ಕುಳಗೇರಿ ಕ್ರಾಸ್‌: ಕುಳಗೇರಿಯಲ್ಲಿ ಮುಖ್ಯ ಕಾಲುವೆ ನೆಲಸಮ


Team Udayavani, Jan 12, 2024, 5:25 PM IST

ಕುಳಗೇರಿ ಕ್ರಾಸ್‌: ಕುಳಗೇರಿಯಲ್ಲಿ ಮುಖ್ಯ ಕಾಲುವೆ ನೆಲಸಮ

ಉದಯವಾಣಿ ಸಮಾಚಾರ
ಕುಳಗೇರಿ ಕ್ರಾಸ್‌: ಸುಮಾರು 40 ವರ್ಷಗಳ ಹಿಂದೆ ರೈತರ ಅನುಕೂಲಕ್ಕೆ ನೀರಾವರಿ ಉದ್ಧೇಶಕ್ಕೆ ನಿರ್ಮಿಸಲಾದ ಮಲಪ್ರಭಾ ಎಡದಂಡೆ ಮುಖ್ಯ ಕಾಲುವೆ ನೆಲಸಮ ಮಾಡಿ ಭೂಸ್ವಾಧೀನ ಮಾಡಿಕೊಂಡು ನಿವೇಶನ ನಿರ್ಮಿಸುತ್ತಿದ್ದರೂ ಸಂಬಂಧಿಸಿದ ನೀರಾವರಿ ಅ ಧಿಕಾರಿಗಳು ಮಾತ್ರ ಗಮನಹರಿಸುತ್ತಿಲ್ಲ ಎಂಬ ಆರೋಪ ರೈತರಿಂದ ಕೇಳಿಬರುತ್ತಿದೆ.

ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಕಾಕನೂರು ನೀರಾವರಿ ನಿಗಮದವರ ವ್ಯಾಪ್ತಿಯ ಮಲಪ್ರಭಾ ಎಡದಂಡೆಯ ಹಲವಾರು ಕಾಲುವೆಗಳು ಸದ್ಯ ಮುಚ್ಚಿ ಹೋಗಿವೆ. ಗ್ರಾಮದ ಹೃದಯ ಭಾಗದಲ್ಲಿ ನೀರು ಹರಿಯುವ ಮಲಪ್ರಭಾ ಎಡದಂಡೆಯ 38ರ ಹಂಚು ಕಾಲುವೆಯ ದಿಕ್ಕು ಬದಲಿಸಿದ ಕೆಲವರು ನಿವೇಶನ ನಿರ್ಮಾಣಕ್ಕೆ ಮುಖ್ಯ ಕಾಲುವೆ ಮುಚ್ಚಿ ಬೇರೆ ಕಡೆ ನೀರು ಹರಿಸಲಾಗುತ್ತಿದೆ. ಈ ಕುರಿತು ಸಾಕಷ್ಟು ಬಾರಿ ರೈತರು ಮನವಿ ಮಾಡಿದ್ದಾರೆ. ಕ್ಯಾರೆ ಎನ್ನದ ನೀರಾವರಿ ಅಧಿಕಾರಿಗಳು ಸಮಸ್ಯೆ ಬಗೆಹರಿಸುತ್ತೇವೆ ಎಂದು ಹಾರಿಕೆ ನೀಡುತ್ತಿದ್ದಾರೆ ಎಂಬುದು ರೈತರ ಆರೋಪವಾಗಿದೆ.

ಅರ್ಧಕ್ಕೆ ನಿಂತ ಕಾಮಗಾರಿ: ಸದ್ಯ ಮಲಪ್ರಭಾ ಎಡದಂಡೆ ಮರು ಕಾಲುವೆ ನಿರ್ಮಾಣ(ರೀಮಾಡ್ಲಿಂಗ್‌) ಹೆಸರಲ್ಲಿ ಮರು ಜೀವ
ಪಡೆದಿದ್ದು, ಗುತ್ತಿಗೆದಾರ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿ ಹೋಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅಪೂರ್ಣ ಕಾಮಗಾರಿಯಿಂದ ರೈತರ ಜಮಿನುಗಳಿಗೆ ಸರಿಯಾಗಿ ನೀರು ತಲುಪುತ್ತಿಲ್ಲ  ಎಂದು ರೈತರು ಗೋಳಾಡುತ್ತಿದ್ದಾರೆ.

