ಬಲಕ್‌ ಕಪಾಟ್‌ ಐತಿ; ಎಡಕ್ಕ  ಅಡಗಿ ಮನಿ ಐತಿ!


Team Udayavani, Nov 26, 2018, 5:13 PM IST

26-november-22.gif

ಚಿಕ್ಕಗಲಗಲಿ (ವಿಜಯಪುರ): ನಿಮ್ಮ ಮನಿ ಕೆಳ್ಯಾಕ್‌ (ಪೂರ್ವ) ಮುಖ ಮಾಡಿ ಐತಿ. ಬಲಕ್ಕೆ ಬೆಡ್‌ರೂಂ ಐತಿ. ಎಡಕ್ಕ ಅಡಗಿ ಮನಿ ಐತಿ. ಬೆಡ್‌ರೂಂ ಒಳಗ್‌ ಮತ್ತ ಬಲಕ್ಕ ಕಪಾಟ ಐತಿ. ಅದರೊಳಗ್‌ ಮ್ಯಾಲಿನ ಖಾನ್ಯಾದಾಗ (ಮೊದಲ ಖಾನೆ)ಸೀರಿ-ಫೈಲ್‌ ಅದಾವು. ನಡುವಿನ ಖಾನ್ಯಾದಾಗ್‌ ಹೊಸ ಹೊಸ ಬಟ್ಟೆ ಅದಾವು. 

ಅದರೊಳಗ 2 ಸಾವಿರ ನೋಟಿನ ಎರಡು ಬಂಡಲ್‌ ಅದಾವು… ಇದು ಯಾರೋ ಭವಿಷ್ಯ ಹೇಳಿದ ಮಾತುಗಳಲ್ಲ. ಯಾರದೋ ಮನೆ ನೋಡಿ ವಿವರ ಹೇಳುತ್ತಿರುವುದೂ ಅಲ್ಲ. ಕೊಲ್ಹಾಪುರ-ಕನೇರಿ ಸಿದ್ಧಗಿರಿ ಮಠದ ಗುರುಕುಲದ ಕನ್ಯಾಶ್ರೀಗಳು (10 ವರ್ಷ ಮೇಲ್ಪಟ್ಟ ಕಿರಿಯ ಶ್ರೀಗಳು) ತ್ರಿನೇತ್ರ ವಿದ್ಯೆಯ ಮೂಲಕ ನಾವು-ನೀವು ನೋಡಿರದ ಮನೆಯ ಸಂಪೂರ್ಣ ಚಿತ್ರಣವನ್ನು ಹೇಳಿ ನೆರೆದಿದ್ದ ಸಾವಿರಾರು ಭಕ್ತರನ್ನು ಆಶ್ಚರ್ಯ ಚಕಿತರನ್ನಾಗಿ ಮಾಡಿದರು. ಜಿಲ್ಲೆಯ ಕೃಷ್ಣಾ ತೀರದ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿಯ ಶ್ರದ್ಧಾನಂದ ಮಠದಲ್ಲಿ ಸಹೃದಯಿ ಮಠಾಧೀಶರ ಒಕ್ಕೂಟದಿಂದ ರವಿವಾರ ಹಮ್ಮಿಕೊಂಡಿದ್ದ ಭಕ್ತ ಸಮಾವೇಶದಲ್ಲಿ ಕೊಲ್ಲಾಪುರ-ಕನೇರಿ ಸಿದ್ಧಗಿರಿ ಗುರುಕುಲದ ಕನ್ಯಾಶ್ರೀಗಳು ತ್ರಿನೇತ್ರ ವಿದ್ಯೆ ಮೂಲಕ ಅಪರಿಚಿತ ವ್ಯಕ್ತಿಗಳ ಮನೆ, ಮನಸ್ಸಿನ ಒಳಲಾಟ, ಎಲ್ಲಿಂದ, ಹೇಗೆ ಬಂದರು ಎಂಬುದರ ವಿವರ ನೀಡಲಾಯಿತು.

