ಕೂಡಲಸಂಗಮದಲ್ಲಿ ಬ್ರಿಗೇಡ್‌ ಶಕ್ತಿ ಪ್ರದರ್ಶನ


Team Udayavani, Jan 27, 2017, 3:50 AM IST

170126kpn49.jpg

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿ ಹಲವರ ವಿರೋಧದ ನಡುವೆಯೇ ಕೂಡಲ ಸಂಗಮದಲ್ಲಿ ಸಂಗೊಳ್ಳಿ ರಾಯಣ್ಣ ಬಲಿದಾನ ದಿನ ಹಾಗೂ ಬ್ರಿಗೇಡ್‌ ಸಮಾವೇಶ ಗುರುವಾರ ನಡೆದಿದೆ. 

ಸಹಸ್ರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಮೂಲಕ ಬ್ರಿಗೇಡ್‌ ಸಂಸ್ಥಾಪಕ ಕೆ.ಎಸ್‌.ಈಶ್ವರಪ್ಪ, ತಮ್ಮ ಶಕ್ತಿ ಪ್ರದರ್ಶಿಸಿದಂತಾಯಿತು. 

ಬ್ರಿಗೇಡ್‌ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಿಜೆಪಿಯ ಹಲವರಿಗೆ ನಡುಕ ಹುಟ್ಟಿದೆ ಎಂದು ಟಾಂಗ್‌ ನೀಡಿದ ಈಶ್ವರಪ್ಪ, ಇದು ಕೇವಲ ಕೆಲ ಜಿಲ್ಲೆಗಳ ವ್ಯಾಪ್ತಿಯ ಸಮಾವೇಶ. ಮುಂದೆ ರಾಜ್ಯಮಟ್ಟದ ಬ್ರಿಗೇಡ್‌ ಸಮಾವೇಶ ನಡೆಸಲಾಗುವುದು. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು  ತಿಳಿಸಿದ್ದಾರೆ.
 
ಕೂಡಲಸಂಗಮದ ಬಸವಣ್ಣನವರ ವೇದಿಕೆಯಲ್ಲಿ  ರಾಯಣ್ಣ ಬ್ರಿಗೇಡ್‌ನಿಂದ ರಾಯಣ್ಣ ಬಲಿದಾನ ದಿನ ಹಾಗೂ ಸಮಾವೇಶ ನಡೆಯಿತು. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಬೀದರ, ಕಲಬುರಗಿ, ರಾಯಚೂರು, ಬಳ್ಳಾರಿ, ಉತ್ತರ ಕನ್ನಡ ಹಾಗೂ ಯಾದಗಿರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಂದ ಜನತೆ ಅಪಾರ ಸಂಖ್ಯೆಯಲ್ಲಿ ಆಗಮಿಸಿತ್ತು.

ಸಮಾವೇಶವನ್ನು ಉದ್ಘಾಟಿಸಿದ ಈಶ್ವರಪ್ಪ, ಬ್ರಿಗೇಡ್‌ ಮೇಲೆ ನಂಬಿಕೆ- ವಿಶ್ವಾಸವಿಟ್ಟು 2 ಲಕ್ಷಕ್ಕೂ ಅಧಿಕ ಜನ ಸೇರಿ ವಿಶ್ವರೂಪ ದರ್ಶನ ಮಾಡಿಸಿದ್ದೀರಿ. ಇದು 9 ಜಿಲ್ಲೆಗಳ ವ್ಯಾಪ್ತಿ ಸಮಾವೇಶ. ಮುಂದೆ ರಾಜ್ಯ ಸಮಾವೇಶ ನಡೆಸಿ ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಆಹ್ವಾನಿಸಲಾಗುವುದು ಎಂದರು.

ಕೃಷ್ಣ ಹೊಟ್ಟೆಯಲ್ಲಿದ್ದಾಗಲೇ ಕಂಸನಿಗೆ ನಡುಕ ಹುಟ್ಟಿತ್ತು. ಬ್ರಿಗೇಡ್‌ ಹುಟ್ಟಿ ಕೇವಲ ಆರು ತಿಂಗಳಾಗಿದೆ. ಕೃಷ್ಣ ಬಾಯಿ ಬಿಟ್ಟಾಗ ಬ್ರಹ್ಮಾಂಡ ಕಾಣಿಸಿದಂತೆ ಇಡೀ ಸಮಾಜದ ಎಲ್ಲ ಜಾತಿಯ ಜನರಿಗಾಗಿ ಬ್ರಿಗೇಡ್‌ ಹೋರಾಟ ನಡೆಸಲಿದೆ. ಬ್ರಿಗೇಡ್‌ ಕಂಡರೆ ಸಿಎಂ ಸಿದ್ದರಾಮಯ್ಯ ಸಹಿತ, ಬಿಜೆಪಿಯ ಕೆಲವರಿಗೆ ನಡುಕ ಉಂಟಾಗಿದೆ. ಇದು ಏಕೆ? ಎಂದು ಪ್ರಶ್ನಿಸಿದ ಅವರು, ಬ್ರಿಗೇಡ್‌ ಯಾವುದೇ ವ್ಯಕ್ತಿ- ಪಕ್ಷದ ಪರವಾಗಿಲ್ಲ. ಹಿಂದುಳಿದವರು, ದಲಿತರಿಗೆ ಉದ್ಯೋಗ, ಶಿಕ್ಷಣ ಹಾಗೂ ಸೂರು ಒದಗಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಎಂದರು.

