ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸದಸ್ಯರು


Team Udayavani, Jun 17, 2020, 4:42 PM IST

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸದಸ್ಯರು

ಗುಳೇದಗುಡ್ಡ: ಸಭೆ ನಡೆಸುವ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ. ಯಾರಿಗೆ ನೋಟಿಸ್‌ ಕೊಟ್ಟಿದ್ದೀರಿ. ಪೂರ್ವ ತಯಾರಿ ಇಲ್ಲದೇ ಸಭೆ ಆಯೋಜಿಸಿದ್ದೀರಿ ಎಂದು ತಾಪಂ ಅಧಿಕಾರಿಗಳನ್ನು ಜಿಪಂ-ತಾಪಂ ಸದಸ್ಯರು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ನಡೆಯಿತು.

ಗುಳೇದಗುಡ್ಡ ಪಟ್ಟಣ ತಾಲೂಕಾಗಿ ರಚನೆಯಾದ ನಂತರ ಜಿಪಂ ಉಪಕಾರ್ಯದರ್ಶಿ ಎ.ಜಿ. ತೋಟದ ಅಧ್ಯಕ್ಷತೆಯಲ್ಲಿ ಮೊದಲ ಕೆಡಿಪಿ ಸಭೆಯಲ್ಲಿ ಸದಸ್ಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸದಸ್ಯರ ಕೊರತೆಯಿಂದ ಬೆಳಗ್ಗೆ 10:30ಕ್ಕೆ ಆರಂಭವಾಗಬೇಕಿದ್ದ ಸಭೆ ಮಧ್ಯಾಹ್ನ 1 ಗಂಟೆಗೆ ಆರಂಭವಾಯಿತು. ಈ ಹಿಂದಿನ ಸಭೆಯ ವಿಷಯಗಳ ಬಗ್ಗೆ ತಿಳಿಸಿ ಎಂದು ಜಿಪಂ ಸದಸ್ಯ ನಕ್ಕರಗುಂದಿ ಅವರು ಕೇಳಿದಾಗ ಆ ವಿಷಯಗಳ ಠರಾವು ಈ ಸಭೆಗೆ ತಂದಿಲ್ಲ ಎಂದು ಅಧಿಕಾರಿಗಳು ಉತ್ತರಿಸಿದರು.

ಇದಕ್ಕೆ ಹಿಂದಿನ ಸಭೆಯಲ್ಲಿನ ವಿಷಯಗಳು ಏನು ಆಗಿದೆ? ಎಂಬುದನ್ನು ತಿಳಿದುಕೊಳ್ಳದೇ ಎಲ್ಲವನ್ನು ಹಾಗೇ ಬಿಡೋಣವೇ. ಹಾಗಿದ್ದರೇ ಸಭೆ ಏಕೆ ನಡೆಸಬೇಕು ಎಂದು ಪ್ರಶ್ನಿಸಿದರು. ಕೃಷಿ ಇಲಾಖೆ ಅಧಿಕಾರಿ ಮಾತನಾಡಿ, ಗೊಬ್ಬರ-ಬೀಜದ ಸಮಸ್ಯೆಯಿಲ್ಲ. 2 ವಿತರಣಾ ಕೇಂದ್ರ ತೆರೆದಿದ್ದೇವೆ ಎಂದು ಮಾಹಿತಿ ನೀಡಿದಾಗ, ಎಸ್‌.ಸಿ.,ಎಸ್‌.ಟಿ. ಹಾಗೂ ರೈತರಿಗೆ ನೀಡಬೇಕಾದ ಅಗತ್ಯ ಸೌಲಭ್ಯ ಒದಗಿಸುತ್ತಿಲ್ಲ. ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂದು ಜಿಪಂ-ತಾಪಂ ಸದಸ್ಯರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಅಂಗನವಾಡಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಕ್ಕಳಿಗೆ ನೀಡುವ ದಿನಸಿ ಸೋರಿಕೆಯಾಗುತ್ತಿರುವ ಬಗ್ಗೆ ದೂರುಗಳಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸಬೇಕೆಂದು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಅನ್ನಪೂರ್ಣ ಕುಬಕಡ್ಡಿ ಅವರಿಗೆ ಸೂಚಿಸಿದರು.

