರೆಸ್‌ ಮತ್ತು ಮೈತ್ರಿ ಸರ್ಕಾರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಭೂಮಿ ಕಳೆದುಕೊಳ್ಳುವ ರೈತರಿಗೆ ಪ್ರತಿ ಎಕರೆ ನೀರಾವರಿಗೆ 40ಲಕ್ಷ, ಖುಷ್ಕಿ ಭೂಮಿಗೆ 25ಲಕ್ಷ ಪರಿಹಾರ ಕೊಡಬೇಕೆಂದು ಇದೇ ಕಾರಜೋಳರು ಡಿಸಿ ಕಚೇರಿ ಎದುರು ಹೋರಾಟ ಮಾಡಿದ್ದರು. ಆಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಖಂಡಿತಾ ನಾವು ರೈತರಿಗೆ ಈ ಪರಿಹಾರ ಕೊಡುತ್ತೇವೆಂದು ಹೇಳಿದ್ದರು.

ನೀವೇ ಹೇಳಿದ್ದು ನಡೆಸಿಕೊಡಿ: ಪ್ರಮುಖವಾಗಿ ಮಹದಾಯಿ ನದಿ ಜೋಡಣೆ ಯೋಜನೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಧ್ವನಿಯಲ್ಲಿ ಕೂಗಿದ್ದರು. ಈಗ ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ ವಿಳಂಬ ಮಾಡದೇ ಮಹದಾಯಿ ನದಿ ಜೋಡಣೆ ಕೈಗೊಂಡರೆ, ಬಾದಾಮಿ ತಾಲೂಕಿನ ಕುಡಿಯುವ ನೀರಿನ ಬವಣೆ ನೀಗುತ್ತದೆ ಎಂಬುದು ಹಲವರ ಅಭಿಪ್ರಾಯ.

98 ಗ್ರಾಮಸ್ಥರ ಕೈ ಬಿಡದಿರಿ: ಕಳೆದ ತಿಂಗಳು ಜಿಲ್ಲೆಗೆ ಅಪ್ಪಳಿಸಿದ ಪ್ರವಾಹದಿಂದ 195 ಗ್ರಾಮಗಳ ಜನರು, ತೀವ್ರ ಸಂಕಷ್ಟದಲ್ಲಿದ್ದಾರೆ. ಇದರಲ್ಲಿ 40 ಗ್ರಾಮಗಳು ಆಸರೆ ಯೋಜನೆಯಡಿ, 46 ಗ್ರಾಮಗಳು ಯುಕೆಪಿಯಡಿ ಹಾಗೂ 12 ಗ್ರಾಮಗಳು ನಾರಾಯಣಪುರ ಹಿನ್ನೀರಿನಡಿ ಪರಿಹಾರ ಪಡೆದ ಗ್ರಾಮಗಳಾಗಿವೆ. ಹೀಗಾಗಿ ನೆರೆ ಪೀಡಿತ 195 ಗ್ರಾಮಗಳಲ್ಲಿ ಈಗ ಮನೆ ಹಾನಿ ಅಥವಾ ಬೆಳೆ ಹಾನಿಗೆ ಪರಿಹಾರ ನೀಡಲು 98 ಗ್ರಾಮ ಕೈಬಿಡಲಾಗಿದೆ. ಒಂದು ವೇಳೆ ಕೈಬಿಟ್ಟರೆ, ಆ ಗ್ರಾಮಗಳ ಜನರ ಬದುಕು ಶೋಚನೀಯವಾಗಲಿದೆ. ಮಾನವೀಯ ನೆಲೆಯಲ್ಲಿ ಪ್ರವಾಹದಿಂದ ಹಾನಿಯಾದ ಎಲ್ಲಾ ಗ್ರಾಮಗಳ ಜನರಿಗೆ ಪರಿಹಾರ ನೀಡಿ, ಇನ್ನುಮುಂದೆ ಮುಳುಗಡೆ ಗ್ರಾಮಗಳಲ್ಲಿ ಜನರು ವಾಸಿಸಿದರೆ, ಮುಂದೆ ಯಾವುದೇ ಪ್ರವಾಹ ಅಥವಾ ಸರ್ಕಾರಿ ಸೌಲಭ್ಯಗಳನ್ನು ಅಂತಹ ಗ್ರಾಮಸ್ಥರಿಗೆ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಬೇಕಿದೆ. ಆಗ ಜನರು ಹೊಸ ಗ್ರಾಮಗಳತ್ತ ಮುಖ ಮಾಡುತ್ತಾರೆ. ಇಲ್ಲದಿದ್ದರೆ ನೆರೆ ಸಂತ್ರಸ್ತರು ನದಿ ಪ್ರವಾಹಕ್ಕೆ ಒಮ್ಮೆ ಮುಳುಗಿದರೆ, ಸರ್ಕಾರವೂ ಕೈ ಹಿಡಿಯದಿದ್ದರೆ ಅವರ ಬದುಕು ಮತ್ತೆ ಮುಳುಗಲಿದೆ ಎಂಬುದು ನೆರೆ ಸಂತ್ರಸ್ತರ ಅಳಲು.

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.