ನೋಡುಗರಿಗೆ ಅವರು ಭವಿಷ್ಯ ಹೇಳುವಂತೆ ಇತ್ತಾದರೂ, ಇದೊಂದು ತ್ರಿನೇತ್ರ ವಿದ್ಯೆ. ಜ್ಞಾನದಿಂದ ಬರುವ ಈ ವಿದ್ಯೆಯನ್ನು ಯಾರು ಬೇಕಾದರೂ ಕಲಿಯಬಹುದು. ಕಲಿಯಲು ಶ್ರದ್ಧೆ, ಜ್ಞಾನ ಬೇಕು ಎಂದು ಕೊಲ್ಲಾಪುರ-ಕನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ತಿಳಿಸಿದರು.

ಚಿಕದಾನಿ ಮನೆಯ ಚಿತ್ರಣ: 10ರಿಂದ 15 ವರ್ಷಗೊಳಗಿನ ಕಿರಿಯ ಶ್ರೀಗಳು, ಭಕ್ತ ಸಮಾವೇಶದಲ್ಲಿ ವಿವಿಧ ವಿದ್ಯೆಗಳ ಪ್ರದರ್ಶನ ಮಾಡಿದರು. ಈ ವೇಳೆ ತ್ರಿನೇತ್ರ ವಿದ್ಯೆಯೂ ಪ್ರದರ್ಶನ ಮಾಡಿ, ವಿಜಯಪುರ ನಗರದಲ್ಲಿ ಕಾರ್‌ ಶೋರೂಂ ಮಾಡಿಕೊಂಡಿರುವ ಚಿಕ್ಕಗಲಗಲಿ ಗ್ರಾಮದ ಚಂದ್ರಕಾಂತ ಚಿಕದಾನಿ ಅವರ ಸಂಪೂರ್ಣ ವಿವರ ಬಿಚ್ಚಿಟ್ಟರು.

ಕಿರಿಯ ಶ್ರೀಗಳ (5ರಿಂದ 6 ಜನ) ತ್ರಿನೇತ್ರ ವಿದ್ಯೆ ಪರೀಕ್ಷೆಗೆ ಯಾರಾದರೂ, ವೇದಿಕೆಯತ್ತ ಬನ್ನಿ ಎಂದು ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಆಹ್ವಾನಿಸಿದರು. ಆಗ ಚಿಕ್ಕಗಲಗಲಿಯ ಚಂದ್ರಕಾಂತ ಚಿಕದಾನಿ ಎದ್ದು ವೇದಿಕೆಯತ್ತ ಬಂದರು. ಜ್ಞಾನದಲ್ಲಿ ತಲ್ಲೀನರಾದ 5ರಿಂದ 6 ಜನ ಕನ್ಯಾ ಶ್ರೀಗಳು ಕೆಲ ಸಮಯ ಬಳಿಕ, ಚಿಕದಾನಿ ಅವರ ಮನೆ ಯಾವ ದಿಕ್ಕಿಗೆ ಮುಖ ಮಾಡಿದೆ. ಅಡುಗೆ ಕೋಣೆ ಯಾವ ದಿಕ್ಕಿಗಿದೆ, ಯಾವ ದಿಕ್ಕಿನಲ್ಲಿ ಪಾತ್ರೆ ಇಟ್ಟಿದ್ದಾರೆ, ಗೋಡೆಯ ಮೇಲೆ ಯಾವ ಬಣ್ಣದ ಗಡಿಯಾರ ಹಾಕಿದ್ದಾರೆ, ಬೆಡ್‌ರೂಂ ಯಾವ ದಿಕ್ಕಿಗಿದೆ. ಅದರಲ್ಲಿ ಎಷ್ಟು ಕಪಾಟುಗಳಿವೆ. ಯಾವ ಕಪಾಟಿನ ಯಾವ ಖಾನೆಯಲ್ಲಿ ಏನೇನು ಇಟ್ಟಿದ್ದಾರೆ ಎಂದೆಲ್ಲ ಹೇಳಿದರು. ಕನ್ಯಾಶ್ರೀಗಳು ಹೇಳುತ್ತಿರುವ ಸರಿಯೋ, ತಪ್ಪೋ ಎಂದು ಚಂದ್ರಕಾಂತ ಚಿಕದಾನಿ ಅವರಿಗೆ ಕೇಳಲಾಗುತ್ತಿತ್ತು. ಗೋಡೆ ಮೇಲೆ ಹಾಕಿದ ಕುಟುಂಬದವರ ಫೋಟೋ ವಿವರವೊಂದನ್ನು ಬಿಟ್ಟು, ಉಳಿದೆಲ್ಲ ವಿವರೂ ಸತ್ಯ ಎಂದು ಚಂದ್ರಕಾಂತ ಸ್ವತಃ ಒಪ್ಪಿಕೊಂಡರು.

