ಮೈದುಂಬಿದ ಕೃಷ್ಣೆ, ರೈತರಲ್ಲಿ ಆಶಾಭಾವ

•ಕೃಷ್ಣಾ ನದಿಗೆ ಬರುತ್ತಿದೆ ಭಾರಿ ಪ್ರಮಾಣದ ನೀರು•ಎದುರಾಗಿದೆ ಪ್ರವಾಹ ಭೀತಿ•ಸಂಚಾರಕ್ಕೆ ತೊಂದರೆ

Team Udayavani, Jul 14, 2019, 9:42 AM IST

bk-tdy-2..

ಬೀಳಗಿ: ಗುಳಬಾಳ ಹತ್ತಿರ ತುಂಬಿ ಹರಿಯುತ್ತಿರುವ ಕೃಷ್ಣೆ.

ಬೀಳಗಿ: ಮಹಾರಾಷ್ಟ್ರ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಕೃಷ್ಣಾನದಿ ತುಂಬಿಕೊಂಡು ಹರಿಯುತ್ತಿದೆ. ಮೈದುಂಬಿಕೊಳ್ಳುತ್ತಿರುವ ಕೃಷ್ಣೆಯ ಕಂಡು ಇನ್ನೇನು ಏತ ನೀರಾವರಿ ಕಾಲುವೆಗೆ ನೀರು ಹರಿಯಲಿದೆ ಎಂಬ ಆಶಾಭಾವನೆ ರೈತರಲ್ಲಿ ಮೂಡಿದೆ.

ಅಂತರ್ಜಲ ವೃದ್ಧಿ: ಅಂತರ್ಜಲ ಮಟ್ಟ ಪಾತಾಳಕ್ಕಿಳಿದು ಕೊಳವೆಬಾವಿ, ಬಾವಿ, ಕೆರೆ-ಕಟ್ಟೆಗಳು ಬರಿದಾಗಿದ್ದವು. ಕೃಷ್ಣೆಯಲ್ಲಿ ಮತ್ತೆ ನೀರು ತುಂಬಿಕೊಂಡು ಬಂದಿರುವ ಕಾರಣ, ಅಂತರ್ಜಲ ವೃದ್ಧಿಯ ಆಶಾಭಾವನೆ ಮೊಳಕೆಯೊಡೆದಿದೆ. ದಿನದಿಂದ ದಿನಕ್ಕೆ ಆಲಮಟ್ಟಿ ಜಲಾನಯನ ಪ್ರದೇಶದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಕೃಷ್ಣೆಯ ನದಿಪಾತ್ರದಲ್ಲಿ ಎಲ್ಲ ಏತ ನೀರಾವರಿ ಜಾಕವೆಲ್ ಹತ್ತಿರ ಭರಪುರ ನೀರು ಬಂದಿದೆ.

80ಟಿಎಂಸಿ ಸಂಗ್ರಹ: ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ 516.7 ಇದೆ. ಜು. 2ರ ರಾತ್ರಿಯಿಂದ ಇದುವರೆಗೆ ಸುಮಾರು 60 ಟಿಎಂಸಿ ನೀರು ಹರಿದು ಬಂದಿದೆ. ಮೊದಲಿನ ಸಂಗ್ರಹ ಹಿಡಿದು ಜಲಾಶಯದಲ್ಲಿ ಈಗಾಗಲೆ ಒಟ್ಟು 80 ಟಿಎಂಸಿ ನೀರು ಸಂಗ್ರಹವಿದೆ. ಜೀವಜಲ 63 ಟಿಎಂಸಿ ಇದೆ ಎಂದು ಕೆಬಿಜಿಎನ್‌ಎಲ್ ಮುಖ್ಯ ಅಭಿಯಂತರ ಆರ್‌.ಪಿ.ಕುಲಕರ್ಣಿ ತಿಳಿಸಿದ್ದಾರೆ.

ನೀರಿಗಾಗಿ ಕಾಯುತ್ತಿದ್ದಾರೆ: ಏತ ನೀರಾವರಿ ಕಾಲುವೆಗೆ ನೀರು ಹರಿದ ತಕ್ಷಣವೇ ಬಿತ್ತನೆ ಮಾಡಬೇಕೆಂದು ರೈತರು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಈಗಾಗಲೇ ಬಿತ್ತನೆ ಮಾಡಿದವರೂ ಕೂಡ ಕಾಲುವೆ ನೀರನ್ನು ಅವಲಂಬಿಸಿದ್ದಾರೆ. ಹೀಗಾಗಿ ತಾಲೂಕಿನ ತೆಗ್ಗಿ-ಸಿದ್ದಾಪುರ, ರೊಳ್ಳಿ, ಲಿಂಗಾಪುರ ಎಸ್‌ಕೆ ಸೇರಿದಂತೆ ತಾಲೂಕಿನ ಹಲವು ಏತ ನೀರಾವರಿ ಕಾಲುವೆಗೆ ನೀರು ಹರಿಸುವುದು ಶೀಘ್ರಗತಿಯಲ್ಲಿ ನಡೆಯಬೇಕಿದೆ.

ಕೃಷ್ಣಾ ನದಿಗೆ ನೀರು ಸಾಕಷ್ಟು ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಾರಣ, ಜು. 15 ರೊಳಗೆ ತಾಲೂಕಿನ ತೆಗ್ಗಿ-ಸಿದ್ದಾಪುರ, ಸೊನ್ನ, ರೊಳ್ಳಿ, ಕಳಸಕೊಪ್ಪ ಸೇರಿದಂತೆ ಎಲ್ಲ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ಕೂಡಲೇ ನೀರು ಹರಿಸಲು ಕ್ರಮ ಕೈಗೊಳ್ಳಬೇಕೆಂದು ಕೆಬಿಜಿಎನ್‌ಎಲ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ.ಏತ ನೀರಾವರಿ ಕಾಲುವೆಗೆ ನೀರು ಬಿಡಲು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.•ಮುರುಗೇಶ ನಿರಾಣಿ, ಶಾಸಕರು, ಬೀಳಗಿ

ಕೆಬಿಜಿಎನ್‌ಎಲ್ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಜಲಾಶಯದ ನೀರಿನ ಸಂಗ್ರಹ ಹಾಗೂ ಕುಡಿಯಲು, ಕೆರೆ ತುಂಬಲು ಹಾಗೂ ನೀರಾವರಿಗೆ ಎಷ್ಟೆಷ್ಟು ನೀರು ತೆಗೆದಿರಿಸಬೇಕೆನ್ನುವುದು ಕುರಿತು ಚರ್ಚೆ, ನಿರ್ಧಾರವಾಗಬೇಕು. ಈ ಎಲ್ಲ ಪ್ರಕ್ರಿಯೆಗೆ ವಿಳಂಬವಾಗುತ್ತದೆ. ಆದರೂ, ಏತ ನೀರಾವರಿ ಯೋಜನೆಗಳಿಗೆ ಎಷ್ಟು ಪ್ರಮಾಣ ನೀರು ಬಿಡಬೇಕಾಗುತ್ತದೆ ಎನ್ನುವ ಕುರಿತು ನೀರಾವರಿ ಸಲಹಾ ಸಮಿತಿ ಗಮನಕ್ಕೆ ನೀಡುವ ಮೂಲಕ ಕೂಡಲೇ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು.•ಆರ್‌.ಪಿ.ಕುಲಕರ್ಣಿ, ಕೆಬಿಜಿಎನ್‌ಎಲ್ ಮುಖ್ಯ ಅಭಿಯಂತರರು

 

•ರವೀಂದ್ರ ಕಣವಿ

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.