ಕ್ವಾರಂಟೈನ್‌ನಲ್ಲಿರುವವರಿಗೆ ಸರಿಯಾದ ಊಟದ ವ್ಯವಸ್ಥೆ ಮಾಡಬೇಕು. ಹುಚ್ಚು ನಾಯಿ, ನರಿ ಮನುಷ್ಯರಿಗೆ ಕಚ್ಚಿದರೆ ಅದಕ್ಕೆ ಅಗತ್ಯ ಔಷಧ ಇಲ್ಲ. ಜೀವಕ್ಕೆ ತೊಂದರೆಯಾದರೆ ಯಾರು ಜವಾಬ್ದಾರರು ಎಂದು ಟಿಎಚ್‌ಒ ಎಂ.ಬಿ. ಪಾಟೀಲ ಅವರನ್ನು ಪ್ರಶ್ನಿಸಿದ ಸದಸ್ಯರು, ಹಳ್ಳಿಗಳಲ್ಲಿ ಜನರಿಗೆ ಪ್ರಾಣಿಗಳು ಕಚ್ಚಿದರೆ ಅದಕ್ಕೆ ಅಧಿಕಾರಿಗಳೇ ಖುದ್ದಾಗಿ ಭೇಟಿ ನೀಡಬೇಕೆಂದು ತಾಕೀತು ಮಾಡಿದರು.

ಅರಣ್ಯ, ಸಾರಿಗೆ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಪಶು ಸಂಗೋಪಣಾ ಇಲಾಖೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಮಾಹಿತಿ ಪಡೆದರು. ಜಿಪಂ ಉಪಕಾರ್ಯದರ್ಶಿ ಹಾಗೂ ಗುಳೇದಗುಡ್ಡ ತಾಪಂ ಆಡಳಿತಾಧಿಕಾರಿ ತೋಟದ ಅಧ್ಯಕ್ಷತೆ ವಹಿಸಿ, ನೂತನ ತಾಪಂ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಜಾಗ ಹುಡಕಿ ವರದಿಯನ್ನು ಜಿಪಂಗೆ ಸಲ್ಲಿಸುವಂತೆ ತಾಪಂ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸದಸ್ಯೆ ಸರಸ್ವತಿ ಮೇಟಿ, ಆಸಂಗೆಪ್ಪ ನಕ್ಕರಗುಂದಿ, ತಾಪಂ ಸದಸ್ಯರಾದ ಕನಕಪ್ಪ ಬಂದಕೇರಿ, ಕೈಲಾಸ ಕುಂಬಾರ, ದೇವಿಕಾ ಪಾದನಕಟ್ಟಿ, ರೇಣುಕಾ ಗಾಜಿ, ತಾಪಂ ಇಒ ಡಾ.ಪುನಿತ್‌ ಆರ್‌., ತಹಶೀಲ್ದಾರ್‌ ಜಿ.ಎಂ. ಕುಲಕರ್ಣಿ, ಲೋಕೋಪಯೋಗಿ ಇಲಾಖೆಯ ಶಿವಾನಂದ ಜಾಡರ, ಸಹಕಾರಿ ಇಲಾಖೆಯ ರಮೇಶ ಬೂದಿ, ಕೆ.ಡಿ. ಕರಮಳ್ಳಿ, ಸಂಜಯ ಮಬ್ರುಮಕರ, ಆರ್‌.ಎಂ. ಅರಳಿಮಟ್ಟಿ, ಆರ್‌. ಎಸ್‌. ಮುದಿಗೌಡರ ಇದ್ದರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.