ಭಕ್ತರ ಬರಹ; ಕಣ್ಣು ಕಟ್ಟಿಕೊಂಡು ವಿವರ: ಇನ್ನು ಭಕ್ತರು, ಚಿಕ್ಕದಾದ ಕಪ್ಪು ಹಲಗೆಯ ಮೇಲೆ ಇಂಗ್ಲಿಷ್‌ನ ಕೆಲ ಶಬ್ದಗಳನ್ನು ಬರೆದು, ಕನ್ಯಾಶ್ರೀಗಳಾದ ಮಕ್ಕಳ ಕೈಗೆ ನೀಡಿದರು. ಆಗ ಮಕ್ಕಳು, ಒಂದು ನಿಮಿಷ ಜ್ಞಾನಾರ್ಜನೆಯಲ್ಲಿದ್ದು, ಕಪ್ಪು ಹಲಗೆಯ ಮೇಲೆ ಯಾವ ಯಾವ ಅಕ್ಷರ ಬರೆಯಲಾಗಿದೆ ಎಂದು ಹೇಳಿದರು. ಭಕ್ತರೊಬ್ಬರು, ಕಪ್ಪು ಹಲಗೆಯ ಮೇಲೆ ಶ್ರೀ ಎಂಬ ಅಕ್ಷರ ಬರೆದಿದ್ದರು.

ಶ್ಲೋಕಗಳ ಅಂತಾಕ್ಷರಿ: ಕೊಲ್ಹಾಪುರ-ಕನೇರಿ ಮಠದ ಗುರುಕುಲದಲ್ಲಿ ಅಧ್ಯಯನ ನಡೆಸುತ್ತಿರುವ ಮಕ್ಕಳು ಸ್ವತಃ ವಿವಿಧ ವಾದ್ಯ ನುಡಿಸುತ್ತ, ಸಂಸ್ಕೃತ ಶ್ಲೋಕಗಳ ಅಂತಾಕ್ಷರಿ ನಡೆಸಿದರು. ಬಳಿಕ ವಿವಿಧ ಸಂಗೀತ ವಾದ್ಯಗಳ ಜುಗಲ್‌ ಬಂದಿ ನಡೆಸಿ ಭಕ್ತರ ಗಮನ ಸೆಳೆದರು. ಇನ್ನು ಟಿಪಾಯಿ ಮೇಲೆ ಬಾಟಲ್‌ ಇಟ್ಟು, ಬಾಟಲ್‌ಗ‌ಳ ಮೇಲೆ ಮರದ ಹಲಗೆ ಇಟ್ಟು, ಅದರ ಮೇಲೆ ನಿಂತು ವಿವಿಧ ಯೋಗಾಸನ ಮಾಡಿದರು. ಇದು ಭಕ್ತರನ್ನು ತುದಿಗಾಲಲ್ಲಿ ನಿಂತು ನೋಡುವಂತೆ ಮಾಡಿತು.