ಸ್ವಾಮೀಜಿ- ನಾಯಕರಿಗೆ ಫೋನ್‌ ಬೆದರಿಕೆ:
ಸಮಾವೇಶಕ್ಕೆ ಹಲವಾರು ಸ್ವಾಮೀಜಿಗಳು, ರಾಜಕೀಯ ನಾಯಕರು ಬರುವವರಿದ್ದರು. ಆದರೆ, ಅವರಿಗೆಲ್ಲ ಫೋನ್‌ ಮಾಡಿ, ಬ್ರಿಗೇಡ್‌ ಸಮಾವೇಶಕ್ಕೆ ಯಾರೂ ಹೋಗಬೇಡಿ ಎಂಬ ಬೆದರಿಕೆ ಹಾಕಲಾಗಿದೆ. ಎಲ್ಲ ಮಠಾಧೀಶರಿಗೂ ಗೌರವ ಸಿಗಬೇಕು. ಅಲ್ಲಿವರೆಗೂ ಬ್ರಿಗೇಡ್‌ ಹೋರಾಟ ನಡೆಯಲಿದೆ ಎಂದರು.

ವರದಿ ಜಾರಿ ಮಾಡಿ:
ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿಗಳು, ತಾವು ಸದನದಲ್ಲಿ ಹೇಳಿದ್ದನ್ನು ತಕ್ಷಣ ಜಾರಿಗೆ ತರಬೇಕು. ಜನಸಂಖ್ಯೆವಾರು ಮೀಸಲಾತಿ ನೀಡುವ ಕುರಿತು ಹಾಗೂ ಕಾಂತರಾಜ್‌ ವರದಿಯನ್ನು  ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಗಣ್ಯರು ಭಾಗಿ
ಮೇಲ್ಮನೆ ಸದಸ್ಯ ಸೋಮಣ್ಣ ಬೇವಿನಮರದ, ಮಾಜಿ ಸಚಿವರಾದ ಎಸ್‌.ಎ. ರವೀಂದ್ರನಾಥ, ಸೊಗಡು ಶಿವಣ್ಣ, ಮಾಜಿ ಶಾಸಕರಾದ ನೇಮಿರಾಜ ನಾಯ್ಕ, ಬಸವರಾಜ ನಾಯಕ, ಶಿವಯೋಗಿಸ್ವಾಮಿ, ಜಗದೀಶ್‌ ಮೆಟಗುಡ್ಡ, ಬ್ರಿಗೇಡ್‌ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷಪ್ಪ, ಕೆ.ಮುಕುಡಪ್ಪ, ಐಪಿಎಸ್‌ ನಿವೃತ್ತ ಅಧಿಕಾರಿ ಸಂಗ್ರಾಮ್‌ಸಿಂಗ್‌, ಕನಕ ಗುರುಪೀಠ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ, ಬೆಂಗಳೂರಿನ ಮಾಚಿದೇವ ಪೀಠದ ಶಿವಾನಂದಪುರಿ ಸ್ವಾಮೀಜಿ ಸೇರಿದಂತೆ 15ಕ್ಕೂ ಹೆಚ್ಚು ಸ್ವಾಮೀಜಿಗಳು ಪಾಲ್ಗೊಂಡಿದ್ದರು.

ಯಡಿಯೂರಪ್ಪ ಸಿಎಂ ಆಗಲಿ
ಈಶ್ವರಪ್ಪ ಭಾಷಣದ ವೇಳೆ ಜನತೆ ನೀವೇ ಸಿಎಂ ಆಗಬೇಕು ಎಂದು ಕೂಗಿದರು. ಆಗ ಉತ್ತರಿಸಿದ ಈಶ್ವರಪ್ಪ, ನನ್ನ ವೈಯಕ್ತಿಕ ಸ್ವಾತಂತ್ರ್ಯ, ನನ್ನ ಪಕ್ಷ ನಿಷ್ಠೆಗೆ ಯಾರೂ ಅಡ್ಡ ಬರಬೇಡಿ. ಬಿಜೆಪಿಯ ಮುಂದಿನ ಸಿಎಂ ಅಭ್ಯರ್ಥಿ ಯಡಿಯೂರಪ್ಪ ಅಂತ ನಮ್ಮ ನಾಯಕರು ಘೋಷಿಸಿದ್ದಾರೆ. ನಾವು ಅದಕ್ಕೆ ಬದ್ಧರಾಗಿದ್ದೇವೆ. ಯಡಿಯೂರಪ್ಪ ಅವರೇ ಸಿಎಂ ಆಗಲಿ. ಆದರೆ, ಹಿಂದುಳಿದವರು, ದಲಿತರು ಹಾಗೂ ಎಲ್ಲ ವರ್ಗಗಗಳಲ್ಲಿ ಇರುವ ಬಡವರನ್ನು ನಿರ್ಲಕ್ಷ್ಯ ಮಾಡಿದರೆ, ಬ್ರಿಗೇಡ್‌ ಸುಮ್ಮನೆ ಇರಲ್ಲ ಎಂದು ಗುಡುಗಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.