ನೀರಾವರಿ ಅಧಿಕಾರಿಗಳ ನಿರ್ಲಕ್ಷ್ಯ: ಸದ್ಯ ಗ್ರಾಮದಲ್ಲಿ ಈ ಹಿಂದೆ 15 ಅಡಿ ರಸ್ತೆ ಸಮೇತ ಇದ್ದ ಕಾಲುವೆ ನೆಲಸಮ ಮಾಡಿ ನಿವೇಶನಗಳು ನಿರ್ಮಾಣ ಮಾಡುತ್ತಿದ್ದರೂ ಅಧಿಕಾರಿಗಳು ಮಾತ್ರ ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು, ರೈತರು ಆರೋಪಿಸುತ್ತಿದ್ದಾರೆ. ಸರಿಯಾದ ರಸ್ತೆ ಇಲ್ಲದ ಕಾರಣ ರೈತರ ಕೃಷಿ ಚಟುವಟಿಕೆಗೆ ತೊಂದರೆ ಅನುಭವಿಸುತ್ತಿದ್ದಾರೆ.

ಮುಖ್ಯ ಕಾಲುವೆಗಳು ನೆಲಸಮ: ಗ್ರಾಮದಲ್ಲಿ ನೀರು ಹರಿಯುವ ಸಾಕಷ್ಟು ಮುಖ್ಯ ಕಾಲುವೆಗಳನ್ನು ನೆಲಸಮ ಮಾಡಿ ಬಿಲ್ಡಿಂಗ್‌ ನಿರ್ಮಿಸಲಾಗಿದೆ. ಅದೇ ಪರಿಸ್ಥಿತಿಯಲ್ಲಿ ಮತ್ತೂಂದು ಮುಖ್ಯ ಕಾಲುವೆ ಮುಚ್ಚಿ ಹೋಗಿದ್ದು, ನೀರಾವರಿ ಅಧಿಕಾರಿಗಳು
ಮಾತ್ರ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.

ಮುಖ್ಯ ಕಾಲುವೆ ನೆಲಸಮ ಮಾಡುತ್ತಿರುವ ಪರಿಣಾಮ ಕೆಳಭಾಗದಲ್ಲಿರುವ ರೈತರಿಗೆ ನೀರು ಬಾರದೆ ತೊಂದರೆ ಅನುಭವಿಸುತ್ತಿದ್ದಾರೆ. ರೈತರ ಜಮಿನುಗಳಿಗೆ ನೀರು ಹರಿಸುವ ಮುಖ್ಯ ಕಾಲುವೆಗಳನ್ನ ಅಕ್ರಮವಾಗಿ ನೆಲಸಮ ಮಾಡುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಆದಷ್ಟು ಬೇಗ ರಸ್ತೆ ಸಮೇತ ಕಾಲುವೆ ನಿರ್ಮಿಸಿ ರೈತರಿಗೆ ಅನುಕೂಲ
ಮಾಡಬೇಕು. ಒತ್ತುವರಿ ತಡೆಯದೇ ಇದ್ದರೆ ಉಗ್ರ ಹೋರಾಟಕ್ಕೂ ಸಿದ್ದ ಎಂದು ರೈತರು ನೀರಾವರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನನಗೆ ಏನೂ ಗೊತ್ತಿಲ್ಲ. ನಾನು ಈ ಕಚೇರಿಗೆ ಬಂದು ಮೂರು ತಿಂಗಳಾಗಿದ್ದು, ಸದ್ಯ ಗಮನಹರಿಸಿ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಸಿಬ್ಬಂದಿ ಈಗಾಗಲೇ ಸರ್ವೇ ಕಾರ್ಯ ಮಾಡಿದ್ದಾರೆ. ನೋಟಿಸ್‌ ನೀಡಿದ್ದಾರಂತೆ. ಸಂಪೂರ್ಣ ಮಾಹಿತಿ ಪಡೆದು ಸದ್ಯ ಇನ್ನೊಂದು
ನೋಟಿಸ್‌ ನೀಡಿ ಕಾಲುವೆ ನಿರ್ಮಾಣ ಕೆಲಸ ಆರಂಭಿಸುತ್ತೇವೆ.
ಮಲ್ಲಿಕಾರ್ಜುನ ಡಂಬಳಿಕರ್‌,ಕಾಕನೂರು ನೀರಾವರಿ ಇಲಾಖೆ ಎಇಇ.

*ಮಹಾಂತಯ್ಯ ಹಿರೇಮಠ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.