ದೃಷ್ಟಿ ವಿದ್ಯೆಯಿಂದ ಬಿತ್ತು ಟೆಂಗಿನಕಾಯಿ: ಒಬ್ಬ ಬಾಲಕ ಕೈಯಲ್ಲಿ ಟೆಂಗಿನ ಕಾಯಿ ಹಿಡಿದು ಕುಳಿತಿದ್ದರು. ಅವರ ಎದುರಿಗೆ ಕುಳಿತ ತ್ರಿನೇತ್ರ ವಿದ್ಯೆ ಕಲಿಯುವ ಬಾಲಕ, ತನ್ನ ದೃಷ್ಟಿ ವಿದ್ಯೆಯ ಮೂಲಕ ಎದುರಿಗೆ ಕುಳಿತ ಬಾಲಕನ ಕೈಯಲ್ಲಿದ್ದ ಟೆಂಗಿನಕಾಯಿ ಕೆಳಗೆ ಬೀಳಿಸಿದರು.

ಗುರುಕುಲದ ಮಕ್ಕಳು ಸರಸ್ವತಿ ಸ್ತೋತ್ರ, ಭರತನಾಟ್ಯ, ತ್ರಿನೇತ್ರ ವಿದ್ಯೆ, ಅಷ್ಟಧ್ಯಾಯ, ವೈದಿಕ ಗಣಿತ ಪ್ರದರ್ಶಿಸಿ ನೆರೆದವರ ಹುಬ್ಬೇರಿಸುವಂತೆ ಮಾಡಿದರು. ವೈದಿಕ ಗಣಿತದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಪಟ ಪಟನೆ ಕೂಡಿಸುವುದು, ಕಳೆಯುವುದು, ಗುಣಿಸುವುದು, ಭಾಗಾಕಾರ ಮಾಡುವುದು ಎಲ್ಲವನ್ನೂ ಸಲೀಸಾಗಿ ಹೇಳಿ ಗಮನ ಸೆಳೆದರು.

ಮಕ್ಕಳು ಪ್ರದರ್ಶಿಸಿರುವುದು ಯಾವುದೇ ತಂತ್ರಗಾರಿಕೆಯಲ್ಲ. ಇವು ಭಾರತೀಯ ಶಿಕ್ಷಣ ಪದ್ಧತಿಯಲ್ಲಿದ್ದ ವಿದ್ಯೆಗಳು. ಕನೇರಿ ಸಿದ್ಧಗಿರಿ ಮಠದ ಗುರುಕುಲದಲ್ಲಿ ಈ ವಿದ್ಯೆಗಳನ್ನು ಕಲಿಸಲಾಗುತ್ತಿದೆ. ನಿಶುಲ್ಕವಾಗಿ ಈ ವಿದ್ಯೆ ಕಲಿಸಲಾಗುತ್ತಿದ್ದು, ಈ ಮಕ್ಕಳು ಮುಂದೆ ಗೃಹಸ್ಥಾಶ್ರಮ ಅಥವಾ ವಟುಗಳಾಗಿ ಮುಂದುವರಿಯುವ ಅವಕಾಶವಿದೆ. ಆರು ವರ್ಷಗಳ ಬಳಿಕ ಅವರನ್ನು ವಿಂಗಡಿಸಿ, ಪ್ರತ್ಯೇಕ ಗುರುಕುಲ ಶಿಕ್ಷಣ ಕೊಡಿಸಲಾಗುತ್ತಿದೆ. ಇಂದು ಮಕ್ಕಳು ಪ್ರದರ್ಶನ ಮಾಡಿದ್ದೆಲ್ಲವೂ ಜ್ಞಾನದಿಂದ ಕಲಿತ ಗುರುಕುಲ ಶಿಕ್ಷಣ.
 ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ,
ಕೊಲ್ಲಾಪುರ-ಕನೇರಿ ಸಿದ್ಧಗಿರಿ ಮಠ

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಆಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಆಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.